ಹೈಟೆಕ್‌ ಮಟ್ಕಾ: ಚೀಟಿ ಬದಲು ಮೊಬೈಲ್‌ ಬಳಕೆ


Team Udayavani, Jan 14, 2019, 10:47 AM IST

ray-3.jpg

ಲಿಂಗಸುಗೂರು: ಚಿನ್ನ ಉತ್ಪಾದನೆಗೆ ಹೆಸರುವಾಸಿಯಾದ ತಾಲೂಕಿನಲ್ಲಿ ಈಗೀಗ ಮಟ್ಕಾ ಹಾವಳಿಗೆ ಜನತೆ ಹೈರಾಣಾಗಿದ್ದಾರೆ. ಮೊದಲೆಲ್ಲ ಚೀಟಿ ಬರೆದುಕೊಡುತ್ತಿದ್ದ ಮಟ್ಕಾ ಬುಕ್ಕಿಗಳು ಕೂಡ ಹೈಟೆಕ್‌ ಆಗಿದ್ದಾರೆ. ಈಗೆಲ್ಲ ಮೊಬೈಲ್‌ ಮೂಲಕವೇ ಮಟ್ಕಾ ದಂಧೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸ್‌ ಇಲಾಖೆ ಪಣ ತೊಟ್ಟಿದೆ.

ಇಡೀ ರಾಷ್ಟ್ರಕ್ಕೆ ಚಿನ್ನ ಪೂರೈಕೆ ಮಾಡುವ ತಾಲೂಕಿನಲ್ಲಿ ಸಮಾಜಘಾತುಕ ಚಟುವಟಿಕೆಯಾದ ಮಟ್ಕಾ ದಂಧೆ ಅವ್ಯಾಹತವಾಗಿ ನಡೆದುಕೊಂಡು ಬಂದಿದ್ದರಿಂದ ತಾಲೂಕು ಅಪಖ್ಯಾತಿಗೆ ಕಾರಣವಾಗಿದೆ. ಇದನ್ನು ತಡೆಗಟ್ಟಲು ಪೊಲೀಸ್‌ ಇಲಾಖೆ ಹರಸಾಹಸ ಪಡುವಂತಾಗಿದೆ. ಚೀಟಿಯಲ್ಲಿ ನಡೆಯುತ್ತಿದ್ದ ದಂಧೆ ಈಗ ಮೊಬೈಲ್‌ ಮೂಲಕ ನಡೆಯುತ್ತಿದೆ. ಹೀಗಾಗಿ ಪೊಲೀಸರಿಗೆ ದಂಧೆಕೋರರನ್ನು ಹಿಡಿಯುವುದು ಹೊಸ ಸವಾಲಾಗಿತ್ತು. ಮೊದಲು ಚೀಟಿ ಬರೆದು ಕೊಡುವಾಗ ಪೊಲೀಸರ ಕೈಗೆ ಸುಲಭವಾಗಿ ಸಿಕ್ಕಿಕೊಳ್ಳುವ ಸಂಭವವಿತ್ತು. ಈಗ ಮೊಬೈಲ್‌ನಲ್ಲಿ ನಂಬರ್‌ಗಳನ್ನು ಪಡೆದು ಪಟ್ಟಿ ತೆಗೆದುಕೊಳ್ಳಲಾಗುತ್ತಿದೆ.

ಬೀದಿಪಾಲಾದ ಕುಟಂಬಗಳು: ಮಟ್ಕಾದಿಂದ ಅನೇಕ ಕುಟಂಬಗಳು ಬೀದಿ ಪಾಲಾದರೆ, ಕೆಲ ಯುವಕರು ಹಣ ಕಳೆದುಕೊಂಡು ಊರು ಬಿಟ್ಟು ಹೋಗಿರುವ ಉದಾಹರಣೆಗಳು ಇವೆ. ಮಟ್ಕಾ ನಡೆಸುವ ಬುಕ್ಕಿಗಳ ಮೇಲೆ ಪೊಲೀಸರು ಕಡಿವಾಣ ಹಾಕದ ಪರಿಣಾಮ ಇಂದು ಮಟ್ಕಾ ಬುಕ್ಕಿಗಳು ಕೋಟ್ಯಂತರ ರೂ.ಗಳ ಒಡೆಯರಾಗಿದ್ದಾರೆ. ಕಡಿಮೆ ಸಮಯದಲ್ಲಿ ಹೆಚ್ಚು ಹಣ ಗಳಿಸುವ ಕೆಟ್ಟ ಆಲೋಚನೆಯಿಂದಾಗಿ ಮಟ್ಕಾ ದಂಧೆಗೆ ಯುವಜನರು ಬಲಿಯಾಗಿ ತಮ್ಮ ಭವಿಷ್ಯದ ಜೀವವನ್ನು ಕತ್ತಲು ಮಾಡಿಕೊಳ್ಳಲು ಹೊರಟಿದ್ದಾರೆ. ಮಟ್ಕಾ ಜೂಜಾಟದ ಹಿಂದೆ ಬಿದ್ದು ಯಾರೂ ಶ್ರೀಮಂತರಾದ ಉದಾಹರಣೆಗಳು ಇಲ್ಲ, ಅದನ್ನು ನಡೆಸುವ ಬುಕ್ಕಿಗಳು ಮಾತ್ರ ಶ್ರೀಮಂತರಾಗಿದ್ದಾರೆ. ಈ ನಿಟ್ಟಿನಲ್ಲಿ ಮಟ್ಕಾ ಜೂಜಾಟದಲ್ಲಿ ತೊಡಗುವ ಯುವಕರು ಆಲೋಚಿಸಬೇಕಾಗಿದೆ ಎಂಬುದು ಪ್ರಜ್ಞಾವಂತರ ಅಭಿಪ್ರಾಯವಾಗಿದೆ.

