ಜಾನಪದ ಕಲೆಗಳಿಗೆ ನಾಡಿನಾದ್ಯಂತ ಮನ್ನಣೆ


Team Udayavani, Apr 13, 2018, 12:48 PM IST

Kerala-Floods-new.jpg

ಮಾಗಡಿ: ಜನಪದ ಕಲೆಗಳು ನಾಡಿನಾದ್ಯಂತ ಜನಮನ್ನಣೆಗಳಿಸಿದೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ನಿವೃತ್ತ ಸಹಾಯಕ ನಿರ್ದೆಶಕ ತ್ಯಾಗರಾಜು ತಿಳಿಸಿದರು. ಕುದೂರು ಹೋಬಳಿ ಕಣ್ಣೂರಿನಲ್ಲಿ ಏರ್ಪಡಿಸಿದ್ದ ಆದಿಶಕ್ತಿ ಗ್ರಾಮದೇವತಾ ಜಾತ್ರಾ ಮಹೋತ್ಸವ ಹಾಗೂ ಅದ್ಧೂರು ಜಾನಪದ ಕಲಾಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಅಧುನಿಕ ತಂತ್ರಜ್ಞಾನದ ಭರಾಟೆಯ ನಡುವೆಯೂ ಜನಪದ ಕಲೆ ಜೀವಂತವಾಗಿರುವುದಕ್ಕೆ ಕಣ್ಣೂರು ಗ್ರಾಮ ಸಾಕ್ಷಿಯಾಗಿದೆ. ಎಂದರು.

ಜನಪದ ಕಲೆ, ಯಕ್ಷಗಾನ, ವೀರಗಾಸೆ, ಜವಳಿಕುಣಿತ, ಪೂಜಾ ಕುಣಿತ, ಪಟದ ಕುಣಿತ ಸೇರಿದಂತೆ ಅನೇಕ ಕಲೆಗಳು ಜನಸಾಮಾನ್ಯರಲ್ಲಿ ಹಾಸುಹೊಕ್ಕಾಗಿದೆ. ಸ್ನೇಹ, ವಿಶ್ವಾಸ, ಸೌಹಾರ್ದತೆ ಸಹಬಾಳ್ವೆ ಅಭಿರುಚಿಯ ಚಿಲುಮೆಯಾಗಿದೆ ಎಂದು ಹೇಳಿದರು.

ಗ್ರಾಮದ ಹಿರಿಯ ಮುಖಂಡ ಕಣ್ಣೂರು ಚಂದ್ರಶೇಖರ್‌ ಮಾತನಾಡಿ, ಪ್ರತಿವರ್ಷವೂ ನಡೆಯುವ ಮಾರಮ್ಮದೇವಿ, ಪಟ್ಟಲದಮ್ಮ ದೇವಿ ಜಾತ್ರೆ ಮಹೋತ್ಸವಗಳಲ್ಲಿ ಜನಪದ ಕಲಾ ಉತ್ಸವಗಳನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ. ವೀರಗಾಸೆ ನೃತ್ಯ ಗ್ರಾಮಸ್ಥರ ಕಣ್ಮನಸೆಳೆದಿದೆ. ಅದರಲ್ಲೂ ನಾಗಮಂಗಲದ ಲಿಂಗದ ವೀರ ಮಹದೇವಪ್ಪನವರ ವೀರಗಾಸೆ ನೃತ್ಯ ಜನರ ಹೊಗಳಿಕೆ ಪಾತ್ರವಾಗಿದೆ ಎಂದರು.

ಕಾಂಗ್ರೆಸ್‌ ಮುಖಂಡ ಕಣ್ಣೂರು ಜಯಶಂಕರ್‌ ಮಾತನಾಡಿ, ಇತ್ತೀಚಗೆ ಜನರು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿ ಟಿ.ವಿ. ಮೊಬೈಲ್‌ಗ‌ಳಿಗೆ ಬಲಿಯಾಗಿ ಜನಪದ ಕಲೆಯನ್ನು ಮರೆಯುತ್ತಿದ್ದಾರೆ. ಸರ್ಕಾರ ಜನಪದ ಕಲೆಗೆ ಹೆಚ್ಚು ಒತ್ತು ನೀಡಬೇಕು. ಜೀವಂತ ಜನಪದ ಕಲೆಯನ್ನು ರಾಷ್ಟ್ರ ವ್ಯಾಪ್ತಿಯಲ್ಲಿ ಜಾಗೃತಗೊಳಿಸುವಂತ ಕಾರ್ಯಕ್ರಮವನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು. 

