ಬೆಟ್ಟಹಳ್ಳಿ ಸರ್ಕಾರಿ ಶಾಲೆಯೇ ಉದ್ಯಾನ


Team Udayavani, Jan 27, 2019, 11:37 AM IST

kudur.jpg

ಕುದೂರು: ಸರ್ಕಾರಿ ಶಾಲೆಯಲ್ಲಿ ಪರಿಸರ ಸೌಂದರ್ಯಕ್ಕೆ ಕೊರತೆ ಇಲ್ಲ. ಶಾಲೆ ಆವರಣದಲ್ಲಿ ಗಿಡ- ಮರ ಒಣಗಿಲ್ಲ. ಈ ಪರಿಸರ ಯಾವ ಉದ್ಯಾನವನಗಳಿಗೂ ಕಮ್ಮಿಯಿಲ್ಲ. ಓರ್ವ ಶಿಕ್ಷಕ ಹಾಗೂ 10 ಜನ ಮಕ್ಕಳ ಪರಿಶ್ರಮದಿಂದ ಮಾಗಡಿ ತಾಲೂಕಿನ ಕುದೂರು ಹೋಬಳಿಯ ಬೆಟ್ಟಹಳ್ಳಿ ಕಾಲೋನಿಯ ಸರ್ಕಾರಿ ಶಾಲೆಯಲ್ಲಿ ಈ ಉದ್ಯಾನವನವನ್ನು ಕಾಣಬಹುದು.

ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ: ಬೇಸಿಗೆ ಬಿರುಬಿಸಿಲಿನಲ್ಲಿಯೂ ಇಲ್ಲಿನ ಶಿಕ್ಷಕ ರಘುಪತಿ, ಮಕ್ಕಳು ಹಾಗೂ ಪೋಷಕರ ಶ್ರಮದಿಂದ ಸುಮಾರು ಒಂದು ಎಕರೆ ಪ್ರದೇಶದಲ್ಲಿರುವ ಶಾಲೆ ಆವರಣ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಗ್ರಾಮೀಣ ಸೊಗಡಿನ ಕಲಾಕೃತಿಗಳು ಹಾಗೂ ಕಾರಂಜಿಗಳ ನರ್ತನ ನಡುವೆ ಕಣ್ಮನ ಸೆಳೆಯುತಿದೆ. ಇದರಿಂದ ಶಾಲೆಯನ್ನು ನೋಡುವ ಪ್ರವಾಸಿಗರ ಸಂಖ್ಯೆಯೂ ಕೂಡ ದಿನೇ ದಿನೆ ಹೆಚ್ಚಾಗುತ್ತಿದೆ. ಶಾಲಾ ಅವಧಿ ಹಾಗೂ ರಜೆ ದಿನ ಎನ್ನದೆ ಇಲ್ಲಿನ ಶಿಕ್ಷಕರು ಹಾಗೂ ಮಕ್ಕಳು ಶಾಲಾ ಪರಿಸರವನ್ನು ಕಾಪಾಡುತ್ತಿರುವುದು ವಿಶೇಷವಾಗಿದೆ.