ಮಟ್ಕಾ ಅಡ್ಡೆ: ಪಟ್ಟಣದ ಶಾದಿ ಮಹಲ್‌ ಹತ್ತಿರ, ಗೌಳಿಪುರ, ಸೇರಿ ತಾಲೂಕಿನ ಹಟ್ಟಿ, ಇನ್ನಿತರ ಗ್ರಾಮಗಳಲ್ಲಿ ಮಟ್ಕಾ ದಂಧೆ ಹೆಚ್ಚಾಗಿ ನಡೆಯುತ್ತಿದೆ. ಇತ್ತೀಚೆ ನಡೆಸಿದ ದಾಳಿಯ ಸಂದರ್ಭದಲ್ಲಿ ಮಟ್ಕಾ ದಂಧೆಕೋರರ ಮೇಲೆ ಹಲವಾರು ಪ್ರಕರಣ ದಾಖಲು ಮಾಡಿರುವುದು ವಿಶೇಷವಾಗಿದೆ.

ರಾಜಕೀಯ ಬೆಂಬಲ: ಮಟ್ಕಾ ಬುಕ್ಕಿಗಳಿಗೆ ರಾಜಕೀಯ ಮುಖಂಡರ ಬೆಂಬಲ ಇರುವ ಕಾರಣ ಪೊಲೀಸರು ಈ ದಂಧೆ ತಡೆಯಲು ಹೆಣಗಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಟ್ಕಾ ದಂಧೆ ನಡೆಸುವವರು ಪ್ರಭಾವಿ ರಾಜಕಾರಣಿಗಳ ಹಿಂಬಾಲಕರಾಗಿದ್ದಾರೆ. ಇದರಿಂದ ಬುಕ್ಕಿಗಳ ರಕ್ಷಣೆಗೆ ಟೊಂಕಕಟ್ಟಿ ನಿಂತಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ಕಡಿವಾಣ: ಡಿವೈಎಸ್‌ಪಿ ಎಸ್‌.ಎಚ್. ಸುಬೇದಾರ್‌ ಅವರು ಮಟ್ಕಾ ನಿಯಂತ್ರಣಕ್ಕಾಗಿ ಹಲವು ಕಠಿಣ ಕ್ರಮ ಕೈಗೊಂಡಿದ್ದರಿಂದ ಲಿಂಗಸುಗೂರು ಉಪ ವಿಭಾಗದಲ್ಲಿ 2017ರಲ್ಲಿ 134 ಮಟ್ಕಾ ಪ್ರಕರಣಗಳು, 2018ರಲ್ಲಿ 121 ಮಟ್ಕಾ ಪ್ರಕರಣಗಳು ದಾಖಲಾಗಿದೆ. ಇದಲ್ಲದೆ 2017ರಲ್ಲಿ ಇಸ್ಪೀಟ್ ಜೂಜಾಟದ 67, 2018ರಲ್ಲಿ 59 ಪ್ರಕರಣಗಳು ದಾಖಲಾಗಿವೆ. ಲಿಂಗಸುಗೂರು ಠಾಣೆಯಲ್ಲಿ 2017ರಲ್ಲಿ 26, 2018ರಲ್ಲಿ 33 ಮಟ್ಕಾ ಪ್ರಕರಣಗಳು ದಾಖಲಾಗಿವೆ. ಹಟ್ಟಿ ಠಾಣೆಯಲ್ಲಿ 2017 ಮತ್ತು 2018ರಲ್ಲಿ ತಲಾ 48 ಪ್ರಕರಣಗಳು ದಾಖಲಾಗಿವೆ. ಇದಲ್ಲದೆ ಹಲವರ ಮೇಲೆ ಗೂಂಡಾ ಕಾಯ್ದೆ ಹಾಗೂ ಗಡಿಪಾರು ಮಾಡಲಾಗಿದೆ. ಕೆಲವರನ್ನು ಗಡಿಪಾರು ಮಾಡಲಾಗಿತ್ತು. ಆದರೆ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿ ತಡೆಯಾಜ್ಞೆ ತಂದು ರಾಜಾರೋಷವಾಗಿ ಮಟ್ಕಾ ದಂಧೆ ನಡೆಸುತ್ತಾ ಊರಲ್ಲಿ ಆರಾಮವಾಗಿದ್ದಾರೆ. ಇದರಿಂದ ಪೊಲೀಸರು ಪಟ್ಟ ಶ್ರಮಕ್ಕೆ ಬೆಲೆ ಇಲ್ಲದಂತಾಗಿದೆ. ಸರ್ಕಾರವೇ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಲು ಚಿಂತನೆ ನಡೆಸಬೇಕಾಗಿದೆ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.