ಸೋಲು-ಗೆಲುವು ಸಮನಾಗಿ ಸ್ವೀಕರಿಸಿ
Team Udayavani, Jan 23, 2019, 9:58 AM IST
ರಾಯಚೂರು: ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ. ಅದನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನೆ ಅಳವಡಿಸಿಕೊಳ್ಳಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಮಹಾದೇವಯ್ಯ ಹೇಳಿದರು.
ನಗರದ ಎಲ್ವಿಡಿ ಕಾಲೇಜ್ ಆವರಣದಲ್ಲಿ ಗಣರಾಜ್ಯೋತ್ಸವ ನಿಮಿತ್ತ ರವಿವಾರ ನ್ಯಾಯಾಂಗ ಇಲಾಖೆ ಹಾಗೂ ವಕೀಲರ ಸಂಘದಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ವೃತ್ತಿ ಬದುಕಿನ ಒತ್ತಡದ ಮಧ್ಯೆ ಇಂಥ ಕ್ರೀಡಾಕೂಟಗಳಲ್ಲಿ ಭಾಗಿಯಾಗುವುದು ಉತ್ತಮ. ಇದರಿಂದ ಮಾನಸಿಕ ಒತ್ತಡ ನಿವಾರಣೆ ಆಗಲಿದೆ ಎಂದರು.
ವಕೀಲರ ಸಂಘದ ಜಿಲ್ಲಾಧ್ಯಕ್ಷ ಎನ್.ಭಾನುರಾಜ ಮಾತನಾಡಿ, ಸಂಘದ ಸದಸ್ಯರನ್ನು ಸಕ್ರಿಯವಾಗಿಡಲು ಇಂಥ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಪ್ರತಿ ಗಣರಾಜ್ಯೋತ್ಸವಕ್ಕೂ ನಾವು ಕ್ರೀಡೆಗಳನ್ನು ಆಯೋಜಿಸಿ ವಕೀಲರಲ್ಲಿ ಉತ್ಸಾಹ ತರುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳಿದರು.
ನ್ಯಾಯಾಂಗ ಇಲಾಖೆ ತಂಡದ ನಾಯಕರಾಗಿ ಎರಡನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮುಸ್ತಾಫ ಹುಸೇನ್, ಅದೇ ತಂಡದಲ್ಲಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಈಶ್ವರ ಹಾಗೂ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ರಾಜಶೇಖರ ಹಾಗೂ ನ್ಯಾಯಾಂಗ ಇಲಾಖೆ ನೌಕರರು ಮತ್ತು ಎರಡನೇ ತಂಡದ ನಾಯಕರಾದ ಎಚ್.ಮೇಟಿ ವಕೀಲರು ಹಾಗೂ ಸಂಗಡಿಗರು ಮತ್ತು ಮೂರನೇ ತಂಡದ ನಾಯಕರಾದ ರಾಮಣ್ಣ ನಾಯಕ ವಕೀಲರು ಹಾಗೂ ತಂಡದ ಸದಸ್ಯರು ಭಾಗವಹಿಸಿದ್ದರು.
ವಕೀಲರ ಸಂಘದ ಕಾರ್ಯದರ್ಶಿ ಶ್ರೀಧರಯಲಿ, ಜಂಟಿ ಕಾರ್ಯದರ್ಶಿ ನಜೀರ್ ಅಹ್ಮದ್, ಖಜಾಂಚಿ ರಾಮು ವಕೀಲರು ಹಾಗೂ ಹಿರಿಯ ವಕೀಲ ಕೆ.ಮಲ್ಲಿಕಾರ್ಜುನ, ಅಂಬಾಪತಿ ಪಾಟೀಲ, ಎಸ್.ಎಸ್.ಹೊಸಗೌಡರು, ಕೆ.ಸಿ.ವೀರೇಶ, ಅಶೋಕ ಗೋನಾಳ, ಮಲ್ಲಪ್ಪ ಚನ್ನಪ್ಪನವರ, ವಿಶ್ವನಾಥ ಇಟಗಿ, ಬಂಡೇಶ ವಲ್ಕಂದಿನ್ನಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