ಸಿರಿಗೌರಿ ಕಲ್ಯಾಣಿಯಲ್ಲಿ ಗಣಪನ ಮೂರ್ತಿ ವಿಸರ್ಜನೆ


Team Udayavani, Sep 13, 2018, 4:32 PM IST

ram.jpg

ರಾಮನಗರ: ವಿನಾಯಕ ಮೂರ್ತಿಗಳ ವಿಸರ್ಜನೆಗೆಂದೇ ವಿಶೇಷವಾಗಿ ನಿರ್ಮಿಸಿರುವ ಸಿರಿಗೌರಿ ಕಲ್ಯಾಣಿಯಲ್ಲಿನ ಹೂಳೆತ್ತುವ ಹಾಗೂ ಸ್ವತ್ಛಗೊಳಿಸುವ ಕಾರ್ಯವನ್ನು ಕೈಗೊಂಡ ನಗರಸಭೆಯ ಪೌರಕಾರ್ಮಿಕರು, ಗಣಪನ
ಮೂರ್ತಿಗಳ ವಿಸರ್ಜನೆಗೆ ಕಲ್ಯಾಣಿಯನ್ನು ಸಿದ್ಧಪಡಿಸಿದ್ದಾರೆ.

 ವಿಸರ್ಜನೆ ಸಿರಿಗೌರಿ ಕಲ್ಯಾಣಿಯಲ್ಲಿ ಮಾತ್ರ: ಈ ಬಾರಿ ಸಿರಿಗೌರಿ ಕಲ್ಯಾಣಿಯಲ್ಲೇ ಗಣಪತಿ ಮೂರ್ತಿಗಳನ್ನು ನಾಗರಿಕರು ವಿಸರ್ಜಿಸಬೇಕಾಗಿದ್ದು, ಮಲ್ಲೇಶ್ವರ ಕೆರೆ, ಶ್ರೀರಾಮದೇವರ ಬೆಟ್ಟದ ಬಳಿಯ ಕೆರೆಯಲ್ಲಿ ವಿಸರ್ಜನೆಗೆ ಅವಕಾಶ ಇಲ್ಲ ಎಂದು ನಗರಸಭೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ನಗರಾದ್ಯಂತ ಸಂಚಾರ: ಮೂರು ಮೊಬೈಲ್‌ ವಾಹನಗಳು ನಗರಾದ್ಯಂತ ಸಂಚರಿಸಲಿದ್ದು, ಭಕ್ತರು ಗಣೇಶನ ಮೂರ್ತಿಯನ್ನು ಮನೆಬಾಗಿಲಿನಲ್ಲೇ ವಿಸರ್ಜಿಸಬಹುದು. ಅಲ್ಲದೆ, ನಗರಸಭೆ ಕಾಂಪ್ಲೆಕ್ಸ್‌, ಅಂಬೇಡ್ಕರ್‌ ಭವನ, ವಿಜಯನಗರ ಆರ್ಚ್‌ ಮತ್ತು ರೋಟರಿ ಆಸ್ಪತ್ರೆಯ ಬಳಿ ವಿಸರ್ಜನೆಗೆ ತಾತ್ಕಾಲಿಕ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಸಕಲ ವ್ಯವಸ್ಥೆಯೊಂದಿಗೆ ಸಿದ್ಧ: ನಗರದ ರಂಗರಾಯರದೊಡ್ಡಿ ಕೆರೆ ಬಳಿಯಲ್ಲಿ ನಗರಸಭೆ ಹಾಗೂ ರಾಮನಗರ ಅಭಿವೃದ್ಧಿ ಪ್ರಾಧಿಕಾರಗಳು ಜಂಟಿಯಾಗಿ ನಿರ್ಮಿಸಿರುವ ಸಿರಿಗೌರಿ ಕಲ್ಯಾಣಿಯಲ್ಲಿ ಕಳೆದ ಮೂರು ವರ್ಷಗಳಿಂದ ಗಣಪತಿ ಹಾಗೂ ಗೌರಿ ಮೂರ್ತಿಗಳ ವಿಸರ್ಜನೆಗೆ ಅವಕಾಶ ಮಾಡಿಕೊಡಲಾಗಿದೆ. ಯಾವುದೇ ಅನಾಹುತಗಳಿಗೆ ಅವಕಾಶವಾಗದಂತೆ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಈ ಬಾರಿಯೂ ಗಣೇಶ ವಿಸರ್ಜನೆ ಕಾರ್ಯವನ್ನು ನಾಗರಿಕರು ಸುಸೂತ್ರವಾಗಿ ನೆರವೇರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ತಯಾರಿ ನಡೆಸಿದರು.

