ಉಪ ಕಸುಬಿನಿಂದ ರೈತರ ಆರ್ಥಿಕ ಸ್ಥಿತಿ ಸುಧಾರಣೆ


Team Udayavani, Jan 7, 2019, 10:53 AM IST

ray-1.jpg

ಸಿಂಧನೂರು: ರೈತರು ಕೃಷಿ ಜೊತೆಗೆ ಇದಕ್ಕೆ ಪೂರಕವಾದ ಉಪ ಕಸುಬುಗಳನ್ನು ಮಾಡುವುದು ಇಂದಿನ ಅಗತ್ಯವಾಗಿದೆ.
ಇದರಿಂದ ಕೃಷಿಯಲ್ಲಿ ಹಾನಿ ತಪ್ಪುವ ಜೊತೆಗೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ ಎಂದು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಪಶು ಹಾಗೂ ಮತ್ಸ್ಯ ಮೇಳದ ಎರಡನೇ ದಿನ ರವಿವಾರ ಶ್ವಾನ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ರೈತರು ಸಾಲ ಮತ್ತು ಕೃಷಿಯಲ್ಲಿ ಹಾನಿ ಅನುಭವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಹೆಚ್ಚುತ್ತಿದೆ. ಇದನ್ನು ಗಮನಿಸಿ ರೈತರನ್ನು ಉಪ ಕಸುಬಿನತ್ತ ಆಕರ್ಷಿಸುವ ಉದ್ದೇಶದಿಂದ ಸರ್ಕಾರ ಪಶು ಮತ್ತು ಮತ್ಸ್ಯ ಮೇಳ ಆಯೋಜಿಸಿದೆ. ಇದನ್ನು ಪ್ರತಿ ವರ್ಷ ಆಯೋಜಿಸಲಾಗುವುದು. ಪ್ರತಿಯೊಬ್ಬ ರೈತರು ಇಲ್ಲಿ ಮಾಹಿತಿ ಪಡೆದು ಉಪ ಕಸುಬಿನಲ್ಲಿ ತೊಡಗಬೇಕು. ಅಂದಾಗ ಮಾತ್ರ ಸರ್ಕಾರದ ಪ್ರಯತ್ನ ಸಾರ್ಥಕವಾಗುವ ಜೊತೆಗೆ ರೈತರ ಕುಟುಂಬಗಳು ಆರ್ಥಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ ಎಂದರು.
 
ಶ್ವಾನ ಪ್ರದರ್ಶನದಲ್ಲಿ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಕೇಂದ್ರಗಳಿಂದ 20ಕ್ಕೂ ಹೆಚ್ಚು ತಳಿಗಳು ಭಾಗವಹಿಸಿವೆ. ಒಂದೊಂದು ಶ್ವಾನ ತಳಿಗಳು ವಿಭಿನ್ನವಾಗಿವೆ. ಪಶು-ಮತ್ಸ್ಯ ಮೇಳದಲ್ಲಿ ಹಸು, ರಾಸುಗಳು, ಮೀನುಗಳು, ಮೊಲ, ಹಂದಿ, ಕೋಳಿ ಪ್ರದರ್ಶನದಲ್ಲಿಡಲಾಗಿದೆ. ಯುವಕರು, ರೈತರು ಇದರ ಪ್ರಯೋಜನ ಪಡೆದು ಪಶು, ಮೀನು ಸಾಕಾಣಿಕೆಯಲ್ಲಿ ತೊಡಗಿದರೆ ನಿರುದ್ಯೋಗ ಸಮಸ್ಯೆ ನಿವಾರಣೆ ಆಗಲಿದೆ.

ಹಾಗಾಗಿ ನಾವು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರದರ್ಶನ ವೀಕ್ಷಣೆಗೆ ಆಹ್ವಾನಿಸಿದ್ದೇವೆ. ರೈತರು ಆಸಕ್ತಿ ವಹಿಸಿ ಪ್ರದರ್ಶನ ವೀಕ್ಷಣೆಗೆ ಆಗಮಿಸುತ್ತಿರುವುದು ನೆಮ್ಮದಿ ತಂದಿದೆ ಎಂದರು.

ಮುಂದಿನ ದಿನಗಳಲ್ಲಿ ನಮ್ಮ ಇಲಾಖೆಯಿಂದ ಇನ್ನೂ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಇದಕ್ಕೆ ಸಿಎಂ ಕುಮಾರಸ್ವಾಮಿ ಸಹಕಾರ ನೀಡಲಿದ್ದಾರೆ. ಪ್ರತಿವರ್ಷ ಮೇಳ ನಡೆಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದರು.

ಪಶು ಸಂಗೋಪನೆ ಇಲಾಖೆ ಆಯುಕ್ತ ಯು.ಪಿ.ಸಿಂಗ್‌ ಮಾತನಾಡಿ, ಈ ಬಾರಿ ವಿಭಿನ್ನ ರೀತಿಯಲ್ಲಿ ಇಲಾಖೆಯಿಂದ ಪಶು-ಮತ್ಸ್ಯ ಮೇಳ ಆಯೋಜಿಸಿ ರೈತರಿಗೆ ಪ್ರೋತ್ಸಾಹಿಸುವ ಕೆಲಸ ಮಾಡಿದ್ದೇವೆ. ಇನ್ನುಮುಂದೆ ರಾಜ್ಯದ ಎಲ್ಲ ಗ್ರಾಮಗಳಲ್ಲೂ ಉಪ ಕಸುಬುಗಳ ಕುರಿತು ರೈತರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುವುದು ಎಂದರು.

ಜೆಡಿಎಸ್‌ ವಕ್ತಾರ ಬಸವರಾಜ ನಾಡಗೌಡ, ಸಿಪಿಐ ನಾಗರಾಜ ಕಮ್ಮಾರ, ಪಿಎಸ್‌ಐ ಮಂಜುನಾಥ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.