ಕಾಲುಬಾಯಿ ಜ್ವರಕ್ಕೆ ಲಸಿಕೆ ಅಭಿಯಾನ ಆರಂಭ


Team Udayavani, Jan 30, 2019, 7:29 AM IST

kalubayi.jpg

ರಾಮನಗರ: ಜಿಲ್ಲಾದ್ಯಂತ ರಾಸುಗಳಿಗೆ ಕಾಲುಬಾಯಿ ಜ್ವರದ ವಿರುದ್ಧ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಿದೆ. ಜಿಲ್ಲೆಯಲ್ಲಿ 2.92,566 ಲಕ್ಷ ರಾಸುಗಳ ಪೈಕಿ ಎರಡೇ ದಿನಕ್ಕೆ 37,915 ರಾಸುಗಳಿಗೆ ಲಸಿಕೆ ಹಾಕಲಾಗಿದೆ. ಅಂದರೆ ಶೇ.27ರಷ್ಟು ರಾಸುಗಳಿಗೆ ಲಸಿಕೆಯನ್ನು ಪಶು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಹಾಕಿದ್ದಾರೆ. ಫೆ.16ರವರೆಗೆ ಗಡುವಿದ್ದು, ಅವಧಿಯೊಳಗೆ ಎಲ್ಲಾ ರಾಸುಗಳಿಗೂ ಲಸಿಕೆ ಹಾಕುವುದಾಗಿ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಶೇ.94ರಷ್ಟು ರಾಸುಗಳಿಗೆ ಲಸಿಕೆ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಜಿಲ್ಲೆಯಲ್ಲಿ ಕಾಲುಬಾಯಿ ಜ್ವರಕ್ಕೆ ಲಸಿಕೆ ಹಾಕಲು ಆರಂಭಿಸಿದೆ. ಎಮ್ಮೆ, ಎತ್ತು, ಹಸು ಸೇರಿದಂತೆ ಸಾಕಿದ ಹಂದಿಗಳಿಗೂ ಲಸಿಕೆ ಹಾಕುವುದಾಗಿ ವೈದ್ಯರು ತಿಳಿಸಿದ್ದಾರೆ. ಸೋಮವಾರ ಜಿಲ್ಲೆಯಲ್ಲಿ ಮೊದಲ ದಿನವೇ 19929 ರಾಸುಗಳಿಗೆ ಲಸಿಕೆ ಹಾಕುವ ಗುರಿ ಇತ್ತು. ಈ ಪೈಕಿ 17 ಸಾವಿರ ರಾಸುಗಳಿಗೆ ಲಸಿಕೆ ಹಾಕಲಾಗಿದೆ. ಮೊದಲ ದಿನ ಶೇ.85ರಷ್ಟು ಸಾಧನೆ ತೋರಲಾಗಿದೆ.

ಎರಡನೇ ದಿನ ಮಂಗಳವಾರ ಒಟ್ಟು 20421 ರಾಸುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಈ ಪೈಕಿ 17986 ರಾಸುಗಳಿಗೆ ಲಸಿಕೆ ಹಾಕಲಾಗಿದೆ. ಎರಡನೇ ದಿನ ಶೇ.89ರಷ್ಟು ರಾಸುಗಳಿಗೆ ಲಿಸಿಕೆ ಹಾಕಲಾಗಿದೆ. ಎರಡೂ ದಿನಗಳು ಒಟ್ಟು 40350 ರಾಸುಗಳ ಗುರಿಯ ಪೈಕಿ 37915 ರಾಸುಗಳಿಗೆ ಲಸಿಕೆ ಹಾಕಲಾಗಿದ್ದು, ಇಲಾಖೆ ಶೇ.94ರಷ್ಟು ಸಾಧನೆ ಮಾಡಿದೆ.

