ನೆಲಕಚ್ಚಿದ ‘ಸಾವಿರ ಮನೆ’ ಕನಸು


Team Udayavani, Jan 23, 2019, 9:50 AM IST

ray-2.jpg

ಸಿಂಧನೂರು: ನಗರದ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಡವರಿಗೆ ಐಎಚ್ಎಸ್‌ಡಿಪಿ ಯೋಜನೆಯಡಿ ಕೈಗೊಂಡಿದ್ದ ಮನೆಗಳ ನಿರ್ಮಾಣ ಕಾರ್ಯ ಅಪೂರ್ಣಗೊಂಡಿದ್ದು, ಇಲ್ಲಿನ ನಿವಾಸಿಗಳ ಸೂರಿನ ಕನಸು ನನಸಾಗಿಲ್ಲ. ಈ ಯೋಜನೆಯಲ್ಲಿ ಕೆಲ ಮನೆಗಳನ್ನು ಬೇಕಾಬಿಟ್ಟಿಯಾಗಿ ನಿರ್ಮಿಸಿ ಕೈ ತೊಳೆದುಕೊಂಡಿರುವ ಗುತ್ತಿಗೆದಾರರು ಬಡವರಿಗೆ ಅನ್ಯಾಯ ಮಾಡಿದಂತಾಗಿದೆ.

2007ರಲ್ಲಿ ಕೊಳಚೆ ಪ್ರದೇಶಗಳ ಅಭಿವೃದ್ಧಿ ದೃಷ್ಟಿಯಿಂದ 1005 ಮನೆಗಳನ್ನು ಮಂಜೂರು ಮಾಡಲಾಗಿತ್ತು. ಮನೆಗಳ ನಿರ್ಮಾಣಕ್ಕೆ ಜಾಗದ ಅಳತೆ, ಚರಂಡಿ, ರಸ್ತೆ ಮಾರ್ಗ ನಕ್ಷೆ ತಯಾರಿಸಿ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇನ್ನಿತರೆ ಮೂಲ ಸೌಲಭ್ಯಗಳನ್ನೊಳಗೊಂಡಂತೆ ಮನೆಗಳ ನಿರ್ಮಾಣಕ್ಕೆ ವರದಿ ಸಿದ್ದಪಡಿಸಲಾಗಿತ್ತು.

ಯೋಜನೆಯಲ್ಲಿದ್ದಂತೆ 7 ಕೊಳಚೆ ಪ್ರದೇಶಗಳಲ್ಲಿ ಒಟ್ಟು 1005 ಮನೆಗಳ ನಿರ್ಮಾಣಕ್ಕೆ ಅಸ್ತು ದೊರೆತಿತ್ತು. ಆದರೆ ಅಂದುಕೊಂಡಂತೆ ಮನೆಗಳ ನಿರ್ಮಾಣವಾಗಿ ಅಭಿವೃದ್ಧಿ ಕಾರ್ಯಗಳು ನಡೆದಿದ್ದರೆ ಇಷ್ಟೊತ್ತಿಗಾಗಲೇ ಕೊಳಚೆ ಪ್ರದೇಶಗಳ ಸ್ಥಿತಿ ಬದಲಾಗಿರುತ್ತಿತ್ತು. ಆದರೆ ಜನಪ್ರತಿನಿಧಿಗಳ ನಿಷ್ಕಾಳಜಿ ಹಾಗೂ ಅಧಿಕಾರಿಗಳ ಮತ್ತು ಗುತ್ತಿಗೆದಾರರ ವ್ಯಾಪಕ ಭ್ರಷ್ಟಾಚಾರದಿಂದ ಕೆಲ ಮನೆಗಳು ಅರ್ಧಕ್ಕೆ ನಿಂತರೆ, ಕೆಲ ನಿರ್ಮಾಣದ ಹಂತದಲ್ಲೇ ಸಮಾಧಿಯಾಗಿವೆ.

