ಮತದಾನ ಪ್ರೇರೇಪಿಸಲು ಸಾಕ್ಷ್ಯಚಿತ್ರ


Team Udayavani, May 3, 2018, 3:57 PM IST

mys-3.jpg

ರಾಮನಗರ: ಮೇ 12ರಂದು ನಡೆಯುವ ಚುನಾವಣೆಯಲಿ ಗರಿಷ್ಠ ಸಂಖ್ಯೆಯ ಮತದಾರರನ್ನು ಮತದಾನ ಮಾಡುವಂತೆ ಸೆಳೆಯಲು ಹಾಗೂ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ನಿರ್ಮಿಸಿರುವ ಮೂರು ನಿಮಿಷಗಳ ಸಾಕ್ಷ್ಯಚಿತ್ರದ ಸಿ.ಡಿ.ಗಳನ್ನು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ. ಕೆ.ರಾಜೇಂದ್ರ ಮತ್ತು ಸ್ವೀಪ್‌ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಲ್ಲೆ„ ಮುಹಿಲನ್‌ ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಈ ಸಿಡಿಗಳನ್ನು ಬಿಡುಗಡೆ ಮಾಡಿಲಾಯಿತು. 

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ, ಮತದಾನ ಸಂವಿಧಾನ ನೀಡಿರುವ ಹಕ್ಕು. ಮತದಾನ ಮಾಡುವುದು ಪ್ರಜೆಗಳ ಕರ್ತವ್ಯವೂ ಹೌದು. ಹೀಗಾಗಿ ಮತದಾರರು ಚುನಾವಣೆಯ ದಿನ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದರು. ತಮ್ಮ ಹಕ್ಕು ಚಲಾಯಿಸುವುದರ ಮೂಲಕ ಪ್ರಜೆಗಳು ಉತ್ತುಮ ಅಭ್ಯರ್ಥಿಯನ್ನು ಅರಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯತ್‌ ಸಿಇಒ ಮುಲ್ಲೆ ಮುಹಿಲನ್‌ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.82 ಮತದಾನವಾಗಿದೆ. ಈ ಪ್ರಮಾಣ ಇನ್ನೂ ಹೆಚ್ಚಾಗಬೇಕು. ಮತದಾನಕ್ಕೆ ಪ್ರೇರಣೆ ನೀಡುವ ಉದ್ದೇಶದಲ್ಲಿ ಕಿರುಸಾಕ್ಷ್ಯ ಚಿತ್ರವನ್ನು ನಿರ್ಮಿಸಲಾಗಿದೆ. ಈ ಸಾಕ್ಷ್ಯಚಿತ್ರವನ್ನು ಆ್ಯಂಡ್ರಾಯ್ಡ ಮೊಬೈಲ್‌ಗ‌ಳಲ್ಲಿಯೂ ವೀಕ್ಷಿಸಬಹುದು.

ಎಲ್‌ಇಡಿ ಡಿಸ್ಪೆ ವಾಲ್‌ಗ‌ಳಲ್ಲಿ ಹಾಗೂ ಇತರೆಡೆ ಪ್ರದರ್ಶಿಸಲಾಗುವುದು. ಈ ಸಾಕ್ಷ್ಯಚಿತ್ರದಲ್ಲಿ ಮತದಾನ ಮಾಡಲು ಪ್ರೇರೇಪಿಸುವ ಸಂಗತಿಗಳಿವೆ ಎಂದರು.ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿ ಶಿವಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ರಾಜು ಇದ್ದರು.

ಈ ಕಿರು ಸಾಕ್ಷ್ಯಚಿತ್ರದಲ್ಲಿ ಏನಿದೆ?
ಮೂರು ನಿಮಿಷಗಳ ಸಾಕ್ಷ್ಯಚಿತ್ರ ಮಂಚನಬೆಲೆ ಜಲಾಶಯದ ಮೇಲ್ನೋಟದಿಂದ ಆರಂಭವಾಗಿದೆ. ನಂತರ ಕೂಟಗಲ್‌ ಬೆಟ್ಟದ ಉದ್ದನೆಯ ಬಂಡೆಗಳು, ಶ್ರೀ ರಾಮದೇವರ ಬೆಟ್ಟ, ರಾಮನಗರ ನಗರ ಪ್ರದೇಶ, ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕಿರ್ಣ, ಪೊಲೀಸ್‌ ಭವನ, ಚನ್ನಪಟ್ಟಣದ ಬೊಂಬೆಗಳು, ಜಾನಪದ ಲೋಕ ಹೀಗೆ ಜಿಲ್ಲೆಯ ಪ್ರಮುಖ ಸ್ಥಳಗಳ ಚಿತ್ರಗಳನ್ನು ತೋರಿಸಲಾಗಿದೆ. ಕೃಷಿಕರು, ರೇಷ್ಮೆ ಬೆಳೆಗಾರರು, ಅರಣ್ಯ ರಕ್ಷಕ, ವಿದ್ಯಾರ್ಥಿನಿ, ಮಂಗಳಮುಖೀ ಹೀಗೆ ಸಮಾಜದ ವಿವಿಧ ನಡೆಗಳ ಸಾಮಾನ್ಯ ಜನತೆ ತಾವು ಮತಚಲಾಯಿಸುವುದಾಗಿ ಹೇಳಿ ಪ್ರೇರೇಪಿಸಿದ್ದಾರೆ. ತಾವು ಮೇ 12ರಂದು ಮತಚಲಾಯಿಸುವುದಾಗಿ ಎಲ್ಲಾ ಅರ್ಹ ಮತದಾರರು ಮತಚಲಾಯಿಸುವಂತೆ ಸಾಕ್ಷ್ಯ ಚಿತ್ರದ ಮೂಲಕ ಪ್ರೇರೇಪಿಸಿದ್ದಾರೆ.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.