ಉಪ ಕಸುಬಿನಿಂದ ರೈತರ ಆರ್ಥಿಕ ಸ್ಥಿತಿ ಸುಧಾರಣೆ
Team Udayavani, Jan 7, 2019, 10:53 AM IST
ಸಿಂಧನೂರು: ರೈತರು ಕೃಷಿ ಜೊತೆಗೆ ಇದಕ್ಕೆ ಪೂರಕವಾದ ಉಪ ಕಸುಬುಗಳನ್ನು ಮಾಡುವುದು ಇಂದಿನ ಅಗತ್ಯವಾಗಿದೆ.
ಇದರಿಂದ ಕೃಷಿಯಲ್ಲಿ ಹಾನಿ ತಪ್ಪುವ ಜೊತೆಗೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ ಎಂದು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಪಶು ಹಾಗೂ ಮತ್ಸ್ಯ ಮೇಳದ ಎರಡನೇ ದಿನ ರವಿವಾರ ಶ್ವಾನ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯದಲ್ಲಿ ರೈತರು ಸಾಲ ಮತ್ತು ಕೃಷಿಯಲ್ಲಿ ಹಾನಿ ಅನುಭವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಹೆಚ್ಚುತ್ತಿದೆ. ಇದನ್ನು ಗಮನಿಸಿ ರೈತರನ್ನು ಉಪ ಕಸುಬಿನತ್ತ ಆಕರ್ಷಿಸುವ ಉದ್ದೇಶದಿಂದ ಸರ್ಕಾರ ಪಶು ಮತ್ತು ಮತ್ಸ್ಯ ಮೇಳ ಆಯೋಜಿಸಿದೆ. ಇದನ್ನು ಪ್ರತಿ ವರ್ಷ ಆಯೋಜಿಸಲಾಗುವುದು. ಪ್ರತಿಯೊಬ್ಬ ರೈತರು ಇಲ್ಲಿ ಮಾಹಿತಿ ಪಡೆದು ಉಪ ಕಸುಬಿನಲ್ಲಿ ತೊಡಗಬೇಕು. ಅಂದಾಗ ಮಾತ್ರ ಸರ್ಕಾರದ ಪ್ರಯತ್ನ ಸಾರ್ಥಕವಾಗುವ ಜೊತೆಗೆ ರೈತರ ಕುಟುಂಬಗಳು ಆರ್ಥಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ ಎಂದರು.
ಶ್ವಾನ ಪ್ರದರ್ಶನದಲ್ಲಿ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಕೇಂದ್ರಗಳಿಂದ 20ಕ್ಕೂ ಹೆಚ್ಚು ತಳಿಗಳು ಭಾಗವಹಿಸಿವೆ. ಒಂದೊಂದು ಶ್ವಾನ ತಳಿಗಳು ವಿಭಿನ್ನವಾಗಿವೆ. ಪಶು-ಮತ್ಸ್ಯ ಮೇಳದಲ್ಲಿ ಹಸು, ರಾಸುಗಳು, ಮೀನುಗಳು, ಮೊಲ, ಹಂದಿ, ಕೋಳಿ ಪ್ರದರ್ಶನದಲ್ಲಿಡಲಾಗಿದೆ. ಯುವಕರು, ರೈತರು ಇದರ ಪ್ರಯೋಜನ ಪಡೆದು ಪಶು, ಮೀನು ಸಾಕಾಣಿಕೆಯಲ್ಲಿ ತೊಡಗಿದರೆ ನಿರುದ್ಯೋಗ ಸಮಸ್ಯೆ ನಿವಾರಣೆ ಆಗಲಿದೆ.
ಹಾಗಾಗಿ ನಾವು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರದರ್ಶನ ವೀಕ್ಷಣೆಗೆ ಆಹ್ವಾನಿಸಿದ್ದೇವೆ. ರೈತರು ಆಸಕ್ತಿ ವಹಿಸಿ ಪ್ರದರ್ಶನ ವೀಕ್ಷಣೆಗೆ ಆಗಮಿಸುತ್ತಿರುವುದು ನೆಮ್ಮದಿ ತಂದಿದೆ ಎಂದರು.
ಮುಂದಿನ ದಿನಗಳಲ್ಲಿ ನಮ್ಮ ಇಲಾಖೆಯಿಂದ ಇನ್ನೂ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಇದಕ್ಕೆ ಸಿಎಂ ಕುಮಾರಸ್ವಾಮಿ ಸಹಕಾರ ನೀಡಲಿದ್ದಾರೆ. ಪ್ರತಿವರ್ಷ ಮೇಳ ನಡೆಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದರು.
ಪಶು ಸಂಗೋಪನೆ ಇಲಾಖೆ ಆಯುಕ್ತ ಯು.ಪಿ.ಸಿಂಗ್ ಮಾತನಾಡಿ, ಈ ಬಾರಿ ವಿಭಿನ್ನ ರೀತಿಯಲ್ಲಿ ಇಲಾಖೆಯಿಂದ ಪಶು-ಮತ್ಸ್ಯ ಮೇಳ ಆಯೋಜಿಸಿ ರೈತರಿಗೆ ಪ್ರೋತ್ಸಾಹಿಸುವ ಕೆಲಸ ಮಾಡಿದ್ದೇವೆ. ಇನ್ನುಮುಂದೆ ರಾಜ್ಯದ ಎಲ್ಲ ಗ್ರಾಮಗಳಲ್ಲೂ ಉಪ ಕಸುಬುಗಳ ಕುರಿತು ರೈತರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುವುದು ಎಂದರು.
ಜೆಡಿಎಸ್ ವಕ್ತಾರ ಬಸವರಾಜ ನಾಡಗೌಡ, ಸಿಪಿಐ ನಾಗರಾಜ ಕಮ್ಮಾರ, ಪಿಎಸ್ಐ ಮಂಜುನಾಥ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