ಯಾವ ತಾಲೂಕಿನಲ್ಲಿ ಎಷ್ಟು ರಾಸುಗಳಿಗೆ ಲಸಿಕೆ: ಜಿಲ್ಲೆಯಲ್ಲಿ ಒಟ್ಟು 2.92,566 ಲಕ್ಷ ರಾಸುಗಳಿಗೆ ಲಸಿಕೆ ಹಾಕುವ ಗುರಿಯನ್ನು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇರಿಸಿಕೊಂಡಿದೆ. ರಾಮನಗರದಲ್ಲಿ 57360, ಚನ್ನಪಟ್ಟಣದಲ್ಲಿ 50967, ಮಾಗಡಿಯಲ್ಲಿ 76898 ಮತ್ತು ಕನಕಪುರದಲ್ಲಿ 107341 ರಾಸುಗಳಿವೆ. ಸೋಮವಾರ ಮತ್ತು ಮಂಗಳವಾರ ಇಲಾಖೆ ಜಿಲ್ಲೆಯಲ್ಲಿ 40350 ರಾಸುಗಳಿಗೆ ಲಸಿಕೆ ಹಾಕುವ ಗುರಿಯನ್ನು ಇಟ್ಟುಕೊಂಡಿತ್ತು. ಈ ಪೈಕಿ 37915 ರಾಸುಗಳಿಗೆ ಲಸಿಕೆ ಹಾಕಿ ಶೇ.94ರಷ್ಟು ಸಾಧನೆಯನ್ನು ಮಾಡಿದೆ. ರಾಮನಗರದಲ್ಲಿ 7147, ಮಾಗಡಿಯಲ್ಲಿ 10820, ಚನ್ನಪಟ್ಟಣದಲ್ಲಿ 7511 ಮತ್ತು ಕನಕಪುರದಲ್ಲಿ 12437 ರಾಸುಗಳಿಗೆ ಲಸಿಕೆ ಹಾಕಲಾಗಿದೆ.

ಮನೆ ಬಾಗಿಲಿನಲ್ಲೇ ಲಸಿಕೆ: ಜ.28ರಿಂದ ಫೆ.16ರವರೆಗೆ ಲಸಿಕೆ ಹಾಕುವ ಅವಧಿಯನ್ನು ಸರ್ಕಾರ ನಿಗದಿ ಮಾಡಿದೆ. ಚನ್ನಪಟ್ಟಣ, ಮಾಗಡಿಗಳಲ್ಲಿ ಕಾಲುಬಾಯಿ ಜ್ವರ ಕಳೆದೆರೆಡು ತಿಂಗಳಿನಿಂದ ಕಾಡಲಾರಂಭಿಸಿದ್ದವು, 15-20 ರಾಸುಗಳು ಮೃತಪಟ್ಟ ಪ್ರಕರಣಗಳು ಇವೆ. ಪಶುವೈದ್ಯಕೀಯ ಇಲಾಖೆ ಮತ್ತು ಬಮೂಲ್‌ ಸಿಬ್ಬಂದಿ ಜಂಟಿಯಾಗಿ ತಂಡಗಳನ್ನು ರಚಿಸಿಕೊಂಡು ರೈತರ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಲಸಿಕೆ ಕಾರ್ಯಕ್ಕೆ 31 ತಂಡ ರಚನೆ: ಜಿಲ್ಲೆಯ 834 ಗ್ರಾಮಗಳಿಗೂ ವೈದ್ಯರು, ಸಿಬ್ಬಂದಿ ತೆರಳಿ ಲಸಿಕೆ ಹಾಕುತ್ತಿದ್ದಾರೆ. ಪಶು ವೈದ್ಯಕೀಯ ಇಲಾಖೆಯಿಂದ 185 ಮಂದಿ ಮತ್ತು ಬಮೂಲ್‌ನಿಂದ 35 ಮಂದಿ ಲಸಿಕೆ ನೀಡು ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಮನಗರದಲ್ಲಿ 7 ತಂಡ, ಚನ್ನಪಟ್ಟಣದಲ್ಲಿ 5 ತಂಡ, ಮಾಗಡಿಯಲ್ಲಿ 9 ತಂಡ ಮತ್ತು ಕನಕಪುರದಲಿ 10 ತಂಡಗಳು ಒಟ್ಟು 31 ತಂಡಗಳನ್ನಾಗಿ ರಚಿಸಿಕೊಳ್ಳಲಾಗಿದೆ. ಬಮೂಲ್‌ನಿಂದ ವಾಹನ ವ್ಯವಸ್ಥೆ ಮಾಡಲಾಗಿದೆ.

