ವೈಜ್ಞಾನಿಕ ಕೃಷಿ ಪದ್ಧತಿಯಿಂದ ಲಾಭ
Team Udayavani, Mar 8, 2019, 11:50 AM IST
ಸಿಂಧನೂರು: ರೈತರು ಕೃಷಿ ಜತೆಗೆ ಇತರೆ ಬೆಳೆ ಬೆಳೆಯಲು ಮುಂದಾದಲ್ಲಿ ಕೃಷಿಯಲ್ಲಿ ಲಾಭ ಕಂಡುಕೊಳ್ಳಲು ಸಾಧ್ಯ. ರೈತರು ವೈಜ್ಞಾನಿಕ ರೀತಿಯಲ್ಲಿ ಕೃಷಿ ಮಾಡಲು ಮುಂದಾಗಬೇಕು ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ಪ್ರಾಥಮಿಕ ಸಹಕಾರಿ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ವತಿಯಿಂದ ಗುರುವಾರ ನಗರದ ಕನಕದಾಸ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ 2 ಕೋಟಿ 50 ಲಕ್ಷ ಸಾಲ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಬರೀ ಮಳೆ ಅವಲಂಬಿತ ಕೃಷಿಯಲ್ಲಿ ತೊಡಗಿದರೆ ಕಷ್ಟ ಎದುರಿಸಬೇಕಾಗುತ್ತದೆ. ಅದಕ್ಕಾಗಿ ರೈತರು ಕೃಷಿ ಬೆಳೆ ಜತೆಗೆ ಇತರೆ ಬೆಳೆಯನ್ನು ಬೆಳೆಯುವುದು ಅವಶ್ಯ.
ಜಪಾನ್ ಹಾಗೂ ಇಸ್ರೇಲ್ ಸಣ್ಣ ದೇಶಗಳಾದರೂ ಕೃಷಿ ಬೆಳೆ ಜತೆಗೆ ಇತರ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಅವರ ಹಾಗೆ ನಮ್ಮ ರೈತರು ಮುನ್ನುಗ್ಗುವಪ್ರಯತ್ನ ಮಾಡಬೇಕು. ಆಗ ಮಾತ್ರ ಆರ್ಥಿಕವಾಗಿ ಸದೃಢರಾಗಲು ಸಾಧ್ಯ ಎಂದರು.
ಕಷ್ಟದಲ್ಲಿರುವ ರೈತರನ್ನು ಮೇಲೆತ್ತುವ ಕೆಲಸವನ್ನು ಸಂಸ್ಥೆಯ ನಿರ್ದೇಶಕ ಮಂಡಳಿ ಮಾಡಬೇಕು. ಪ್ರಸ್ತುತ ಸಹಕಾರಿ ಬ್ಯಾಂಕ್ಗಳ ಆದಾಯ ಕಡಿಮೆ ಆಗುತ್ತಿದೆ. ಆದರೆ ಸಾಲ ಮರುಪಾವತಿ ಆಗದ ಕಾರಣ ಸಹಕಾರಿ ಬ್ಯಾಂಕ್ಗಳ ಪ್ರಗತಿಗೆ ಹಿನ್ನಡೆ ಆಗುತ್ತಿದೆ. ಸಾಲ ಪಡೆದ ರೈತರು ಸಕಾಲದಲ್ಲಿ ಸಾಲ
ಮರುಪಾವತಿಸಿದರೆ ಸಹಕಾರಿ ಬ್ಯಾಂಕ್ ಗಳ ಪ್ರಗತಿ ಸಾಧ್ಯ ಎಂದರು.
ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಂ. ದೊಡ್ಡಬಸವರಾಜ ಮಾತನಾಡಿದರು.ಬ್ಯಾಂಕಿನ ನಿರ್ದೇಶಕರಾದ ರಾಯನಗೌಡ, ಮಲ್ಲಪ್ಪ, ಚೌಡಪ್ಪ, ಸಿದ್ಧನಗೌಡ, ಜೆಡಿಎಸ್ ವಕ್ತಾರ ಬಸವರಾಜ ನಾಡಗೌಡ, ರಂಗನಗೌಡ ಗೊರೇಬಾಳ, ಟಿ.ರಮೇಶಪ್ಪ ದಿದ್ದಿಗಿ, ಹನುಮಂತಪ್ಪ, ಹಂಪಯ್ಯಸ್ವಾಮಿ ರಾವಿಹಾಳ, ಅಮರೇಶ ಅಂಗಡಿ, ನಲ್ಲ ವೆಂಕಟೇಶ್ವರ ರಾವ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು