ಮತದಾರರಿಗೆ ಆಮಿಷವೊಡ್ಡಿದರೆ ಕಠಿಣ ಕ್ರಮ


Team Udayavani, Mar 6, 2019, 7:42 AM IST

ray-1.jpg

ರಾಯಚೂರು: ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತದಾರರಿಗೆ ಆಮಿಷವೊಡ್ಡುವುದು ಅಪರಾಧವಾಗಿದ್ದು, ಅಂಥ ಘಟನೆ ಗಮನಕ್ಕೆ ಬಂದಲ್ಲಿ ಚುನಾವಣೆ ಆಯೋಗ ಕಠಿಣ ಕ್ರಮ ಜರುಗಿಸಲಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಎಚ್ಚರಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆ-2019ರ ಕುರಿತು ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರಿಗಾಗಿ ಮಂಗಳವಾರ ಕರೆದ ಸಭೆಯಲ್ಲಿ ಅವರು ಮಾತನಾಡಿದರು.

ಮತದಾರರು ತಮಗೆ ಇಷ್ಟವಿರುವ ಪಕ್ಷಕ್ಕೆ ಮತ ಹಾಕುತ್ತಾರೆ. ಅವರಿಗೆ ನಮ್ಮದೇ ಪಕ್ಷಕ್ಕೆ ಬೆಂಬಲಿಸಿ, ಮತ ಹಾಕಿ ಎಂದು ತಾಕೀತು ಮಾಡುವುದು, ಹಣ, ಉಡುಗೊರೆ ನೀಡುವುದು ಸರಿಯಲ್ಲ. ರಾಜಕೀಯ ಪಕ್ಷಗಳು ಯಾವುದೇ ಜಾತಿ, ಧರ್ಮ, ಭಾಷೆಗಳ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡುವುದಾಗಲಿ, ಯಾವುದೇ ವೈಯಕ್ತಿಕ ಟೀಕೆ ಮಾಡುವುದು ಸರಿಯಲ್ಲ ಎಂದರು.

ಚುನಾವಣೆಯಂದು ಮತದಾನದ ಕೇಂದ್ರದೊಳಗೆ ಮತ ಹಾಕುವವರನ್ನು ಹೊರತುಪಡಿಸಿ 100 ಮೀ. ಆಸುಪಾಸು ಯಾರೂ ಹೋಗುವಂತಿಲ್ಲ. ಅಂಗವಿಕಲರು, ವೃದ್ಧರು, ಕುರುಡರು ಮತ್ತು ಇತರ ಅಂಗವೈಕಲ್ಯ ಹೊಂದಿರುವವರನ್ನು ಮತದಾನದ ಕೇಂದ್ರದತ್ತ ಒಳಗಡೆ ಕರೆದುಕೊಂಡು ಹೋಗಲು ಆಯೋಗವೇ ವ್ಯವಸ್ಥೆ ಮಾಡಲಿದೆ ಎಂದರು.

ಸಂವಿಧಾನಾತ್ಮಕವಾಗಿ ಎಲ್ಲರಿಗೂ ಸ್ವಾತಂತ್ರ್ಯ ಇದ್ದು ಮತದಾರರಿಗೆ ಯಾವುದೇ ರೀತಿಯ ಭಯ ಹುಟ್ಟಿಸುವ ಹಾಗೂ ಗಲಾಟೆ ಮಾಡುವ ವಾತಾವರಣ ನಿರ್ಮಿಸಬಾರದು. ಪೋಲಿಂಗ್‌ ಬೂತ್‌ಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೆ ಚುನಾವಣಾ ವೀಕ್ಷಕರ ಗಮನಕ್ಕೆ ತರಬೇಕು. ಇದು ಆಯಾ ರಾಜಕೀಯ ಪಕ್ಷಗಳ ಸಂಘಟಕರ ಜವಾಬ್ದಾರಿ. ಯಾವುದೇ ಆಹಿತಕರ ಘಟನೆ ನಡೆಯದಂತೆ ಚುನಾವಣಾ ಆಯೋಗದ ನಿರ್ದೇಶನಗಳನ್ನು ಎಲ್ಲ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಜೆ.ಶರಣಪ್ಪ ಗೌಡ, ಜಿಲ್ಲಾ ಕಾರ್ಯದರ್ಶಿ ಕೆ.ಉಮೇಶ ಪಾಟೀಲ, ಯುವ ಕಾರ್ಯದರ್ಶಿ ರಾಜಶೇಖರ ಪಾಟೀಲ, ಕಾಂಗ್ರೆಸ್‌ ಜಿಲ್ಲಾ ಕಾರ್ಯದರ್ಶಿ ಪವನ್‌ ಪಾಟೀಲ ಹಾಗೂ ಎನ್‌.ಪರಪ್ಪ, ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ ಸೇರಿ ಇತರರು ಪಾಲ್ಗೊಂಡಿದ್ದರು ಅನುಮತಿ ಕಡ್ಡಾಯ ಸಾರ್ವಜನಿಕ ಸ್ಥಳ ಹಾಗೂ ಖಾಸಗಿ ವ್ಯಕ್ತಿಗಳ ಮನೆ ಅಥವಾ ಸ್ಥಳಗಳಲ್ಲಿ ಪೋಸ್ಟರ್‌, ಬ್ಯಾನರ್‌ ಹಾಕಬೇಕಾದರೆ ಅನುಮತಿ ಪಡೆಯುವುದು ಕಡ್ಡಾಯ. ರಾಜಕೀಯ ಪಕ್ಷಗಳ ಯಾವುದೇ ಸಭೆ, ಸಮಾರಂಭ ಮಾಡುವ ಮುನ್ನ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆಯಬೇಕು. ಅವರಿಗೆ ಆ
ಕಾರ್ಯಕ್ರಮದ ಎಲ್ಲ ಮಾಹಿತಿಗಳನ್ನು ನೀಡಬೇಕು.
 ಬಿ. ಶರತ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.