ಎರಡು ದಿನದ ಗುರಿಯ ಪೈಕಿ ಶೇ.94ರಷ್ಟು ಲಸಿಕೆ ನೀಡುವ ಗುರಿ ಸಾಧನೆಯಾಗಿದೆ. 2,92,566 ರಾಸುಗಳ ಪೈಕಿ ಈಗಾಗಲೆ 37915 ರಾಸುಗಳಿಗೆ ಲಸಿಕೆ ಹಾಕಲಾಗಿದೆ. ಉಳಿದ 2,54,651 ರಾಸುಗಳಿಗೆ ಅವಧಿ ಮುಗಿಯುವುದರೊಳಗೆ ಪೂರೈಸುವ ವಿಶ್ವಾಸವನ್ನು ಇಲಾಖೆಯ ಅಧಿಕಾರಿಗಳು ಇರಿಸಿಕೊಂಡಿದ್ದಾರೆ.

ವರ್ಷಕ್ಕೆ ಎರಡು ಬಾರಿ ಲಸಿಕೆ: ರಾಸುಗಳನ್ನು ಕಾಲುಬಾಯಿ ಜ್ವರದಿಂದ ರಕ್ಷಿಸಲು ಇಲಾಖೆ ವರ್ಷಕ್ಕೆ ಎರಡು ಬಾರಿ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. 2013-14ನೆ ಸಾಲಿನಲ್ಲಿ 2 ಸಾವಿರಕ್ಕೂ ಅಧಿಕ ರಾಸುಗಳು ಜಿಲ್ಲೆಯಲ್ಲಿ ಸಾವನ್ನಪ್ಪಿತ್ತು. ಶಾಸಕರಾಗಿದ್ದ ಕುಮಾರಸ್ವಾಮಿ ಆಗಿನ ಸರ್ಕಾರದ ಮೇಲೆ ಒತ್ತಡ ಹೇರಿ ಮೃತ ರಾಸುಗಳಿಗೆ ಪರಿಹಾರವನ್ನು ಕೊಡಿಸಿದ್ದರು. ತದ ನಂತರ ಅರಂಭವಾದ ಲಸಿಕೆ ನೀಡುವ ಕಾರ್ಯಕ್ರಮ ನಿರಂತರವಾಗಿ ಪ್ರತಿ ಮಾಚ್ ಮತ್ತು ಆಗಸ್ಟ್‌ ರೊಳಗೆ ನಡೆದುಕೊಂಡು ಬರುತ್ತಿದೆ. ಪಶು ವೈದ್ಯಕೀಯ ಇಲಾಖೆಯೊಂದಿಗೆ ಬೆಂಗಳೂರು ಹಾಲು ಒಕ್ಕೂಟ (ಬಮೂಲ್‌) ಅಧಿಕಾರಿಗಳು ಸಹ ಕೈ ಜೋಡಿಸಿದ್ದು, ಲಸಿಕೆ ಹಾಕುವ ಕಾರ್ಯಕ್ರಮ ಜಿಲ್ಲೆಯಲ್ಲಿ ಪ್ರಗತಿಯಲ್ಲಿದೆ.

* ಬಿ.ವಿ.ಸೂರ್ಯ ಪ್ರಕಾಶ್

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.