ಆರೋಪಿಗಳ ಗಡಿಪಾರಿಗೆ ಒತ್ತಾಯ


Team Udayavani, Feb 21, 2019, 12:04 PM IST

ray-1.jpg

ಲಿಂಗಸುಗೂರು: ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಸಿಆರ್‌ಪಿಎಫ್‌ನ 40ಕ್ಕೂ ಹೆಚ್ಚು ಯೋಧರು ಹತ್ಯೆಯಾಗಿದ್ದಕ್ಕೆ ಮಸ್ಕಿ ತಾಲೂಕಿನ ತಲೇಖಾನ್‌ ಗ್ರಾಮದಲ್ಲಿ ಸಂಭ್ರಮಾಚರಣೆ ಮಾಡಿದ್ದನ್ನು ಖಂಡಿಸಿ ವಿವಿಧ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಲಿಂಗಸುಗೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಿವಿಧ ಸಂಘಟನೆಗಳು ಕರೆ ನೀಡಿದ್ದ ಲಿಂಗಸುಗೂರು ಬಂದ್‌ ಬೆಂಬಲಿಸಿ ಕೆಲ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿದ್ದರೆ, ಮತ್ತೆ ಕೆಲವರು ವ್ಯಾಪಾರ ವಹಿವಾಟು ನಡೆಸಿದರು. ಬಸ್‌ ಸಂಚಾರ ಸಹಜವಾಗಿತ್ತು. ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.

ಪಟ್ಟಣದ ದೊಡ್ಡ ಹನುಮಂತ ದೇವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ವಿವಿಧ ಸಂಘಟನೆಗಳ ಸದಸ್ಯರು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಸ್‌ ನಿಲ್ದಾಣ ವೃತ್ತಕ್ಕೆ ಆಗಮಿಸಿ ಪಾಕಿಸ್ತಾನ್‌ ಧ್ವಜ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಉಗ್ರರ ದಾಳಿಗೆ ಯೋಧರು ಹತ್ಯೆಯಾಗಿದ್ದಕ್ಕೆ ತಲೇಖಾನ ಗ್ರಾಮದಲ್ಲಿ ಸಂಭ್ರಮಾಚರಣೆ ಮಾಡಿದ ದುಷ್ಕರ್ಮಿಗಳ ಕೃತ್ಯ ಖಂಡನೀಯ. ತಲೇಖಾನ್‌ ಗ್ರಾಮದಲ್ಲಿ 15 ಜನ ಸೇರಿ ಹಸಿರು
ಬಣ್ಣ ಎರಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಆದರೆ ಈ ಘಟನೆಗೆ ಸಂಬಂಧಿಸಿ ಕೇವಲ 6 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿಶೇಷ ತಂಡ ರಚಿಸಿ ಇನ್ನುಳಿದ ಆರೋಪಿಗಳನ್ನು ಬಂಧಿಸಿ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು.

ಆರೋಪಿಗಳನ್ನು ಗಡಿಪಾರು ಮಾಡಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಮಹಿಳೆಯರ ಬಗ್ಗೆ ಅವಾಚ್ಯವಾಗಿ ನಿಂದಿಸುವ ಕೆಲಸ ನಡೆದಿದೆ. ರಾಷ್ಟ್ರಧ್ವಜ ಅವಮಾನಿಸುವ, ದೇಶದ ವಿರುದ್ಧ ಘೋಷಣೆಗಳನ್ನು ಹಾಕುವ ಪ್ರಸಂಗಗಳು ನಡೆಯುತ್ತಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಎಬಿವಿಪಿ, ಹಿಂದೂ ಜಾಗರಣಾ ವೇದಿಕೆ, ಬಿಜೆಪಿ ನಗರ ಘಟಕ, ಭಜರಂಗದಳ, ಖೋಖೋ ಬಾಯ್ಸ, ಸ್ವಾಮಿ ವಿವೇಕಾನಂದ ಸಂಘ, ಎಸ್‌ಎಲ್‌ಟಿ ಬಾಯ್ಸ, ಎಸ್‌ಬಿ ಗೆಳೆಯರ ಬಳಗ, ಬಾಪೂಜಿ ಸಂಘ, ಕರವೇ, ನಮ್ಮ ಕರವೇ, ಜೈ ಕರ್ನಾಟಕ, ವಕೀಲರ ಸಂಘ, ಸೌಥ್‌ ಇಂಡಿಯನ್‌ ಕರಾಟೆ ಅಸೋಸಿಯೇಶನ್‌ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ನೀಡಿದ್ದವು.

ಚೆನ್ನಬಸವ ಹಿರೇಮಠ, ಹನುಮಂತ, ಹನುಮೇಶ ಸರಾಫ, ಪರಶುರಾಮ ಸಾವಜಿ, ಹುಲಿಗೇಶ ನಾಯಕ, ಸೋಮಶೇಖರ, ಲಾಲಪ್ಪ ರಾಠೊಡ, ವಿಶ್ವನಾಥ ಆನ್ವರಿ, ಎಚ್‌.ವಿ.ಪವಾರ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

SHriramulu (2)

BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.