ರಾಮನಗರ ಮ್ಯಾರಥನ್‌ನಲ್ಲಿ ಸಾವಯವ ಕೃಷಿ ಅರಿವು


Team Udayavani, Feb 12, 2018, 4:23 PM IST

Dog-Missing-1.jpg

ರಾಮನಗರ: ಬೆಳ್ಳಂಬೆಳಗ್ಗೆ 6.30ರ ವೇಳೆಗೆ ಸೂರ್ಯನ ಬೆಳಕು ಮೂಡುವ ವೇಳೆಗೆ ಆಯೋಜಕರು ನೀಡಿದ ಟೀ ಶರ್ಟ್‌,  ನಂಬರ್‌ ಪ್ಲೇಟ್‌ ಧರಿಸಿದ್ದ ಉತ್ಸಾಹಿ ಓಟಗಾರರಿಗೆ ವಾತಾವರಣವೂ ಸಹಕರಿಸಿತು. ಸೂರ್ಯನ ತಿಳಿ ಕಿರಣಗಳು, ಹಸಿರಿನಿಂದ ಕಂಗೊಳಿಸುತ್ತಿದ್ದ ಪ್ರಕೃತಿ, ಸುತ್ತಮುತ್ತಲು  ಬೆಟ್ಟಗುಡ್ಡಗಳ ರಮ್ಯ ನೋಟ, ಅಪ್ಪಟ ಗ್ರಾಮೀಣ ಸೊಗಡು ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಓಟಗಾರರ ಹುಮ್ಮಸನ್ನು ಇಮ್ಮಡಿಗೊಳಿಸಿದವು. ರೀಡಿಫೈನ್‌ 21.1 ಕಿಮೀ, ರಾಕ್‌ 11 ಕಿಮೀ, ರೂರಲ್‌ 7 ಕಿಮೀ,  ವಿದ್ಯಾರ್ಥಿ 7 ಕಿಮೀ, ಹಿರಿಯ 7 ಕಿಮೀ, ಓಟ ಹೀಗೆ 5 ವಿಭಾಗಗಳಲ್ಲಿ ಓಟ ನಡೆಯಿತು.

ಮ್ಯಾರಥನ್‌ನಲ್ಲಿ ವಿದೇಶಿಗರ ಆಕರ್ಷಣೆ: ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಟೆಕ್ಕಿಗಳು, ಸಾಮಾನ್ಯ ನಾಗರಿಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಸುಮಾರು 1200ಕ್ಕೂ ಹೆಚ್ಚು ಮಂದಿ  ಸಾವಯವ ಕೃಷಿ ಪದ್ಧತಿ ಮತ್ತು ಈ ಪದ್ಧತಿಯಿಂದ ಬೆಳೆದ ಆಹಾರ ಪದಾರ್ಥಗಳಿಗೆ ಪ್ರೋತ್ಸಾಹ ನೀಡುವ ಪ್ರತಿಜ್ಞೆಯೊಂದಿಗೆ ಅತ್ಯಂತ ಉತ್ಸಾಹದಿಂದ ಓಟ ನಡೆಸಿದರು. ಈ ಬಾರಿಯ ಓಟದಲ್ಲಿ ಕೆಲವು ವಿದೇಶಿಯರು, 25ಕ್ಕೂ ಹೆಚ್ಚು ರೈತರು  ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಹಿರಿಯ ನಾಗರಿಕರು ಭಾಗಿ: ಯಲ್ಲೋ ಆಂಡ್‌ ರೆಡ್‌ ಫೌಂಡೇಶನ್‌ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಮ್ಯಾರಥಾನ್‌ ಆಯೋಜನೆಯಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌ ಇಲಾಖೆಗಳು ಮ್ಯಾರಥಾನ್‌ಗೆ ಸಹಕಾರ ನೀಡಿದ್ದವು. ಮ್ಯಾರಥಾನ್‌ನಲ್ಲಿ ಹಿರಿಯ ನಾಗರಿಕರು ಸೇರಿದಂತೆ ಹದಿಹರೆಯದ ಬಾಲಕ, ಬಾಲಕಿಯರು ಭಾಗವಹಿಸಿದ್ದರು. ಓಟ ಮುಗಿಸಿ ಬಂದವರಿಗೆ ಗಣ್ಯರು ಮೆಡಲ್‌, ಪ್ರಶಸ್ತಿ ಪತ್ರಗಳನ್ನು ಕೊಟ್ಟು ಪ್ರೋತ್ಸಾಹಿಸಿದರು. 300ಕ್ಕೂ ಹೆಚ್ಚು ಮಂದಿಗೆ ಸಸಿಗಳನ್ನು ವಿತರಿಸಲಾಯಿತು. ಓಟದ ಮಾರ್ಗದಲ್ಲಿ ಸಿಗುವ 3 ಸರ್ಕರಿ ಶಾಲೆಗಳ ವಿದ್ಯಾರ್ಥಿಗಳಿಗೆ ಜಾಮಿಟ್ರಿ ಬಾಕ್ಸ್‌ ಮತ್ತು ಕ್ರೆಯಾನ್‌ಗಳನ್ನು ಸ್ಪಂದನಾ ಚಾರಿಟಬಲ್‌ ಟ್ರಸ್ಟ್‌ ಪರವಾಗಿ ಓಟಗಾರರು ನೀಡಿದರು.

