40 ಎಕರೆಯಲ್ಲಿ ಗುಣಮಟ್ಟದ ರಾಗಿ ಬೆಳೆದ ರೈತ


Team Udayavani, Dec 21, 2017, 5:45 PM IST

ram-1.jpg

ಮಾಗಡಿ: ಬಡ ರೈತರ ಬೆಲೆಯಾಗಿದ್ದ ರಾಗಿ ಇಂದು ಉತ್ತಮ ಆದಾಯ ನೀಡುವ ಬೆಳೆಯಾಗಿದ್ದು , ರೈತರು ದೊಡ್ಡ ಮಟ್ಟದಲ್ಲಿ ರಾಗಿ ಬೆಳೆ ಬೆಳೆಯುವ ಮೂಲಕ ತಮ್ಮ ಆದಾಯ ವೃದ್ಧಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ತಾಲೂಕಿನ ತಗ್ಗಿಕುಪ್ಪೆಗ್ರಾಮದ ಮಂಡಿ ರಂಗೇಗೌಡ ಎಂಬುವವರು ಸುಮಾರು 40 ಎಕರೆ ಬಂಪರ್‌ ರಾಗಿ ಬೆಳದು ರಾಗಿ ಫ‌ಸಲಿನಿಂದ ಲಾಭಗಳಿಸಬಹುದು ಎಂದು ತೋರಿಸಿಕೊಟ್ಟಿದ್ದಾರೆ.

ಕಲ್ಲಾ ಬೆಟ್ಟದ ತಪ್ಪಲಿನಲ್ಲಿ ಸುಮಾರು 40 ಎಕರೆ ಜಮೀನಿನಲ್ಲಿ 700 ಕ್ಕೂ ಅಧಿಕ ಮೂಟೆ ರಾಗಿಯನ್ನು ತಗ್ಗಿಕುಪ್ಪೆ ಗ್ರಾಮದ ಮಂಡಿ ರಂಗೇಗೌಡರು ರಾಗಿ ಜಮೀನಿನಲ್ಲಿ ಬೆಳೆದಿದ್ದು, ಜಿಲ್ಲೆಯಲ್ಲಿಯೇ ಅತೀ ಹೆಚ್ಚು ರಾಗಿ ಬೆಳೆ ಪ್ರದೇಶ ಎನ್ನಬಹುದಾಗಿದ್ದು, ಈ ಜಮೀನಿನಲ್ಲಿ ಈಗಾಗಲೇ ರಾಗಿ ಕಟಾವ್‌ ಮಾಡಿ ಒಕ್ಕಣೆಗಾಗಿ ಎರಡು ದೊಡ್ಡ ಮೆದೆಗಳನ್ನು ಹಾಕಲಾಗಿದ್ದು, ಒಂದು ಮೆದೆ ಸುಮಾರು 126 ಅಡಿ (25 ಮಾರು) ಹಾಗೂ 2 ನೇ ಮೆದೆ 109 ಅಡಿ (20 ಮಾರು) ಉದ್ದವಿದ್ದು, ಸುಮಾರು 700 ಮೂಟೆಗೂ ಅಧಿಕ ರಾಗಿಯಾಗುವ ನಿರೀಕ್ಷೆ ಇದೆ. 

ರಾಗಿ ಬೆಳೆಯಿಂದ ಲಕ್ಷಾಂತರ ಲಾಭ: ಮಾಗಡಿ ಭಾಗದಲ್ಲಿ ರಾಗಿ ಪ್ರಮುಖ ಬೆಳೆಯಾಗಿದ್ದು, ರಂಗೇಗೌಡ ಅವರು ಒಟ್ಟು 80 ಎಕರೆ ಜಮೀನಿನಲ್ಲಿ 40 ಎಕರೆ ತೆಂಗು, ಅಡಿಕೆ ಬೆಳೆದಿದ್ದು, ಇನ್ನುಳಿದ 40 ಎಕರೆಯಲ್ಲಿ, ಎಂಆರ್‌.6 ಮತ್ತು ಎಂ.ಆರ್‌.2 ತಳಿಯ ರಾಗಿಯನ್ನು ಬೆಳೆದಿದ್ದಾರೆ. 40 ಎಕರೆ ಪ್ರದೇಶದಲ್ಲಿ ರಾಗಿ ಕೃಷಿಗೆ ಈ ವರೆಗೆ ಸುಮಾರು 8 ಲಕ್ಷ ರೂ.ಖರ್ಚು ಮಾಡಿದ್ದು, ಈಗ ಒಂದು ಮೂಟೆ ರಾಗಿಗೆ (100 ಕೆ.ಜಿ.) 2300 ರೂ. ಬೆಲೆಯಿದ್ದು, 15 ಲಕ್ಷ ರೂ.ಗೆ ಮಾರಾಟವಾಗಬಹುದು ಎಂದು ಅಂದಾಜಿಸಲಾಗಿದೆ. ಇದರ ಜೊತೆಗೆ 8 ಲಕ್ಷ ರೂ. ಮೌಲ್ಯದ ಹುಲ್ಲು ದೊರಕಲಿದ್ದು, ಹಸುಗಳಿಗೆ ಹುಲ್ಲನ್ನು ಖರೀದಿಸುವುದು ತಪ್ಪಿಸಬಹುದು ಎನ್ನಲಾಗಿದೆ. 