ಬೆಳಕಿನ ವ್ಯವಸ್ಥೆ: ಉದಯವಾಣಿಯೊಂದಿಗೆ ಮಾತನಾಡಿದ ನಗರಸಭೆ ಪ್ರಭಾರ ಪರಿಸರ ಅಧಿಕಾರಿ ಜಿ.ಶ್ರೀನಿವಾಸ್‌, ಸಿರಿಗೌರಿ ಕಲ್ಯಾಣಿಯ ಆವರಣದಲ್ಲಿ ರಾತ್ರಿ ವೇಳೆಯಲ್ಲೂ ವಿಸರ್ಜನೆಗೆ ಅವಕಾಶವಾಗುವಂತೆ ಧಾರಾಳ ಬೆಳಕಿನ ವ್ಯವಸ್ಥೆ, ವಿದ್ಯುತ್‌ ಸರಬರಾಜಿಗೆ ಯೂಪಿಎಸ್‌, ಜನರೇಟರ್‌ ವ್ಯವಸ್ಥೆ, ಕ್ರೇನ್‌ ವ್ಯವಸ್ಥೆ, ನುರಿತ ಈಜುಗಾರರು ಗಣಪನ ಮೂರ್ತಿಯ ವಿಸರ್ಜನೆಗೆ ಸಹಕರಿಸಲಿದ್ದಾರೆ. ಸಿಕ್ಯಾಮೆರಾಗಳ ಕಣ್ಗಾವಲು, ಪೊಲೀಸ್‌ ಕಾವಲು ಹೀಗೆ ಪ್ರತಿಯೊಂದು ವಿಚಾರದಲ್ಲೂ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು. ಈ ವೇಳೆ ಹಿರಿಯ ಆರೋಗ್ಯ ಅಧಿಕಾರಿ ವಿಜಯ್‌ ಕುಮಾರ್‌, ಪ್ರಭಾರ ಎಇಇ ರಾಜೇಗೌಡ ಹಾಜರಿದ್ದರು.
 
ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ: ನಗರದಲ್ಲಿ ಪಿಒಪಿ ಗಣಪತಿ ಮೂರ್ತಿಗಳ ಮಾರಾಟವನ್ನು ನಿಷೇಧಿಸಿರುವ ಸ್ಥಳಿಯ ನಗರಸಭೆಯ ಅಧಿಕಾರಿಗಳು, ಬುಧವಾರ ನಗರ ಸಂಚಾರ ನಡೆಸಿ ಪಿಒಪಿ ಗಣಪತಿ ಮೂರ್ತಿಗಳ ಮಾರಾಟವಾಗುತ್ತಿಲ್ಲ ಎಂಬುದನ್ನು ಖಚಿತ ಪಡಿಸಿಕೊಂಡರು. ನಗರ ಸಭೆಯ ಆಯುಕ್ತರಾದ ಶುಭಾ, ಪ್ರಭಾರ ಪರಿಸರ
ಅಧಿಕಾರಿ ಜಿ.ಶ್ರೀನಿವಾಸ್‌, ಹಿರಿಯ ಆರೋಗ್ಯ ನಿರೀಕ್ಷಕ ವಿಜಯ ಕುಮಾರ್‌ ಸೇರಿದಂತೆ ನಗರಸಭೆಯ ಅಧಿಕಾರಿಗಳು ಎರಡು ತಂಡಗಳಲ್ಲಿ ನಗರದ ವಿವಿಧ ಬಡಾವಣೆಗಳಲ್ಲಿ ಗಣಪತಿ ಮೂರ್ತಿ ಮಾರಾಟಗಾರರ ಮಳಿಗೆಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಮಾರಾಟಗಾರರಿಗೆ ತಿಳುವಳಿಕೆ ಪತ್ರ ಕೊಟ್ಟು ಕಾನೂನು ಉಲ್ಲಂ ಸಿದರೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆಯನ್ವಯ ಮತ್ತು ಜಲ ಮಾಲಿನ್ಯ ಕಾಯ್ದೆ 1974ರ ಕಲಂ 33ಬಿ ಪ್ರಕಾರ ಸದರಿ ಕಾಯ್ದೆಯ ಕಲಂ 45ರ ಪ್ರಕಾರ 10 ಸಾವಿರ ರೂ. ದಂಡ ಹಾಗೂ ಶಿಕ್ಷೆ ವಿಧಿಸುವುದಾಗಿ ಎಚ್ಚರಿಸಿದ್ದಾರೆ. ಗಣಪತಿ ಮಾರಾಟಕ್ಕೆ ಪರವಾನಿಗೆ ಪಡೆಯದವರಿಗೂ ಅಧಿಕಾರಿಗಳು ಎಚ್ಚರಿಗೆ ನೀಡಿದ್ದಾರೆ. 

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.