ರಾಮನಗರದಲ್ಲಿನ್ನೂ ಉಗ್ರರು ಬೀಡುಬಿಟ್ಟಿರುವ ಶಂಕೆ
Team Udayavani, Aug 8, 2018, 12:21 PM IST
ರಾಮನಗರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತವರು ಜಿಲ್ಲೆಯಲ್ಲಿಯೇ ಉಗ್ರನೊಬ್ಬನ ಬಂಧನವಾಗಿದ್ದು, ಇನ್ನಷ್ಟು ಉಗ್ರರು ಬೀಡಬಿಟ್ಟಿರಬಹುದು ಎಂಬ ಆತಂಕ ಜಿಲ್ಲೆಯ ಜನರಲ್ಲಿ ಮೂಡಿದೆ.
ಈಗಾಗಲೇ ರಾಮನಗರದಲ್ಲಿ ಎನ್ಐಎ ಹಾಗೂ ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಜೆಎಂಬಿ ಉಗ್ರ ಮುನೀರ್ ಶೇಖ್ ಅಲಿಯಾಸ್ ಕೌಸರ್ನನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದು, ಮುನೀರ್ ಮೂಲತಃ ಬಾಂಗ್ಲಾ ದೇಶದವನಾಗಿದ್ದು, ರಾಮನಗರದಲ್ಲಿ ಕಳೆದ ಎರಡುವರೆ ತಿಂಗಳಿನಿಂದ ವಾಸವಾಗಿದ್ದನು ಎಂದು ತಿಳಿದುಬಂದಿದೆ.
ಭಾನುವಾರ ರಾತ್ರಿ 8ರಿಂದ 10 ಗಂಟೆ ವೇಳೆ ಮಧ್ಯೆ ಉಗ್ರನ ಮನೆ ಮೇಲೆ ದಾಳಿ ನಡೆಸಿದ ಎನ್ಐಎ ತಂಡ ತಡರಾತ್ರಿವರೆಗೆ ತಪಾಸಣೆ ನಡೆಸಿ ಕೆಲ ವಸ್ತಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಉಗ್ರ ಮುನೀರ್ ಶೇಖ್ ಪತ್ನಿ ಶಜೀದ್ ಬಿಬಿ ಹಾಗೂ ಆಕೆಯ ಅಣ್ಣ, ಅತ್ತಿಗೆಗಾಗಿ ಹುಡುಕಾಟ ನಡೆದಿದೆ.
ಲ್ಯಾಪ್ಟಾಪ್ ಮಿಸ್ಸಿಂಗ್: ಉಗ್ರನ ಬಂಧನದ ವೇಳೆ ಲ್ಯಾಪ್ಟಾಪ್ ಪತ್ತೆಯಾಗಿದ್ದು, ಪತ್ನಿ ಬೇರೆಡೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯ ಪತ್ತೆಗೆ ತನಿಖೆ ತೀವ್ರಗೊಳಿಸಿದ್ದಾರೆ. ಲ್ಯಾಪ್ಟಾಪ್ನಲ್ಲಿ ಮಹತ್ವದ ದಾಖಲೆಗಳಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ದೆಹಲಿ ವಿಳಾಸ: ಉಗ್ರ ದೆಹಲಿ ವಿಳಾಸವುಳ್ಳ ಆಧಾರ್ ಕಾರ್ಡ್ ನೀಡಿ ರಾಮನಗರದಲ್ಲಿ ಮನೆ ಬಾಡಿಗೆ ಪಡೆದಿದ್ದು, ಶೀಘ್ರದಲ್ಲೇ ಮನೆ ಕರಾರು ಪತ್ರ ಮಾಡಿಸಿಕೊಳ್ಳುವುದಾಗಿ ಹೇಳಿದ್ದನು ಎಂದು ಮನೆ ಮಾಲೀಕ ಅಮೀರ್ಖಾನ್ ಪೊಲೀಸರಿಗೆ ತಿಳಿಸಿದ್ದಾನೆ.
ಶಂಕಿತರ ವಶ?: ಒಟ್ಟಾರೆ ಉಗ್ರನ ಬಂಧನದ ವೇಳೆ ಐಬಿ ಹಾಗೂ ಎನ್ಐಎ ಅಧಿಕಾರಿಗಳು ಅನೇಕ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮನಗರದಲ್ಲಿ ಬೀಡು ಬಿಟ್ಟಿರುವ ಹೊಸಬರ, ಶಂಕಿತರ ಪತ್ತೆಗೆ ಈಗಾಗಲೇ ಜಿಲ್ಲಾ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೆಲವು ಶಂಕಿತರನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಲಿದ್ದಾರೆ ಎಂಬ ಮಾತು ಸಹ ಕೇಳಿಬರುತ್ತಿದೆ.
ರಾಮನಗರ ಜಿಲ್ಲೆಯಲ್ಲಿ ವಾಸವಿರುವ ವಿದೇಶಿ ಪ್ರಜೆಗಳ ಮಾಹಿತಿ ಮತ್ತು ಅವಧಿ ಮೀರಿ ಉಳಿದುಕೊಂಡಿರುವವರ ಮಾಹಿತಿ ಪಡೆದು ಆಯುಕ್ತರ ಗಮನಕ್ಕೆ ತರಲಾಗುವುದು. ಅಕ್ರಮ ಕಂಡು ಬಂದರೆ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆಯೂ ಮಾಹಿತಿ ನೀಡಲಾಗುವುದು.
-ರಮೇಶ್ ಬಾನೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಸೈಕಲ್ನಲ್ಲೇ ಬಟ್ಟೆ ವ್ಯಾಪಾರ: ಸೈಕಲ್ನಲ್ಲಿ ತೆರಳಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಮುನೀರ್, ಬೆಳಗ್ಗೆ ಹೊರಟರೆ ಸಂಜೆ ವೇಳೆಗೆ ಮನೆಗೆ ವಾಪಸ್ಸಾಗುತ್ತಿದ್ದನು. ಎಂದೂ ಅನುಮಾನಸ್ಪದವಾಗಿ ನಡೆದುಕೊಂಡಿರಲಿಲ್ಲ. ಪೊಲೀಸರು ಯಾಕೆ ಅವರನ್ನು ವಶಕ್ಕೆ ಪಡೆದರು ಎಂಬುದೇ ತನಗೆ ತಿಳಿದಿರಲಿಲ್ಲ. ಮಾಧ್ಯಮದಲ್ಲಿ ಪ್ರಸಾರವಾಗಿದ್ದನ್ನು ಕಂಡು ದಿಗ್ಬಮೆ ಆಯಿತು ಎಂದು ಮನೆಯ ಮಾಲೀಕ ಅಮೀರ್ ಖಾನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