ರಜೆಯಲ್ಲೂ ಕಾರ್ಯ ನಿರ್ವಹಣೆ: ಬೆಟ್ಟಹಳ್ಳಿ ಕಾಲೋನಿ ಶಾಲೆಯ ಆವರಣದಲ್ಲಿ ಸುಂದರ ಪರಿಸರ ನಿರ್ಮಾಣ ಮಾಡಿರುವುದು ಒಂದೆರಡು ತಿಂಗಳುಗಳ ಪರಿಶ್ರಮವಲ್ಲ. ಶಿಕ್ಷಕ ರಘುಪತಿ ಅವರ 10 ವರ್ಷಗಳ ತಪಸ್ಸು. ಶಾಲಾ ಅವಧಿ ಮತ್ತು ರಜೆ ದಿನಗಳನ್ನು ತೋರೆದು ಬಿಡುವು ಸಿಕ್ಕ ವೇಳೆಯಲ್ಲಿ ಶಾಲೆಯತ್ತ ಕಡೆ ಧಾವಿಸಿ ಪರಿಸರವನ್ನು ಅಭಿವೃದ್ಧಿಪಡಿಸಿದ್ದಾರೆ. ಶೇ.75ಕ್ಕೂ ಹೆಚ್ಚು ಭಾಗ ಸ್ವಂತ ಹಣವನ್ನು ವ್ಯಯಿಸಿ, ಪರಿಸರ ಕಾಳಜಿಯನ್ನು ಪ್ರದರ್ಶಿಸುತ್ತಿದ್ದಾರೆ. ಶಿಕ್ಷಕರಷ್ಟೇ ಬದ್ಧತೆಯನ್ನು ಮಕ್ಕಳು ತೋರಿಸುತ್ತಾ ರಜೆ ದಿನಗಳಲ್ಲಿಯೂ ಶಿಕ್ಷಕರ ಜೊತೆಯಲ್ಲಿ ಪರಿಸರ ಅಭಿವೃದ್ಧಿಗೆ ತಮ್ಮದೇ ಆದ ಕಾಣಿಕೆಯನ್ನು ನೀಡುತ್ತಿದ್ದಾರೆ. ಮಕ್ಕಳ ಶ್ರಮಕ್ಕೆ ಪೋಷಕರು ಕೂಡಾ ಬೆಂಬಲಕ್ಕೆ ನಿಂತಿದ್ದಾರೆ.

ಪರಿಸರ ರಕ್ಷಣೆ ಕಾರ್ಯಕ್ರಮಕ್ಕೆ ಆದ್ಯತೆ: ಬೆಟ್ಟಹಳ್ಳಿ ಕಾಲೋನಿ ಸರ್ಕಾರಿ ಶಾಲೆಯಾದರೂ ಇಲ್ಲಿ ಪರಿಸರ ಸಂರಕ್ಷಣೆ ವಿಚಾರದಲ್ಲಿ ಸದಾ ಮುಂದೆ ಇದ್ದಾರೆ. ನೀರಿನ ಮಿತ ಬಳಕೆ ಹಾಗೂ ಕಾರಂಜಿಗಳಲ್ಲಿ ಹೆಚ್ಚಾದ ನೀರನ್ನು ಗಿಡಗಳಿಗೆ ಹಾಕುತ್ತಿದ್ದಾರೆ. ಇಂಗುಗುಂಡಿಗಳ ಮೂಲಕ ಮಳೆ ನೀರನ್ನು ಇಂಗಿಸುವುದು, ಕಸ ನಿರ್ವಹಣೆ, ಪ್ಲಾಸ್ಟಿಕ್‌ ನಿಯಂತ್ರಣಕ್ಕಾಗಿ ಗ್ರಾಮದ ಅಂಗಡಿಗಳಿಗೆ ಕಾಗದದ ಚೀಲಗಳನ್ನು ತಯಾರಿಸಿ ನೀಡುವುದು, ಗ್ರಾಮ ನೈರ್ಮಲ್ಯಕ್ಕಾಗಿ ಜಾಗೃತಿ ಜಾಥಾ, ಕಿರು ನಾಟಕಗಳ ಪ್ರದರ್ಶನ, ಶ್ರಮದಾನದ ಮೂಲಕ ಗ್ರಾಮಸ್ಥರಿಗೆ ಅರಿವು ಮೂಡಿಸುವುದು. – ಹೀಗೆ ಹತ್ತು ಹಲವು ಕಾರ್ಯಕ್ರಮಗಳು ಮೂಲಕ ಪರಿಸರ ಕಾಳಜಿಯನ್ನು ಇಲ್ಲಿನ ಶಿಕ್ಷಕರು ಮತ್ತು ಮಕ್ಕಳು ವಹಿಸಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ಪರಿಸರ ಕಾಳಜಿಯನ್ನು ತೋರುತ್ತಿದ್ದಾರೆ.

ಕೆ.ಎಸ್‌.ಮಂಜುನಾಥ್‌ ಕುದೂರು

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.