ಪಾಳುಬಿದ್ದ ಎಪಿಎಂಸಿ ಮಳಿಗೆಗಳು


Team Udayavani, Jan 11, 2019, 10:23 AM IST

yad-1.jpg

ದೇವದುರ್ಗ: ಸ್ಥಳೀಯ ಎಪಿಎಂಸಿ ವತಿಯಿಂದ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿದ ಮಳಿಗೆಗಳ ಟೆಂಡರ್‌ ಪ್ರಕ್ರಿಯೆ ವಿಳಂಬವಾಗಿದ್ದರಿಂದ ವರ್ತಕರಿಗೆ ಮಳಿಗೆಗಳು ಹಂಚಿಕೆಯಾಗದೇ ಎಪಿಎಂಸಿ ಮಾರುಕಟ್ಟೆ ರೈತರಿಗೆ ವರವಾಗುವ ಬದಲು ಶಾಪವಾಗಿ ಪರಿಣಮಿಸಿದೆ.

ಸ್ಥಳೀಯ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಮಳಿಗೆಗಳ ನಿರ್ಮಾಣ ಕಾಮಗಾರಿ ವೇಗದಿಂದ ಸಾಗಿದೆ. ಕಳೆದ ಮೂರ್‍ನಾಲ್ಕು ವರ್ಷಗಳ ಹಿಂದೆ ಒಳಗೆ ನಿರ್ಮಿಸಿದ ಬಹುತೇಕ ಮಳಿಗೆಗಳ ಟೆಂಡರ್‌ ಕರೆದು ವರ್ತಕರಿಗೆ ಹಂಚಿಕೆ ಮಾಡದ್ದರಿಂದ ವ್ಯಾಪಾರ ವಹಿವಾಟಿಗೆ ಬಳಕೆಯಾಗದೇ ನಿರುಪಯುಕ್ತವಾಗಿವೆ.ನಿರ್ವಹಣೆ ಕೊರತೆಯಿಂದ ಆರೇಳು ಮಳಿಗೆಗಳು ಪಾಳು ಬಿದ್ದಿವೆ. ಹೊಸದಾಗಿ ನಿರ್ಮಿಸಲಾದ 9 ಮಳಿಗೆಗಳು ವರ್ಷಗಳೇ ಗತಿಸಿದರೂ ಟೆಂಡರ್‌ ಪ್ರಕ್ರಿಯೆ ಆಗಿಲ್ಲ. ಅಧಿಕಾರಿಗಳು ಟೆಂಡರ್‌ ಪ್ರಕ್ರಿಯೆ ನಡೆಸಲು ಮೀನ-ಮೇಷ ಎಣಿಸುತ್ತಿರುವುದು ಅನುಮಾನಕ್ಕೆಡೆ ಮಾಡಿದೆ.

ಎಪಿಎಂಸಿ ಮಾರುಕಟ್ಟೆಯಲ್ಲಿ ವಾಣಿಜ್ಯಿಕ ಚಟುವಟಿಕೆಗಳು ನಡೆಯದ್ದರಿಂದ ರೈತರ ಕೃಷಿ ಉತ್ಪನ್ನ ದಾಸ್ತಾನಿಗೆ ನಿರ್ಮಿಸಿದ ಬೃಹತ್‌ ಗೋದಾಮು ಕೂಡ ನಿರುಪಯುಕ್ತವಾಗಿವೆ. ಇಲ್ಲಿನ ಕೃಷಿ ಮಾರುಕಟ್ಟೆಯನ್ನು ಪದೇಪದೆ ರಾಯಚೂರು ಎಪಿಎಂಸಿಗೆ ವಿಲೀನ ಮಾಡುವುದರಿಂದ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ರೈತಪರ ಹಲವು ಸಂಘಟನೆಗಳು ವಿಲೀನ ವಿರೋಧಿಸಿ ಹೋರಾಟ ಕೈಗೊಂಡರೂ, ರಾಜಕೀಯ ನಾಯಕರ ಪ್ರಭಾವದಿಂದಾಗಿ ಫಲ ಸಿಗದೇ ವಿಫಲವಾಗಿದೆ. ಹೀಗಾಗಿ ತಾಲೂಕಿನ ನೂರಾರು ರೈತರು ತಮ್ಮ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಬೇರೆ ತಾಲೂಕು, ಜಿಲ್ಲೆಗೆ ತೆರಳುವುದು ಅನಿವಾರ್ಯವಾಗಿದೆ.

ತಾಲೂಕಿನವರೇ ಸಂಸದ, ಶಾಸಕರು, ವಿಧಾನ ಪರಿಷತ್‌ ಸದಸ್ಯರಿದ್ದರೂ ಇಲ್ಲಿನ ಎಪಿಎಂಸಿಯಲ್ಲಿ ವ್ಯಾಪಾರ ವಹಿವಾಟು ಆರಂಭಿಸಲು ಮುಂದಾಗದಿರುವುದರಿಂದ ಪಟ್ಟಣ ವಾಣಿಜ್ಯ ಕೇಂದ್ರವಾಗಿ ಬೆಳೆಯಲು ಹಿನ್ನಡೆ ಆಗುತ್ತಿದೆ.

ಕಲ್ಯಾಣ ಮಂಟಪ ಅನಾಥ: ಇನ್ನು ಎಪಿಎಂಸಿ ಆವರಣದಲ್ಲಿ ನಿರ್ಮಿಸಿದ ಕಲ್ಯಾಣ ಮಂಟಪ ನಿರ್ವಹಣೆಗೆ ಅಧಿಕಾರಿಗಳು ಹಿಂದೇಟು ಹಾಕಿದ ಪರಿಣಾಮ ಸಭೆ, ಸಮಾರಂಭ ನಡೆಯುತ್ತಿಲ್ಲ.

ಇನ್ನಾದರೂ ಚುನಾಯಿತ ಜನಪ್ರತಿನಿಧಿಗಳು ಕೃಷಿ ಮಾರುಕಟ್ಟೆಯಲ್ಲಿನ ವಾಣಿಜ್ಯ ಮಳಿಗೆಗಳನ್ನು ಟೆಂಡರ್‌ ಕರೆದು ವರ್ತಕರಿಗೆ ಹಂಚಿಕೆ ಮಾಡುವ ಮೂಲಕ ವಾಣಿಜ್ಯ ಚಟುವಟಿಕೆ ಆರಂಭಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಕೆಆರ್‌ಎಸ್‌ ಸಂಘಟನೆ ಅಧ್ಯಕ್ಷ ಮಲ್ಲಯ್ಯ ಕಟ್ಟಿಮನಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.