ಎಸ್ಪಿ ಬಿ.ರಮೇಶ್‌, ಪ್ರಾದೇಶಿಕ ನಿರ್ದೇಶಕ ನಂಬಿರಾಜನ್‌, ಚಿತ್ರನಟರಾದ ಚಂದನ್‌ಗೌಡ, ವಿನಾಯಕ್‌ ಜೋಷಿ, ರಾಮನಗರ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮೇಲಿಂಗು, ಯಲ್ಲೋ ಆ್ಯಂಡ್‌ ರೆಡ್‌ ಸಂಸ್ಥೆಯ ಅಮಿತ್‌ರಾಜ್‌ ಶಿವು, ನಿರ್ದೇಶಕರಾದ ಆನಂದ ಶಿವ, ಗೇಲ್‌ ಇಂಡಿಯಾ ಲಿಮಿಟೆಡ್‌ನ‌ ಶ್ಯಾಮ್‌ ಕೋಟ್ಲ,  ರೋಟರಿ ಸಿಲ್ಕ್ ಸಿಟಿಯ ಅಧ್ಯಕ್ಷ ಎಲ್‌.ಪ್ರಭಾಕರ್‌, ಸದಸ್ಯರಾದ ಕೆ.ವಿ.ಉಮೇಶ್‌, ಅನುರಾಧಾ, ಕೆಂಗಲ್‌ ಹನುಮಂತಯ್ಯ ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರದ ಕಾರ್ಯದರ್ಶಿ ರಾಘವೇಂದ್ರ ಆಚಾರ್‌ ಭಾಗವಹಿಸಿದ್ದರು.

ಎಸ್ಪಿ ಹುಟ್ಟುಹಬ್ಬಕ್ಕೆ ಗಿಫ್ಟ್: ಎಸ್ಪಿ ರಮೇಶ್‌ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಯಲ್ಲೋ ಆ್ಯಂಡ್‌ ರೆಡ್‌ ಸಂಸ್ಥೆಯ ಪದಾಧಿಕಾರಿಗಳು ಇದೇ ವೇಳೆ ಸರಳ ಕಾರ್ಯಕ್ರಮ ಹಮ್ಮಿಕೊಂಡರು.  ಎಸ್ಪಿ ರಮೇಶ್‌ ಕೇಕ್‌ ಕತ್ತರಿಸಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು.

ಸಾವಯವ ಕೃಷಿ ಬಗ್ಗೆ ಜನರಲ್ಲಿ ಜಾಗೃತಿ: ಡೀಸಿ ಮಮತಾ
ರಾಮನಗರ:
ಸಾವಯವ ಕೃಷಿ ಬಗ್ಗೆ ಸಾಮಾನ್ಯ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಲ್ಲಿ  ರಾಮನಗರ ಮ್ಯಾರಥಾನ್‌ ನಡೆದಿದ್ದು ನಾಗರಿಕರು ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದು ಜಿಲ್ಲಾಧಿಕಾರಿ  ಡಾ.ಬಿ.ಆರ್‌.ಮಮತಾ ಹೇಳಿದರು. ತಾಲೂಕಿನ ಬಸವನಪುರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ  6.30ರ ವೇಳೆಗೆ ರಾಮನಗರ ಮ್ಯಾರಥಾನ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಯಲ್ಲೋ ಆ್ಯಂಡ್‌ ರೆಡ್‌ ಫೌಂಡೇಷನ್‌ನ ವ್ಯವಸ್ಥಾಪಕ ನಿರ್ದೇಶಕ ಆನಂದ ಶಿವ ಮಾತನಾಡಿ, ಸಾವಯವ ಕೃಷಿ ಪದ್ಧತಿ ಗ್ರಾಹಕರ ಮಟ್ಟಿಗೆ ಚಿಂತಿಸುವುದಾದರೆ ಆರೋಗ್ಯಕರ ಆಹಾರ ಪದಾರ್ಥಗಳು ದೊರೆಯುವುದರ ಜೊತೆಗೆ ಪರಿಸರದ ಮೇಲೂ ಯಾವ ದುಷ್ಪರಿಣಾಮೂ ಬೀರುವುದಿಲ್ಲ ಎಂದರು.  

ಆರೋಗ್ಯ ಚೆನ್ನಾಗಿದ್ದರೆ ಮಾತ್ರ ಮರಣಾನಂತರ ಅಂಗಾಂಗ ದಾನವೂ ಸಾಧ್ಯ. 2025ರ ಹೊತ್ತಿಗೆ ರಾಮನಗರ ಅಭಿವೃದ್ಧಿ ಪಥದ ಚಿಂತನೆ ಬಗ್ಗೆ ಮನವರಿಕೆ ಮಾಡುವುದು ಸಹ ಮ್ಯಾರಥಾನ್‌ನ ಮತ್ತೂಂದು ಉದ್ದೇಶವಾಗಿತ್ತು ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.