ಕಟಾವು ಮಾಡಲು ಆಂಧ್ರದ ಕೂಲಿಗಾರರು: ಕೃಷಿ ಚಟುವಟಿಕೆಗಳಿಗೆ ಕೂಲಿಕಾರರ ಸಮಸ್ಯೆ ಇರುವುದರಿಂದ ನೆರೆಯ ಅಂಧ್ರಪ್ರದೇಶದಿಂದ ಸುಮಾರು 70 ಕ್ಕೂ ಅಧಿಕ ಕೂಲಿ ಕಾರ್ಮಿಕರನ್ನು ಕರೆಸಲಾಗಿದ್ದು, 40 ಎಕರೆ ರಾಗಿ ಬೆಳೆ ಕಟಾವು ಮಾಡಿ ಮೆದೆ ಹಾಕಲು 3 ಲಕ್ಷಕ್ಕೂ ಅಧಿಕ ಖರ್ಚಾಗಿದೆ. ಕೂಲಿ ಕಾರ್ಮಿಕರ ಸಮಸ್ಯೆಯಿಂದ ಯಂತ್ರಗಳನ್ನು ಬಳಸಿ ಕಣ ಮಾಡಲಾಗುತ್ತದೆ.

ರಾಗಿ ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದರೆ ಹೆಚ್ಚು ಅದಾಯ ಬರುವುದಿಲ್ಲ ಎಂಬ ಕಾರಣದಿಂದ ಜಿಲ್ಲೆಯ ರೈತರು ವಾಣಿಜ್ಯ ಬೆಳೆಗಳನ್ನು ಬೆಳೆಯುವ ಕಡೆಗೆ ಹೆಚ್ಚಿನ ಗಮನ ನೀಡುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ರಾಗಿ ಬೆಳೆಯುವವರ
ಪ್ರಮಾಣ ಇಳಿಮುಖವಾಗುತ್ತಿದೆ. ಇಂತಹ ಸಮದಲ್ಲಿಯೂ ಸಹ ರಂಗೇಗೌಡರು 40 ಎಕರೆ ಪ್ರದೇಶದಲ್ಲಿ ರಾಗಿ ಬೆಳೆ ಬೆಳದಿರುವುದು ಪ್ರಶಂಸನೀಯ. ರಂಗೇಗೌಡರ ಜಮೀನಿನಲ್ಲಿ ಹಾಕಿರುವ ಎರಡು ಮೆದೆಗಳು ರೈತರ ಆಕರ್ಷಣೆಯ ಕೇಂದ್ರವಾಗಿ ಮಾರ್ಪಟ್ಟಿದೆ.
 ●ಅಶೋಕ್‌, ಸಹಾಯಕ ಕೃಷಿ ನಿರ್ದೇಶಕ.

ರಾಗಿ ಬೆಳೆ ಬೆಳೆಯುವುದೇ ಕಡಿಮೆಯಾಗಿದೆ, ಕೂಲಿ ಆಳುಗಳ ಸಮಸ್ಯೆ ಹೆಚ್ಚಾಗಿದ್ದು, ಸರ್ಕಾರ ರಾಗಿಗೆ ಪ್ರೋತ್ಸಾಹ ಧನ ನೀಡುವುದರ ಜೊತೆಗೆ ಈಗಿನಿಂದಲೇ ರಾಗಿ ಖರೀದಿಸುವ ಕೇಂದ್ರ ಆರಂಭಿಸಿ ರೈತರಿಗೆ ಉತ್ತಮ ಬೆಲೆ ಸಿಗುವಂತೆ
ಕ್ರಮಕೈಗೊಳ್ಳಬೇಕು.
 ●ಲೋಕೇಶ್‌, ತಾಲೂಕು ರೈತ ಸಂಘ ಅಧ್ಯಕ

 ●ತಿರುಮಲೆ ಶ್ರೀನಿವಾಸ್

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.