ನವಲಕಲ್ಲು ಗ್ರಾಮದಲ್ಲಿ ಸೌಕರ್ಯ ಕೊರತೆ


Team Udayavani, Jan 17, 2019, 9:34 AM IST

ray-4.jpg

ಸಿರವಾರ: ಸಮೀಪದ ನವಲಕಲ್ಲು ಗ್ರಾಮದಲ್ಲಿ ಚರಂಡಿ, ಸಿಸಿ ರಸ್ತೆ ಸೇರಿದಂತೆ ಅನೇಕ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ.

ರಾಜ್ಯ, ಕೇಂದ್ರ ಸರ್ಕಾರಗಳು ಸ್ವಚ್ಛ ಭಾರತ, ರಸ್ತೆ ಅಭಿವೃದ್ಧಿ, ಶೌಚಾಲಯ ನಿರ್ಮಾಣ, ಚರಂಡಿ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳಿಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡುತ್ತಿದ್ದರೆ ನವಲಕಲ್ಲು ಗ್ರಾಮದಲ್ಲಿ ಈ ಯಾವುದೇ ಯೋಜನೆಗಳು ಸದ್ಭಳಕೆಯಾಗದ್ದರಿಂದ ಗ್ರಾಮಗಳು ಸಮಸ್ಯೆಗಳ ಆಗರವಾಗಿವೆ.

ಚರಂಡಿ ನೀರು ರಸ್ತೆಗೆ: ಈ ಗ್ರಾಮದ ಪ್ರಮುಖ ಸಮಸ್ಯೆ ಚರಂಡಿ ಇಲ್ಲದಿರುವುದು. ಗ್ರಾಮದ ಅನೇಕ ಕಡೆ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿದು ಸಾರ್ವಜನಿಕರು ಓಡಾಡಲು ಕಷ್ಟಪಡುವಂತಾಗಿದೆ

ವ್ಯರ್ಥ ಹರಿಯುವ ನೀರು: ಗ್ರಾಮಕ್ಕೆ ನೀರಿನ ಸೌಲಭ್ಯ ಸಮರ್ಪಕವಾಗಿದ್ದರೂ ಅದನ್ನು ನಿರ್ವಹಣೆ ಮಾಡದಿರುವುದರಿಂದ ಪೈಪ್‌ಗ್ಳು ಎಲ್ಲೆಂದರಲ್ಲಿ ತೂತು ಬಿದ್ದು ಗಲೀಜು ನೀರು ಪೈಪ್‌ ಸೇರುತ್ತಿವೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭಯದಲ್ಲಿ ನೀರು ಕುಡಿಯಲು ಗ್ರಾಮಸ್ಥರು ಹಿಂದೇಟು ಹಾಕುವಂತಾಗಿದೆ.

ಸಮಯಕ್ಕೆ ಬಾರದ ಪಂಚಾಯತಿ ಸಿಬ್ಬಂದಿ: ನವಲಕಲ್ಲು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಟ್ಟು 4 ಹಳ್ಳಿಗಳು ಬರುತ್ತವೆ. ಆದರೆ ಕೇಂದ್ರ ಸ್ಥಾನವಾಗಿರುವ ಪಂಚಾಯತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಿಲ್ಲದ ಕಾರಣ ಪಿಡಿಒ, ಗಣಕಯಂತ್ರ ನಿರ್ವಾಹಕಿಯಿಂದ ಹಿಡಿದು ಯಾವೊಬ್ಬ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಶೌಚಾಲಯ ಬಿಲ್‌ ಬಾಕಿ: ಗ್ರಾಮದಲ್ಲಿ ಕೆಲವರು ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಂಡಿದ್ದಾರೆ. ಇವರಿಗೆ ಸರ್ಕಾರದ ಸಹಾಯಧನ ನೀಡದ್ದರಿಂದ ಪ್ರತಿದಿನ ಪಂಚಾಯತಿಗೆ ಅಲೆಯುವಂತಾಗಿದೆ. ಹೀಗಾಗಿ ಕೆಲವರು ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಹಿಂದೇಟು ಹಾಕುವಂತಾಗಿದೆ.

ಇನ್ನು ಅಭಿವೃದ್ಧಿ ಮಾಡಬೇಕಾದ ಪಂಚಾಯತಿ ಸದಸ್ಯರೇ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂಬ ಹೇಳಿಕೆ ನೀಡುತ್ತಿರುವುದು ವಿಪರ್ಯಾಸವೇ ಸರಿ. ಕಣ್ಣು ಮುಂದೆಯೇ ಸಮಸ್ಯೆ ಕಂಡರೂ ಜನಪ್ರತಿನಿಧಿಗಳು ಸುಮ್ಮನಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮದಲ್ಲಿನ ಸಮಸ್ಯೆಗಳ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಅಧಿಕಾರಿಗಳು ಬೇಕಾಬಿಟ್ಟಿ ಕೆಲಸ ಮಾಡುತ್ತಿದ್ದು ಇದರಿಂದ ಸಾರ್ವಜನಿಕರು ಕಷ್ಟ ಅನುಭವಿಸುವಂತಾಗಿದೆ.
ಜಾಕೀರ್‌, ಗ್ರಾಮಸ್ಥ

ನವಲಕಲ್ಲು ಗ್ರಾಮದಲ್ಲಿ ಒಟ್ಟು 2000ಕ್ಕೂ ಹೆಚ್ಚು ಗ್ರಾಮಸ್ಥರಿದ್ದು, 6 ಜನ ಪಂಚಾಯತಿ ಸದಸ್ಯರನ್ನು ಹೊಂದಿದೆ.

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.