ಮಕ್ಕಳಿಂದಲೇ ಗ್ರಂಥಾಲಯ ಸ್ಥಾಪನೆ


Team Udayavani, Jan 14, 2019, 10:44 AM IST

ray-2.jpg

ಮಸ್ಕಿ: ಪಟ್ಟಣದ ಬಯ್ನಾಪುರ ಮಹಾಂತಮ್ಮ ಲಿಂಗನಗೌಡ ಮೆಮೋರಿಯಲ್‌ ಪ್ರೈಮರಿ ಶಾಲೆ ಹೊಸ ಹೊಸ ವಿನೂತನ ಪ್ರಯೋಗಗಳನ್ನು ಮಾಡುವ ಮೂಲಕ ಪಾಲಕರ ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಪಟ್ಟಣದ ಬಹುತೇಕ ಶಾಲಾ-ಕಾಲೇಜು ಗಳಲ್ಲಿ ಹೊಸ ವರ್ಷವನ್ನು ಕೇಕ್‌ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸುವುದು ವಾಡಿಕೆ. ಆದರೆ ಬಿಎಂಎಲ್‌ ಶಾಲೆಯಲ್ಲಿ ಈ ವರ್ಷ ವಿಭಿನ್ನವಾಗಿ ಹೊಸ ವರ್ಷ ಆಚರಿಸಲಾಯಿತು.

ಮುಖ್ಯೋಪಾಧ್ಯಾಯ ಮೌನೇಶ ಹೊಸಮನಿ ಶಾಲೆಯಲ್ಲಿ ಗ್ರಂಥಾಲಯ ಇರದಿದ್ದನ್ನು ಕಂಡು ಹೊಸ ವರ್ಷದಲ್ಲಿ ಮಕ್ಕಳಿಗೆ ಗ್ರಂಥಾಲಯ ಸ್ಥಾಪಿಸಲು ಪ್ರೇರಣೆ ನೀಡಿದ್ದಾರೆ. ಅದರಂತೆ ಮಕ್ಕಳು ಪುಸ್ತಕಗಳನ್ನು ದೇಣಿಗೆ ನೀಡಿ ಗ್ರಂಥಾಲಯ ಸ್ಥಾಪಿಸಿದ್ದು ಮೆಚ್ಚುಗೆಗೆ ಕಾರಣವಾಗಿದೆ.

ಪಾಲಕರಿಂದ ಹಣ ಪಡೆದು ಪುಸ್ತಕ ಖರೀದಿಸುವುದಕ್ಕಿಂತ ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಹಿರಿಯರು ಓದಿದ ಪುಸ್ತಕಗಳನ್ನು ಶಾಲೆಯ ಗ್ರಂಥಾಲಯಕ್ಕೆ ದೇಣಿಗೆ ಕೊಡುವಂತೆ ಸೂಚಿಸಿದಾಗ ವಿದ್ಯಾರ್ಥಿಗಳಿಂದ ಅಂದಾಜು 20 ಸಾವಿರ ರೂ.ಮೌಲ್ಯದ 800 ಪುಸ್ತಕಗಳನ್ನು ಸಂಗ್ರಹಿಸಿ ಗ್ರಂಥಾಲಯ ಸ್ಥಾಪಿಸಿ ಮಾದರಿಯಾಗಿದ್ದಾರೆ.

ಮಕ್ಕಳ ಆಸಕ್ತಿ ಮತ್ತು ಶಿಕ್ಷಕರ ಕಾಳಜಿಯಿಂದ ಪಾಲಕರೊಬ್ಬರು ಶಾಲೆಗೆ ಪುಸ್ತಕ ಸಂಗ್ರಹಕ್ಕಾಗಿ 10 ಸಾವಿರ ರೂ. ಮೌಲ್ಯದ ಅಲ್ಮೇರಾ ದೇಣಿಗೆ ನೀಡಿದರೆ, ಪ್ರೌಢಶಾಲೆ ಶಿಕ್ಷಕರು 10 ಸಾವಿರ ರೂ. ದೇಣಿಗೆ ಗ್ರಂಥಾಲಯ ಸ್ಥಾಪನೆಗೆ ಸಾಥ್‌ ನೀಡಿದ್ದಾರೆ.

