ಬಾಂಬ್ ಪತ್ತೆ ನಿಸ್ಸೀಮ “ಜಾಕಿ’ ಸಾವು
Team Udayavani, Sep 27, 2018, 5:15 PM IST
ಚನ್ನಪಟ್ಟಣ: ಸುಮಾರು 8 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಗುರುತರ ಸೇವೆ ಸಲ್ಲಿಸಿದ ಪೊಲೀಸ್ ಶ್ವಾನ “ಜಾಕಿ’ ಅನಾರೋಗ್ಯದಿಂದ ಸಾವನ್ನಪ್ಪಿದೆ. ಪಟ್ಟಣದ ಜಿಲ್ಲಾ ಶಸಸ್ತ್ರ ಮೀಸಲು ಪಡೆಯಲ್ಲಿ ನಿರಂತರವಾಗಿ ತನ್ನ ಖಡಕ್ ಸೇವೆಯಿಂದ ಪ್ರಸಿದ್ಧಿ ಪಡೆದಿದ್ದ ಜಾಕಿ ಕಳೆದ ಒಂದು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಾ ಸಾವು ಬದುಕಿನ ಜತೆ ಹೋರಾಟ ನಡೆಸುತಿತ್ತು. ಜಾಕಿ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದ ವೈದ್ಯರು, ಕೆಲ ದಿನಗಳಿಂದ ಚಿಕಿತ್ಸೆ ನೀಡುತ್ತಿದ್ದರು. ಚಿಕಿತ್ಸೆಗೆ ಜಾಕಿಯ ದೇಹ ಸ್ಪಂದಿಸದೆ ದೇಹಸ್ಥಿತಿ ಗಂಭೀರತೆ ಪಡೆದುಕೊಂಡಿತ್ತು. ಪಟ್ಟಣದ ಪಶು ವೈದ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆಯಿತು.
2011ರಲ್ಲಿ ಸೇರ್ಪಡೆ: ಲ್ಯಾಬ್ರಡಾರ್ ತಳಿಯ 7 ತಿಂಗಳ ಮರಿಯನ್ನು ತಂದಿದ್ದ ಪೊಲೀಸ್ ಇಲಾಖೆ ಬೆಂಗಳೂರಿನ ಸಿಎಆರ್ ದಕ್ಷಿಣದಲ್ಲಿ 10 ತಿಂಗಳು ತರಬೇತಿ ಮುಗಿಸಿ, 2011ರಲ್ಲಿ ಇಲಾಖೆಗೆ ನೇಮಿಸಿಕೊಂಡಿತ್ತು. ಇಲಾಖೆಗೆ ಆಗಮಿಸುತ್ತಿದ್ದಂತೆ ತನ್ನ ಚಾಕಚಕ್ಯತೆ ಮೂಲಕ ಜಾಕಿ ಹೆಸರು ಪಡೆದುಕೊಂಡ ಶ್ವಾನ ಜಾಕಿ ಎಂದರೆ ಪೊಲೀಸ್ ಇಲಾಖೆಯಲ್ಲಿ ಒಂದು ಶಕ್ತಿ ಎಂಬಂತಾಗಿತ್ತು. ದೆಹಲಿ ಮಟ್ಟದಲ್ಲೂ ಹೆಸರು ಪಡೆದಿತ್ತು.
ಬಾಂಬ್ ಪತ್ತೆ ಕಾರ್ಯಕ್ಕೆ ನಿಸ್ಸೀಮ: ಬಾಂಬ್ ಪತ್ತೆ ಮಾಡುವುದರಲ್ಲಿ ನಿಸ್ಸೀಮನಾಗಿದ್ದ ಜಾಕಿ ಮಾಜಿ ರಾಷ್ಟ್ರಪತಿ ದಿ.ಅಬ್ದುಲ್ ಕಲಾಂ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪ್ರಧಾನಿ ಮೋದಿ ಅವರು ಭಾಗವಹಿಸಿದ ಬಹಿರಂಗ ಸಭೆಗಳಲ್ಲಿ ಸಭೆ ನಡೆಯುವ ಹಿಂದಿನ ದಿನ ಬಾಂಬ್ ಪತ್ತೆ ಕಾರ್ಯಕ್ಕೆ ಕರೆದೊಯ್ಯಲಾಗುತ್ತಿತ್ತು.
ವರ್ಷದ ಹಿಂದೆ ರಾಮನಗರದ ಗೌಸಿಯಾ ಕಾಲೇಜಿಲ್ಲಿ ಹುಸಿ ಬಾಂಬ್ ಕರೆಯೊಂದರಲ್ಲಿ ಕಾಲೇಜು ವಿದ್ಯಾರ್ಥಿಗಳಲ್ಲದೆ ಶಿಕ್ಷಕ ವರ್ಗವೇ ದಂಗಾಗಿ ಹೋದ ಸಂದರ್ಭದಲ್ಲಿ ಕಾಲೇಜಿಗೆ ಕರೆದೊಯ್ದು ಶೋಧಿಸಿತ್ತು. ಸಿಬ್ಬಂದಿಗಳಾದ ಶಿವಕುಮಾರ್, ರವಿ ಜಾಕಿಯ ಉಸ್ತುವಾರಿ ಹೊತ್ತಿದ್ದರು. ಸಕಲ ಗೌರವಗಳೊಂದಿಗೆ ಜಾಕಿಯ ಅಂತ್ಯಸಂಸ್ಕಾರವನ್ನು ಜಿಲ್ಲಾ ಶಸಸ್ತ್ರ ಮೀಸಲು ಪಡೆಯ ಮೈದಾನದಲ್ಲಿ ನೆರವೇರಿಸಲಾಯಿತು. ಪೊಲೀಸ್ ಉಪವಿಭಾಗಾಧಿಕಾರಿ ಮಲ್ಲೇಶ್, ಜಿಲ್ಲಾ ಶಸಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಮಹೇಶ್ ಹಾಗೂ ಹಲವು ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