ರಾಮನಗರದಲ್ಲಿನ್ನೂ ಉಗ್ರರು ಬೀಡುಬಿಟ್ಟಿರುವ ಶಂಕೆ


Team Udayavani, Aug 8, 2018, 12:21 PM IST

ramanagaradlllinu.jpg

ರಾಮನಗರ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತವರು ಜಿಲ್ಲೆಯಲ್ಲಿಯೇ ಉಗ್ರನೊಬ್ಬನ ಬಂಧನವಾಗಿದ್ದು, ಇನ್ನಷ್ಟು ಉಗ್ರರು ಬೀಡಬಿಟ್ಟಿರಬಹುದು ಎಂಬ ಆತಂಕ ಜಿಲ್ಲೆಯ ಜನರಲ್ಲಿ ಮೂಡಿದೆ. 

ಈಗಾಗಲೇ ರಾಮನಗರದಲ್ಲಿ ಎನ್‌ಐಎ ಹಾಗೂ ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಜೆಎಂಬಿ ಉಗ್ರ ಮುನೀರ್‌ ಶೇಖ್‌ ಅಲಿಯಾಸ್‌ ಕೌಸರ್‌ನನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದು, ಮುನೀರ್‌ ಮೂಲತಃ ಬಾಂಗ್ಲಾ ದೇಶದವನಾಗಿದ್ದು, ರಾಮನಗರದಲ್ಲಿ ಕಳೆದ ಎರಡುವರೆ ತಿಂಗಳಿನಿಂದ ವಾಸವಾಗಿದ್ದನು ಎಂದು ತಿಳಿದುಬಂದಿದೆ.

ಭಾನುವಾರ ರಾತ್ರಿ 8ರಿಂದ 10 ಗಂಟೆ ವೇಳೆ ಮಧ್ಯೆ ಉಗ್ರನ ಮನೆ ಮೇಲೆ ದಾಳಿ ನಡೆಸಿದ ಎನ್‌ಐಎ ತಂಡ ತಡರಾತ್ರಿವರೆಗೆ ತಪಾಸಣೆ ನಡೆಸಿ ಕೆಲ ವಸ್ತಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿದೆ. ಉಗ್ರ ಮುನೀರ್‌ ಶೇಖ್‌ ಪತ್ನಿ ಶಜೀದ್‌ ಬಿಬಿ ಹಾಗೂ ಆಕೆಯ ಅಣ್ಣ, ಅತ್ತಿಗೆಗಾಗಿ ಹುಡುಕಾಟ ನಡೆದಿದೆ.

ಲ್ಯಾಪ್‌ಟಾಪ್‌ ಮಿಸ್ಸಿಂಗ್‌: ಉಗ್ರನ ಬಂಧನದ ವೇಳೆ ಲ್ಯಾಪ್‌ಟಾಪ್‌ ಪತ್ತೆಯಾಗಿದ್ದು, ಪತ್ನಿ ಬೇರೆಡೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯ ಪತ್ತೆಗೆ ತನಿಖೆ ತೀವ್ರಗೊಳಿಸಿದ್ದಾರೆ. ಲ್ಯಾಪ್‌ಟಾಪ್‌ನಲ್ಲಿ ಮಹತ್ವದ ದಾಖಲೆಗಳಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. 

ದೆಹಲಿ ವಿಳಾಸ: ಉಗ್ರ ದೆಹಲಿ ವಿಳಾಸವುಳ್ಳ ಆಧಾರ್‌ ಕಾರ್ಡ್‌ ನೀಡಿ ರಾಮನಗರದಲ್ಲಿ ಮನೆ ಬಾಡಿಗೆ ಪಡೆದಿದ್ದು, ಶೀಘ್ರದಲ್ಲೇ ಮನೆ ಕರಾರು ಪತ್ರ ಮಾಡಿಸಿಕೊಳ್ಳುವುದಾಗಿ ಹೇಳಿದ್ದನು ಎಂದು ಮನೆ ಮಾಲೀಕ ಅಮೀರ್‌ಖಾನ್‌ ಪೊಲೀಸರಿಗೆ ತಿಳಿಸಿದ್ದಾನೆ.

ಶಂಕಿತರ ವಶ?: ಒಟ್ಟಾರೆ ಉಗ್ರನ ಬಂಧನದ ವೇಳೆ ಐಬಿ ಹಾಗೂ ಎನ್‌ಐಎ ಅಧಿಕಾರಿಗಳು ಅನೇಕ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮನಗರದಲ್ಲಿ ಬೀಡು ಬಿಟ್ಟಿರುವ ಹೊಸಬರ, ಶಂಕಿತರ ಪತ್ತೆಗೆ ಈಗಾಗಲೇ ಜಿಲ್ಲಾ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೆಲವು ಶಂಕಿತರನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಲಿದ್ದಾರೆ ಎಂಬ ಮಾತು ಸಹ ಕೇಳಿಬರುತ್ತಿದೆ.

ರಾಮನಗರ ಜಿಲ್ಲೆಯಲ್ಲಿ ವಾಸವಿರುವ ವಿದೇಶಿ ಪ್ರಜೆಗಳ ಮಾಹಿತಿ ಮತ್ತು ಅವಧಿ ಮೀರಿ ಉಳಿದುಕೊಂಡಿರುವವರ ಮಾಹಿತಿ ಪಡೆದು ಆಯುಕ್ತರ ಗಮನಕ್ಕೆ ತರಲಾಗುವುದು. ಅಕ್ರಮ ಕಂಡು ಬಂದರೆ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆಯೂ ಮಾಹಿತಿ ನೀಡಲಾಗುವುದು.
-ರಮೇಶ್‌ ಬಾನೋತ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ 

ಸೈಕಲ್‌ನಲ್ಲೇ ಬಟ್ಟೆ ವ್ಯಾಪಾರ: ಸೈಕಲ್‌ನಲ್ಲಿ ತೆರಳಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಮುನೀರ್‌, ಬೆಳಗ್ಗೆ ಹೊರಟರೆ ಸಂಜೆ ವೇಳೆಗೆ ಮನೆಗೆ ವಾಪಸ್ಸಾಗುತ್ತಿದ್ದನು. ಎಂದೂ ಅನುಮಾನಸ್ಪದವಾಗಿ ನಡೆದುಕೊಂಡಿರಲಿಲ್ಲ. ಪೊಲೀಸರು ಯಾಕೆ ಅವರನ್ನು ವಶಕ್ಕೆ ಪಡೆದರು ಎಂಬುದೇ ತನಗೆ ತಿಳಿದಿರಲಿಲ್ಲ. ಮಾಧ್ಯಮದಲ್ಲಿ ಪ್ರಸಾರವಾಗಿದ್ದನ್ನು ಕಂಡು ದಿಗ್ಬಮೆ ಆಯಿತು ಎಂದು ಮನೆಯ ಮಾಲೀಕ ಅಮೀರ್‌ ಖಾನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.