ಬ್ಯಾಗ್‌ ಲೆಸ್‌ ಡೇ: ಮಕ್ಕಳಿಗೆ ಪ್ರತಿದಿನ ಪುಸ್ತಕದ ಭಾರ ಕಡಿಮೆ ಮಾಡುವ ಉದ್ದೇಶದಿಂದ ಕ್ಲಾಸ್‌ ವರ್ಕ್‌ ಬುಕ್ಸ್‌ಗಳನ್ನು ತರಗತಿ ಕೊಠಡಿಯಲ್ಲಿಡುವ ವಾರಕ್ಕೆ ಒಂದು ದಿನ ಬ್ಯಾಗ್‌ ರಹಿತ (ಬ್ಯಾಗ್‌ ಲೆಸ್‌ ಡೇ) ಶಾಲೆಗೆ ಬರುವಂತೆ ಮಾಡುವ ಮೂಲಕ ಶಿಕ್ಷಕರು ವಿಶೇಷ ಕಾಳಜಿ ವಹಿಸಿದ್ದಾರೆ.

ವಿಶೇಷ ಪ್ರಾತ್ಯಕ್ಷಿಕೆ: ಪ್ರತಿವಾರ ಒಂದು ದಿನ ಮಕ್ಕಳು ಶಾಲೆಯ ಪಠ್ಯದ ಜತೆಗೆ ಜನರು ಬಳಸುವ ದವಸ-ಧಾನ್ಯಗಳನ್ನು ಬೆಳೆಯುವ ಕುರಿತು ಪ್ರಾತ್ಯಕ್ಷಿಕೆ, ಬಣ್ಣಗಳ ಗುರುತಿಸುವಿಕೆ, ಪಶು ಪಕ್ಷಿಗಳ ಮಾಹಿತಿ ಮತ್ತು ಅವುಗಳ ಧ್ವನಿ ಪರಿಚಯ ಮಾಡಿಸುವ ಕೆಲಸ ಮಾಡುತ್ತಿದ್ದಾರೆ.

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪುಸ್ತಕ ಪಾಠದ ಜತೆಗೆ ಇತರೆ ವಿಷಯಗಳ ಕುರಿತು ಮಾಹಿತಿ ನೀಡಿ ಮಕ್ಕಳಲ್ಲಿ ಕುತೂಹಲ ಮೂಡಿಸಿ ಇನ್ನೂ ಹೆಚ್ಚಿನದನ್ನು ಕಲಿಯುವಂತೆ ಮಾಡುತ್ತಾರೆ. ಓದಿನ ಜತೆ ಆಟ ಮುಖ್ಯವಾಗಿದ್ದು ಮಕ್ಕಳಿಗೆ ನಿಯಮಿತವಾಗಿ ದೇಶಿ ಆಟಗಳನ್ನು ಆಡಿಸುತ್ತಿದ್ದು ಪ್ರತಿ ಸ್ಪರ್ಧೆಯಲ್ಲಿ ಗೆದ್ದವರಿಗೆ ಪುಸ್ತಕಗಳ ಬಹುಮಾನ ನೀಡುವ ಪರಿಪಾಠ ಹಾಕಿಕೊಂಡಿದ್ದಾರೆ.

ಮಕ್ಕಳಿಗೆ ಅಷ್ಟೆ ಅಲ್ಲ ಪಾಲಕರ ಸಭೆ ನಡೆಸಿ ಮಕ್ಕಳಿಗೆ ಆಟ-ಊಟ-ಪಾಠಗಳ ಸಮತೋಲನ ಕಾಯ್ದುಕೊಳ್ಳುವಂತೆ ವಿಶೇಷ ತಜ್ಞರನ್ನು ಕರೆಸಿ ಉಪನ್ಯಾಸ ಏರ್ಪಡಿಸುವ ಮೂಲಕ ಪಾಲಕರಲ್ಲಿ ಜಾಗೃತಿ ಮೂಡಿಸುತ್ತಿದ್ದು, ಇದು ಜನರಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.