ಒಂದೇ ದಿನಕ್ಕೆ ಸಾವಿರಕ್ಕೂ ಅಧಿಕ ರೈತರ ನೋಂದಣಿ


Team Udayavani, Jan 11, 2019, 10:10 AM IST

ray-2.jpg

ಜಾಲಹಳ್ಳಿ: ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸಿದ್ದು, ಹೆಸರು ನೋಂದಣಿಗೆ ರೈತರು ಮುಗಿಬಿದ್ದಿದ್ದರಿಂದ ನೂಕುನುಗ್ಗಲು ಉಂಟಾಯಿತು. ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ರೈತರು ಹೆಸರು ನೋಂದಾಯಿಸಿದ್ದು, ಸುಮಾರು ಮೂರು ಸಾವಿರ ಗಡಿ ದಾಟುವ ಲಕ್ಷಣ ಇದೆ.

ತೊಗರಿ ಬೆಳೆದ ರೈತರು ಪಹಣಿ ಪತ್ರ, ಆಧಾರ ಕಾರ್ಡ್‌, ಬ್ಯಾಂಕ್‌ ಪಾಸ್‌ಬುಕ್‌, ಬೆಳೆ ದೃಢೀಕರಣ ಪತ್ರ ಸೇರಿ ಇತರೆ ದಾಖಲಾತಿಗಳನ್ನು ನೀಡಿ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಬೇಕೆಂದು ಸರ್ಕಾರ ಆದೇಶಿಸಿದೆ. ಹೀಗಾಗಿ ರೈತರು ಹೆಸರು ನೋಂದಣಿಗೆ ಮುಗಿಬಿದ್ದ ಪರಿಣಾಮ ನೂಕುನುಗ್ಗಲು ಉಂಟಾಯಿತು.

ಜಾಲಹಳ್ಳಿ ಹೋಬಳಿ ವ್ಯಾಪ್ತಿಯ 40ಕ್ಕೂ ಹೆಚ್ಚಿನ ಹಳ್ಳಿಗಳಲ್ಲಿ ಸಾವಿರಾರು ರೈತರು ತೊಗರಿ ಬೆಳೆದಿದ್ದಾರೆ. ಸರಕಾರ ಇಡೀ ಹೋಬಳಿಯಲ್ಲಿ ಒಂದೇ ಖರೀದಿ ಕೇಂದ್ರ ಆರಂಭಿಸಿದೆ. ಒಂದು ಪಹಣಿಗೆ 10 ಕ್ವಿಂಟಾಲ್‌ ಮಾತ್ರ ಖರೀದಿಸಲಾಗುವುದು ಎಂದು ನಿಯಮ ಹೇರಿದೆ. ಹೀಗಾಗಿ 10 ಕ್ವಿಂಟಾಲ್‌ಗಿಂತ ಹೆಚ್ಚು ತೊಗರಿ ಬೆಳೆದ ರೈತರು ಬೇರೆಯವರ ದಾಖಲಾತಿಗಳನ್ನು ನೀಡಿ ಹೆಸರು ನೋಂದಣಿಗೆ ಮುಂದಾಗಿದ್ದು ನೂಕು ನುಗ್ಗಲಿಗೆ ಕಾರಣವಾಗಿದೆ.

ಮಾರುಕಟ್ಟೆಯಲ್ಲಿ ಕ್ವಿಂಟಾಲ್‌ ತೊಗರಿಗೆ 4900 ರೂ. ದರ ಇದೆ. ಖರೀದಿ ಕೇಂದ್ರದಲ್ಲಿ ಕ್ವಿಂಟಾಲ್‌ಗೆ 6100 ದರದಲ್ಲಿ ಖರೀದಿಸಲಾಗುತ್ತಿದೆ. ಮಾರುಕಟ್ಟೆ ದರಕ್ಕಿಂತ 1200 ರೂ. ಹೆಚ್ಚಿಗೆ ಸಿಗುವುದರಿಂದ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ತೊಗರಿ ಮಾರಲು ಮುಂದಾಗುತ್ತಿದ್ದಾರೆ. ಆದರೆ ಸರಕಾರ ರೈತರ ಸಂಖ್ಯೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದರೆ ಅಥವಾ ಪಹಣಿಗೆ 10 ಕ್ವಿಂಟಾಲ್‌ ಎಂದು ನಿಗದಿಪಡಿಸದಿದ್ದರೆ ಈ ನೂಕುನುಗ್ಗಲು ಇರುತ್ತಿರಲಿಲ್ಲ ಎಂದು ರೈತರು ಹೇಳಿದರು.

ಆಗ್ರಹ: ದಾಖಲಾತಿಗಳಲ್ಲಿನ ಹೆಸರು, ಪಹಣಿಯಲ್ಲಿ ದಾಖಲಾದ ಬೆಳೆಗೂ ತಾಳೆಯಾಗದೇ ಇರುವುದು, ಕೆಲ ರೈತರ ಹೆಸರುಗಳು ತಹಶೀಲ್ದಾರ್‌ ಲಾಗಿನ್‌ಗೆ ಹೋಗಿದ್ದು, ಈ ಸಮಸ್ಯೆಯನ್ನು ತಹಶೀಲ್ದಾರರೇ ಪರಿಹರಿಸಬೇಕಿದ್ದರಿಂದ ರೈತರು ತಹಶೀಲ್ದಾರ್‌ ಕಚೇರಿಗೆ ಅಲೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರ ರೈತರಿಗೆ ಅನುಕೂಲ ಮಾಡುವ ಹೆಸರನಲ್ಲಿ ಇಲ್ಲದ ನಿಯಮಗಳನ್ನು ಹೇರಿ ಗೊಂದಲ ಉಂಟು ಮಾಡುತ್ತಿದೆ. ಇದರಿಂದ ರೈತರಿಗೆ ಸಹಾಯವಾಗುವ ಬದಲು ಮತ್ತಷ್ಟು ತೊಂದರೆಯಾಗುತ್ತಿದೆ. ಕೂಡಲೇ ಜಿಲ್ಲಾಧಿಕಾರಿಗಳು ಗಮನ ಹರಿಸಿ ಪ್ರತಿ ಪಹಣಿಗೆ 10 ಕ್ವಿಂಟಾಲ್‌ ಖರೀದಿಸುವ ನಿರ್ಬಂಧ ತೆಗೆದು ಹಾಕಬೇಕು. ದಾಖಲಾತಿಗಳಲ್ಲಿ ಸಣ್ಣಪುಟ್ಟ ದೋಷಗಳಿದ್ದರೂ ತೊಗರಿ ಖರೀದಿಗೆ ಅವಕಾಶ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.