ಇಂದಿರಾ ಕಾಲೋನಿ, ಲಕ್ಷ್ಮೀಕ್ಯಾಂಪ್‌, ಮಹಿಬೂಬಿಯಾ ಕಾಲೋನಿ, 3ನೇ ಮೈಲ್‌ಕ್ಯಾಂಪ್‌ಗ್ಳಲ್ಲಿ ಕೆಲ ಮನೆಗಳನ್ನು ಹೊರತು ಪಡಿಸಿದರೆ ಉಳಿದೆಲ್ಲವನ್ನು ಗುತ್ತಿಗೆದಾರರು ತಮಗಿಷ್ಟ ಬಂದಂತೆ ನಿರ್ಮಾಣ ಮಾಡಿದ್ದಾರೆ. ಪ್ರತಿ ಮನೆಯನ್ನು 1.35 ಲಕ್ಷ ವೆಚ್ಚದಲ್ಲಿ ಕಟ್ಟಿಕೊಡಬೇಕಾಗಿದ್ದ ಗುತ್ತಿಗೆದಾರರು ಬುನಾದಿ ನೋಡಿ ಇಂತಿಷ್ಟು ಹಣ ಎಂದು ನೀಡಿ ಸುಮ್ಮನಾಗಿದ್ದಾರೆ. ಮನೆಗಳ ನಿರ್ಮಾಣದಲ್ಲಿ ಗುಣಮಟ್ಟದ ಸೀಮೆಂಟ್, ಮರಳನ್ನು ಬಳಸಿಲ್ಲ ಎಂಬ ಅಪವಾದಗಳೂ ಕೇಳಿಬರುತ್ತಿವೆ. ಕೆಲವರು ಅರೆಬರೆ ನಿರ್ಮಾಣಗೊಂಡ ಮನೆಗಳಲ್ಲೇ ವಾಸಿಸುತ್ತಿದ್ದಾರೆ. ಗುತ್ತಿಗೆದಾರರು ನಿರ್ಮಿಸಿದ ಮನೆಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು ಯಾವಾಗ ಬೀಳುತ್ತವೋ ಎಂಬ ಭೀತಿಯಲ್ಲಿ ಜನ ದಿನಕಳೆಯುತ್ತಿದ್ದಾರೆ.

ಎ.ಕೆ. ಗೋಪಾಲನಗರದಲ್ಲಿ ನಿರ್ಮಿಸಿರುವ ಮನೆಗಳ ಸ್ಥಿತಿ ಹೇಳತೀರದು. ಮೂಲ ಸೌಲಭ್ಯ ಒದಗಿಸದೆ ಇಕ್ಕಟ್ಟಾದ ಪ್ರದೇಶಗಳಲ್ಲೇ ಮನೆಗಳನ್ನು ಕಟ್ಟಿಕೊಟ್ಟಿದ್ದರಿಂದ ಜನರಿಗೆ ಜೀವನ ನಡೆಸುವುದು ದುಸ್ತರವಾಗಿದೆ.

ಫಲಾನುಭವಿಗಳೇ ಹೇಳುವಂತೆ ಮನೆಗಳಿಗೆ ಬಾಗಿಲಿದ್ದರೆ, ಕಿಟಕಿಯಿಲ್ಲ. ವಿದ್ಯುತ್‌ ಸಂಪರ್ಕ ದೂರದ ಮಾತು. ಈಗಾಗಲೇ ಸ್ವಂತ ಹಣದಲ್ಲಿ ಮನೆ ಕಟ್ಟಿಕೊಳ್ಳುವ ಯತ್ನದಲ್ಲಿರುವ ನಮಗೆ ಬದುಕೇ ಬೇಸರವೆನಿಸಿದೆ. ಈಗ ವಾಸಿಸುವ ಮನೆಗೆ ಬಾಡಿಗೆ ಕಟ್ಟಲೂ ಪರದಾಡುವಂತಾಗಿದೆ ಎಂದು ಲಕ್ಷ್ಮೀ ಕ್ಯಾಂಪ್‌ ನಿವಾಸಿಗಳ ಅಳಲು ತೋಡಿಕೊಂಡರು.

ನಿರುಪಯುಕ್ತವಾದ ಹಲವು ಯೋಜನೆಗಳ ಸಾಲಿಗೆ ಇದೂ ಸೇರಿತು. ಪ್ರಾರಂಭದಲ್ಲೇ ಹಲವು ವಿಘ್ನಗಳನ್ನು ಎದುರಿಸಿದ್ದ ಯೋಜನೆ ನಂತರವೂ ನಿಯಮದಂತೆ ಮುನ್ನಡೆಯಲಿಲ್ಲ. ಮನೆಗಳ ನಿರ್ಮಾಣದಲ್ಲಿ ಗುತ್ತಿಗೆದಾರರಿಗೆ ತುಂಡು ಗುತ್ತಿಗೆ ನೀಡಿದ್ದರಿಂದ ಅಸಡ್ಡೆ ಜಾಸ್ತಿಯಾಗಿ ಯೋಜನೆ ಲಾಭ ಫಲಾನುಭವಿಗಳಿಗೆ ದೊರೆಯಲಿಲ್ಲ. ಕೆಲವರು ಇದರಲ್ಲಿಯೇ ರಾಜಕೀಯ ಮಾಡಿ ಒಂದೇ ಮನೆಯಲ್ಲಿ ಎರಡ್ಮೂರು ಜನರಿಗೆ ಮನೆಗಳನ್ನು ಹಂಚಿಕೆ ಮಾಡಿದ್ದಾರೆನ್ನುವ ಆರೋಪಗಳಿವೆ. ಈ ಬಗ್ಗೆ ಸಚಿವ ವೆಂಕಟರಾವ್‌ ನಾಡಗೌಡರು ಯಾವ ರೀತಿ ಕ್ರಮ ಕೈಗೊಳ್ಳವರೋ ಕಾದು ನೋಡಬೇಕಿದೆ.

•ಚಂದ್ರಶೇಖರ ಯರದಿಹಾಳ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.