ಜನಪದ ಸಮಿತಿ ಅಧ್ಯಕ್ಷ ಕೆ.ಎಸ್‌.ಗುರುಮೂರ್ತಿ, ನಿವೃತ್ತ ಪೊಲೀಸ್‌ ಅಧಿಕಾರಿ ಕೆ. ನಾಗರಾಜು, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಶಿವರುದ್ರಪ್ಪ, ರಾಷ್ಟ್ರ ಪ್ರಶಸ್ತಿ ವಿಜೇತ ಕುಮಾರಯ್ಯ, ಚಿಕ್ಕ ಸಿದ್ದಪ್ಪ, ಕೆ.ಆರ್‌. ಶರತ್‌ ಚಂದ್ರ, ನಿವೃತ್ತ ಶಿಕ್ಷಕ ಪ್ರಭುದೇವರ್‌, ಅಶ್ವತ್‌ ನಾರಾಯಣ್‌ ಸಿಂಗ್‌, ತಾಪಂ ಸದಸ್ಯ ಎಂ.ಜಿ.ನರಸಿಂಹಮೂರ್ತಿ, ವೆಂಕಟಾಚಲಯ್ಯ, ಎಲ್‌ಐಸಿ ಮಂಜುನಾಥ್‌, ಕಾಂಗ್ರೆಸ್‌ ಮುಖಂಡ ಕೆ.ಎನ್‌.ರವೀಂದ್ರ, ವೀರಣ್ಣ, ವಸಂತ ಕುಮಾರ್‌, ಕೃಷ್ಣಪ್ಪ, ಬುಡ್ಡಯ್ಯ, ಅನಿತಾ, ಕವಿತಾ, ಕುಸುಮಾ, ಜಯಶ್ರೀ ಇತರರು ಇದ್ದರು.

ಗಮನ ಸೆಳೆದ ಕಲಾತಂಡಗಳು: ಕಣ್ಣೂರು ಗ್ರಾಮದಲ್ಲಿ ಇಡೀ ರಾತ್ರಿ ಪಟ್ಟಲದಮ್ಮ ಮುತ್ತಿನ ಪಲ್ಲಕಿ ಉತ್ಸವ ನಡೆಯಿತು. ಚಿತ್ರದುರ್ಗ ಶಿವಕುಮಾರ್‌ ಅವರಿಂದ ಉರುಮೆ ಮತ್ತು ಕಹಳೆ ವಾದ್ಯ. ಕೋಲಾರದ ಮಂಜುನಾಥ್‌ ತಂಡದಿಂದ ತಮಟೆ ವಾದನ, ಕನಕಪುರ ಹನುಮಂತನಾಯಕ್‌ ಕಲಾ ತಂಡದಿಂದ ಪೂಜಾ ಕುಣಿತ, ಹಾಗೂ ಮಹಿಳಾ ತಂಡಗಳಿಂದ ಲಂಬಾಣಿ ನೃತ್ಯ,

ಮಾಗಡಿ ತಾಲೂಕಿನ ಪಿ.ಸಿ.ಪಾಳ್ಯದ ರವಿ ತಂಡದಿಂದ ಚಿಲಿಪಿಲಿ ಗೊಂಬೆ, ಹಾಸನದ ಅಂತಾರಾಷ್ಟ್ರೀಯ ಕಲಾವಿದ ಕುಮಾರಯ್ಯ ಮತ್ತು ಕಲಾ ತಂಡಗಳಿಂದ ಚಿಟ್ಟಿಮೇಳ, ಸ್ಥಳೀಯ ಕಲಾವಿದ  ಈರಣ್ಣ ಮತ್ತು ವಸಂತಕುಮಾರ್‌ ತಂಡದವರಿಂದು ಉರುಮೆ ಮತ್ತು ತಮಟೆ ವಾದನ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿಕ್ಕನರಸಪ್ಪ ಮತ್ತು ತಂಡದಿಂದ ತಮಟೆ ವಾದನ,ದೊಡ್ಡಬಳ್ಳಾಪುರದ ಜಯರಾಮು ತಂಡದ ನೃತ್ಯಗಳು ಕಣ್ಮನ ಸೆಳೆದವು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.