ಗರ್ಭಿಣಿ ಸಾವು ತಡೆಗೆ ತಂತ್ರಜ್ಞಾನ ಅಗತ್ಯ
Team Udayavani, Dec 20, 2018, 3:12 PM IST
ಸಿಂಧನೂರು: ಗಂಡಾಂತರ ಗರ್ಭ ಮತ್ತು ಪ್ರಸೂತಿ ಸಮಸ್ಸೆಗಳು ಕಡಿಮೆಯಾಗಿದ್ದರೂ, ಗ್ರಾಮೀಣ ಪ್ರದೇಶಗಲ್ಲಿ ಸೌಲಭ್ಯಗಳ ಕೊರತೆಯಿಂದ ಗರ್ಭಿಣಿಯರ ಸಾವಿನ ಪ್ರಮಾಣ ಕಡಿಮೆಯಾಗಿಲ್ಲ. ಗ್ರಾಮೀಣ ಪ್ರದೇಶದಲ್ಲಿನ ಪ್ರಸೂತಿ ತಜ್ಞರು ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಗರ್ಭಿಣಿಯರ ಸಾವಿನ ಪ್ರಮಾಣ ಕಡಿಮೆ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ| ಬಸವಪ್ರಭು ಪಾಟೀಲ ಅಭಿಪ್ರಾಯ ಪಟ್ಟರು.
ನಗರದ ಐಎಂಎ ಭವನದಲ್ಲಿ ರಾಯಚೂರು ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರ ಸಂಘ ಹಾಗೂ ಭಾರತೀಯ
ವೈದ್ಯಕೀಯ ಸಂಘ ಸಿಂಧನೂರು ಘಟಕದ ಸಹಯೋಗದಲ್ಲಿ ಏರ್ಪಡಿಸಿದ್ದ “ಗಂಡಾಂತರ (ಆತಂಕದ) ಗರ್ಭ ಹಾಗೂ ಪ್ರಸೂತಿ ನಿರ್ವಹಣೆ’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಇಂಥ ಕಾರ್ಯಾಗಾರಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆಯೋಜಿಸಬೇಕು. ಅಂದಾಗ ಮಹಿಳೆಯರಲ್ಲಿನ ಸಂದೇಹಗಳನ್ನು ನಿವಾರಣೆ ಮಾಡಲು ಸಾಧ್ಯ ಎಂದರು.
ಸಿಂಧನೂರು ಐಎಂಎ ಅಧ್ಯಕ್ಷ ಡಾ| ಬಸವನಗೌಡ ಅಧ್ಯಕ್ಷತೆ ವಹಿಸಿದ್ದರು. ಸ್ತ್ರೀರೋಗ ತಜ್ಞರ ಜಂಟಿ ಕಾರ್ಯದರ್ಶಿ ಡಾ|
ಶಾಂತಾ ಶರಣ ಸ್ವಾಗತಿಸಿದರು. ಡಾ| ಪದ್ಮಾ ಪಾಟೀಲ ವಂದಿಸಿದರು. ಹಿರಿಯ ಪ್ರಸೂತಿ ತಜ್ಞ ಡಾ| ಜಗದೀಶ ಮಾದಿನೂರ ಅವರನ್ನು ಸನ್ಮಾನಿಸಲಾಯಿತು. ಸ್ಪೇನ್ ದೇಶದ ಹಿರಿಯ ಸ್ತ್ರೀರೋಗ ತಜ್ಞ ಡಾ| ಮ್ಯಾನುಯೆಲ್ ಫೀಲೋಲ್, ನಾಗ್ಪುರದ ಡಾ| ಆಶಿಶ್ ಕುಬಡೆ, ಬಳ್ಳಾರಿಯ ವಿಮ್ಸ್ ಪ್ರಾಧ್ಯಾಪಕ ಡಾ| ವೀರೇಂದ್ರ ಕುಮಾರ, ಬೆಟ್ಟದೂರು ಆಸ್ಪತ್ರೆಯ ಡಾ| ಜಯಪ್ರಕಾಶ ಪಾಟೀಲ ಹಾಗೂ ಡಾ| ರಾಜು ಗಿರಡ್ಡಿ ಉಪನ್ಯಾಸ ನೀಡಿದರು. ಜಿಲ್ಲೆ ಮಾತ್ರವಲ್ಲದೇ ಕೊಪ್ಪಳ, ಬಳ್ಳಾರಿ ಮತ್ತು ಅನಂತಪುರ ಜಿಲ್ಲೆಗಳ ಸ್ತ್ರೀರೋಗ ತಜ್ಞರು ಭಾಗವಹಿಸಿದ್ದರು. ಸ್ತ್ರೀರೋಗ ತಜ್ಞರ ಸಂಘದ
ಅಧ್ಯಕ್ಷೆ ಡಾ| ಶ್ರೀಲತಾ ಪಾಟೀಲ, ಸಿಂಧನೂರು ಐಎಂಎ ಕಾರ್ಯದರ್ಶಿ ಡಾ| ವಿಶ್ವನಾಥ ರೆಡ್ಡಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು