ವೈಶಾಲಿ ರಾಜೀನಾಮೆ ಅಂಗೀಕಾರ?


Team Udayavani, Aug 19, 2018, 11:58 AM IST

DCP Uma Prsahanth.JPG

ರಾಮನಗರ: ವಿಧಾನಸಭಾ ಚುನಾವಣೆ ವೇಳೆ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಾದ ರಾಜಕೀಯ ಬದಲಾವಣೆಗಳು, ಬಿಡದಿ ಪುರಸಭೆಯ ಮೇಲೂ ಪರಿಣಾಮ ಬೀರಿದ್ದ ಹಿನ್ನೆಲೆಯಲ್ಲಿ ಪುರಸಭೆಯ ಉಪಾಧ್ಯಕ್ಷೆ ವೈಶಾಲಿ ಚೆನ್ನಪ್ಪ ಅವರು ತಮ್ಮ ಸ್ಥಾನಕ್ಕೆ ನೀಡಿದ್ದರು. ಇದೀಗ ರಾಜೀನಾಮೆಗೆ ಜಿಲ್ಲಾಧಿಕಾರಿಗಳ ಅಂಕಿತ ಬಾಕಿ ಇದ್ದು, ತೆರವಾಗುವ ಸ್ಥಾನಕ್ಕೆ ಸ್ಪರ್ಧಾಕಾಂಕ್ಷಿಗಳು ಚುನಾವಣೆ ದಿನಾಂಕ ಗೋಷಣೆ ನಿರೀಕ್ಷಿಸುತ್ತಿದ್ದಾರೆ. 

ಅಂಕಿತ ಬಾಕಿ: ಕಳೆದ ಜುಲೈ 19 ರಂದು ವೈಶಾಲಿ ಚೆನ್ನಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ಸ್ವೀಕರಿಸಿದ್ದ ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳಿಗೆ ರವಾನೆ ಮಾಡಿದ್ದರು. ಜಿಲ್ಲಾಧಿಕಾರಿಗಳು ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದು, ಅಂಕಿತ ಹಾಕಿ ತೆರವಾಗುವ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ದಿನಾಂಕ ನಿಗದಿಪಡಿಸಬೇಕಾಗಿದೆ. 

ಜೂನ್‌ 20, 2105ರಂದು ಅಸ್ತಿತ್ವಕ್ಕೆ ಬಂದ ಬಿಡದಿ ಪುರಸಭೆಯಲ್ಲಿ ಅಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನವನ್ನು ವೆಂಕಟೇಶಮ್ಮ ಮತ್ತು ಉಪಾಧ್ಯಕ್ಷರಾಗಿ ವೈಶಾಲಿ ಅವರು ಅಧಿಕಾರ ಸ್ವೀಕರಿಸಿದ್ದರು. ನಾಯಕರ ಪಕ್ಷ ಬದಲು: 2018ರ ವಿಧಾನಸಭಾ ಚುನಾವಣೆ ವೇಳೆ ಆಗ ಶಾಸಕರಾಗಿದ್ದ ಎಚ್‌.ಸಿ.ಬಾಲಕೃಷ್ಣ ಮತ್ತು ಜಿಪಂ ಸದಸ್ಯ ಎ.ಮಂಜು ಅವರು ತಾವು ಪ್ರತಿನಿಧಿಸುತ್ತಿದ್ದ ಪಕ್ಷಗಳನ್ನು ಬದಲಾವಣೆ ಮಾಡಿಕೊಂಡಿದ್ದರು. 

ವೈಶಾಲಿ ಅವರು ಎಚ್‌.ಸಿ.ಬಾಲಕೃಷ್ಣ ಅವರ ಪರ ನಿಷ್ಠೆ ವ್ಯಕ್ತಪಡಿಸಿದ್ದರು. ತದ ನಂತರ ಎ.ಮಂಜು ಮಾಗಡಿ ವಿಧಾನಸಭೆಗೆ ಆಯ್ಕೆಗೊಂಡ ನಂತರ ಬಿಡದಿ ಪುರಸಭೆಯಲ್ಲಿ ರಾಜಕೀಯ ಬದಲಾವಣೆಗಳು ಕಂಡು ಬಂದಿದೆ. ಇದೇ ಹಿನ್ನೆಲೆಯಲ್ಲಿ ವೈಶಾಲಿ ಅವರು ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬುದು ತಿಳಿದುಬಂದಿದೆ.

ಒಳ ಒಪ್ಪಂದ ಕಾರಣ: ತಮ್ಮ ರಾಜೀನಾಮೆಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವೈಶಾಲಿ, ಜೆಡಿಎಸ್‌ ಜತೆ ಒಳ ಒಪ್ಪಂದದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದಾಗಿ ತಿಳಿಸಿದರು. ಮಾಗಡಿ ಶಾಸಕರಾಗಿದ್ದ ಬಾಲಕೃಷ್ಣ ಅವರು ಬಿಡದಿಗೆ ಮಂಚನಬೆಲೆಯಿಂದ ಕುಡಿಯುವ ನೀರು ಹಾಗೂ ಪಟ್ಟಣದಲ್ಲಿ ಯು.ಜಿ.ಡಿ ಕಾಮಗಾರಿ ಯೋಜನೆಗೆ ಸರ್ಕಾರದಿಂದ 170 ಕೋಟಿ ರೂ. ಬಿಡಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಬಿಡದಿ ಪುರಸಭೆಗೆ ನೂತನ ಕಟ್ಟಡಕ್ಕೆ ಸ್ಥಳ ವಿಚಾರದಲ್ಲಿಯೂ ಕೂಡ ಅವರು ಸಿಎಂ  ಸಿದ್ದರಾಮಯ್ಯ ಅವರ ಮೇಲೆ ನಿರಂತರ ಒತ್ತಡ ಹೇರಿ ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಪಯುಕ್ತ ಯೋಜನೆಗಳಿಗೆ ಮಾಜಿ ಶಾಸಕರು ಕಾರಣರಾಗಿದ್ದಾರೆ. ಪುರಸಭೆ ಅಸ್ತಿತ್ವಕ್ಕೆ ಬಂದ ಮೂರು ವರ್ಷಗಳಲ್ಲಿ ಅನೇಕ ಯೋಜನೆಗಳಿಗೆ ಮಂಜೂರಾತಿ ಸಿಕ್ಕಿದೆ. ಹೀಗಾಗಿ ಕೃತಜ್ಞತಾ ಭಾವದಿಂದ ಅವರ ಪರ ಒಲವು ವ್ಯಕ್ತಪಡಿಸಿದ್ದಾಗಿ ತಿಳಿಸಿದ ಅವರು, ತಾವು ಜೆಡಿಎಸ್‌ ತೊರೆದಿಲ್ಲ  ಎಂದು ಸ್ಪಷ್ಟಪಡಿಸಿದರು. 

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.