ಮೂರೇ ತಿಂಗಳಲ್ಲಿ ರಸ್ತೆ ಹಾಳು


Team Udayavani, Mar 9, 2019, 11:49 AM IST

ray-2.jpg

ಲಿಂಗಸುಗೂರು: ಈ ರಸ್ತೆ ನಿರ್ಮಿಸಿ ಇನ್ನೂ ಮೂರು ತಿಂಗಳು ಕಳೆದಿಲ್ಲ ಆಗಲೇ ಬಿರುಕು ಬಿದ್ದಿದೆ. ಈಗಾಗಲೇ ಕೆಲವೆಡೆ ಕಿತ್ತು ಹೋಗಿ ಬರೀ ಕಲ್ಲುಗಳು ಕಾಣುತ್ತಿವೆ. ಕೆಲವೆಡೆ ರಸ್ತೆ ಕುಸಿಯುವ ಮೂಲಕ ಕಾಮಗಾರಿಯ ಅಸಲಿ ಮುಖ ಅನಾವರಣಗೊಂಡಿದೆ. ಪಟ್ಟಣದ ಏಳನೇ ವಾರ್ಡ್‌ನ ಶಾಂಭವಿ ಮಠದ ಹತ್ತಿರ ಎಚ್‌ಕೆಆರ್‌ ಡಿಬಿಯ 90 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಿದ ಸಿಸಿ ರಸ್ತೆ ಈಗಲೇ ಕಾಮಗಾರಿ ನಡೆದದ್ದು ಕಳಪೆ ಎಂಬುದನ್ನು ಸಾಬೀತುಪಡಿಸಿದೆ.

ಡಾಂಬಾರ್‌ ರಸ್ತೆ ನಿರ್ಮಿಸುವುದರಿಂದ ಬೇಗ ಕಿತ್ತು ಹಾಳಾಗಿ ಹೋಗುತ್ತದೆ ಎಂದು ಸರ್ಕಾರ ಸಿಸಿ ರಸ್ತೆ ಕಾಮಗಾರಿಗೆ ಹೆಚ್ಚು ಆದ್ಯತೆ ನೀಡುತ್ತಿದೆ. ಆದರೆ ಗುತ್ತಿಗೆದಾರರು ಇಂತಹ ರಸ್ತೆಗಳನ್ನು ಉತ್ತಮವಾಗಿ ನಿರ್ಮಿಸುವುದಿಲ್ಲ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾಮಗಾರಿ ಕಳಪೆ ನಡೆದರೂ ಪ್ರಶ್ನಿಸುವುದಿಲ್ಲ. ಹೀಗಾಗಿ ತಾವು ಮಾಡಿದ್ದೇ ಕಾಮಗಾರಿ ಎಂಬಂತಾಗಿದೆ.

ಕಾಮಗಾರಿ ವೇಳೆ ಸರಿಯಾಗಿ ಕ್ಯೂರಿಂಗ್‌ ಮಾಡಿಲ್ಲ. ಹೀಗಾಗಿ ರಸ್ತೆ ಬಹು ಬೇಗನೆ ದುಃಸ್ಥಿತಿಗೆ ತಲುಪಿದೆ. ಇದು ಹೊಸ ಲೇಔಟ್‌ ಆಗಿದ್ದರಿಂದ ಇಲ್ಲಿ ವಾಹನಗಳ ಸಂಚಾರವೂ ಅಷ್ಟಿಲ್ಲ. ಇನ್ನು ಬೃಹತ್‌ ವಾಹನಗಳ ಸಂಚಾರವಂತೂ ಇಲ್ಲವೇ ಇಲ್ಲ. ಆದರೂ ರಸ್ತೆಯಲ್ಲಿ ಬಿರುಕು, ಕುಸಿತ ಉಂಟಾಗಿ ಗುತ್ತಿಗೆದಾರರು ಮಾಡಿದ ಕಾಮಗಾರಿಯ ನಿಜ ಬಣ್ಣ ತಾನೇ ಬಯಲಾಗಿದೆ ಎಂದು ನಿವಾಸಿಗಳು ದೂರಿದ್ದಾರೆ.
 
ಅಧಿಕಾರಿಗಳು ಮೌನ: ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಹಾಗೂ ಕಿರಿಯ ಅಭಿಯಂತರರಾಗಲಿ ಸ್ಥಳಕ್ಕೆ ಭೇಟಿ ನೀಡಿಲ್ಲ. ಹೀಗಾಗಿ ಹೇಳ್ಳೋರು, ಕೇಳ್ಳೋರು ಯಾರು ಇಲ್ಲವೆಂದು ಗುತ್ತಿಗೆದಾರರು ತಮ್ಮ ಮನಸೋ ಇಚ್ಛೆಯಂತೆ ಕಾಮಗಾರಿ ಮಾಡಿದ್ದರಿಂದ ಲಕ್ಷಾಂತರ ರೂ. ಅನುದಾನ ಕಾಮಗಾರಿ ಹಳ್ಳ ಹಿಡಿಯುವಂತೆ ಮಾಡಿದ್ದಾರೆ.

ಕಾಮಗಾರಿ ದುಃಸ್ಥಿತಿ ಬಗ್ಗೆ ಇಲ್ಲಿನ ನಿವಾಸಿಗಳು ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಜರುಗಿಸದೇ ಮೌನಕ್ಕೆ ಶರಣಾಗಿದ್ದಾರೆ. ಕಳಪೆ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಈ ಬಗ್ಗೆ ಮೇಲಾಧಿ ಕಾರಿಗಳು ಗಮನ ಹರಿಸುವಂತೆ ನಿವಾಸಿಗಳು ಆಗ್ರಹಿಸಿದ್ದಾರೆ. 

7ನೇ ವಾರ್ಡ್‌ನಲ್ಲಿ ಸಿಸಿ ರಸ್ತೆಗಾಗಿ ಹಿಂದಿನ ಶಾಸಕರು ಅತಿ ಆಸಕ್ತಿ ವಹಿಸಿ ಎಚ್‌ಕೆಆರ್‌ಡಿಬಿ ವತಿಯಿಂದ 90 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದಾರೆ. ಆದರೆ ಗುತ್ತಿಗೆದಾರರ ಬೇಜವಾಬ್ದಾರಿಯಿಂದ ಕಾಮಗಾರಿ ಹಾಳಾಗಿದೆ. ಪುರಸಭೆ ಅಧಿಕಾರಿಗಳು ಕಾಮಗಾರಿ ಬಿಲ್‌ ತಡೆ ಹಿಡಿದು, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು.
 ಗಿರಿಜಮ್ಮ ವಿರೂಪಾಕ್ಷಿ, 7ನೇ ವಾರ್ಡ್‌ ಪುರಸಭೆ ಸದಸ್ಯೆ

7ನೇ ವಾರ್ಡ್‌ನಲ್ಲಿ ರಸ್ತೆ ಕಾಮಗಾರಿಗೆ ಇನ್ನೂ ಬಿಲ್‌ ಪಾವತಿಸಿಲ್ಲ. ಮೂರನೇ ಪಕ್ಷದವರಿಂದ ಪರಿಶೀಲಿಸಿದ ನಂತರ ಬಿಲ್‌ ಮಾಡಲಾಗುತ್ತದೆ.  ಹಸನ್‌,ಕಿರಿಯ ಅಭಿಯಂತರರು ಪುರಸಭೆ ಲಿಂಗಸುಗೂರು 

„ಶಿವರಾಜ ಕೆಂಭಾವಿ

ಟಾಪ್ ನ್ಯೂಸ್

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.