ಉತ್ತಮ ಜೀವನ ಶೈಲಿ ರೂಪಿಸಿಕೊಳ್ಳಿ: ಸ್ವಾಮೀಜಿ
Team Udayavani, Feb 25, 2019, 5:40 AM IST
ಮಾದನ ಹಿಪ್ಪರಗಿ: ಬದಲಾದ ಜೀವನ ಶೈಲಿಯಿಂದ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಎಲ್ಲರೂ ಉತ್ತಮ ಜೀವನ ಶೈಲಿ ರೂಪಿಸಿಕೊಳ್ಳಬೇಕು ಎಂದು ಗಡಿಗೌಡಗಾಂವನ ಶಾಂತವೀರ ಶಿವಾಚಾರ್ಯರು ನುಡಿದರು.
ಸ್ಥಳೀಯ ಶಿವಲಿಂಗೇಶ್ವರ ಹಾಗೂ ಹಾವೇರಿ ಹುಕ್ಕೇರಿ ಮಠದ ಪೀಠಾಧಿಪತಿಗಳಾಗಿದ್ದ ಲಿಂ| ಶಿವಲಿಂಗ ಸ್ವಾಮಿಗಳ ಜನ್ಮಶತಮಾನೋತ್ಸವ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಶಿಬಿರ ಹಾಗೂ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪೂಜೆ, ನಿಷ್ಠೆ, ನಿಯಮಗಳ ಜೊತೆಗೆ ವ್ಯಾಯಾಮ, ಯೋಗಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಎಲ್ಲರೂ ಆರೋಗ್ಯದಿಂದ ಬಾಳುತ್ತಾರೆ. ದುಶ್ಚಟಗಳಿಂದ ದೂರವಿದ್ದು ಸನ್ನಡತೆಯಿಂದ ಮುನ್ನಡೆಯಿರಿ. ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ದಿನನಿತ್ಯದ ಕಾಯಕ ಮಾಡಿ. ಅಂದರೆ ಶತಾಯುಷಿ ಆಗುತ್ತಿರಿ ಎಂದು ಆಶೀರ್ವಚನ ನೀಡಿದರು.
ಮಠದ ಪೀಠಾಧಿಪತಿ ಅಭಿನವ ಶಿವಲಿಂಗ ಸ್ವಾಮೀಜಿ ಇದ್ದರು. ಕಲಬುರಗಿಯ ಡಾ| ಗಿರೀಶ ರೋಣದ, ಡಾ| ಪಸ್ತಾಪುರೆ, ಡಾ| ಸಂತೋಷ ಸಿಗದೂರ, ಡಾ| ಬಸವಂತರಾಯ ಪಾಟೀಲ, ಡಾ| ಸಂಗಮೇಶ್ವರ ಪಾಟೀಲ, ಡಾ| ಅಂಬರೀಶ ವಡೇದ್, ಡಾ| ಅಭಿಷೇಕ ಕುಲ್ಕರ್ಣಿ, ಡಾ| ವಸಂತ ಕುಲ್ಕರ್ಣಿ 800 ಕ್ಕೂ ಹೆಚ್ಚು ರೋಗಿಗಳ ತಪಾಸಣೆ ನಡೆಸಿದರು.
ಮಾದನ ಹಿಪ್ಪರಗಿ ಸಮುದಾಯ ಆರೋಗ್ಯ ಕೆಂದ್ರದ ಶ್ರೀನಿವಾಸ, ನಾಗರಾಜ, ಶೋಭಾ, ಮಲ್ಲಮ್ಮ, ಶ್ರವಣಕುಮಾರ, ಜಿಲ್ಲಾ ಆರೋಗ್ಯ ಇಲಾಖೆಯ ಸೋಮಶೇಖರ ಮದನಕರ್, ವಿಜಯಲಕ್ಷ್ಮೀ, ಅನಿಲ್ ಕುಮಾರ ಖಂಡೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