ಎಲ್ಲಾ ಕ್ಷೇತ್ರದಲ್ಲೂ ಸ್ತ್ರೀಯರಿಂದ ಅತ್ಯುನ್ನತ ಸಾಧನೆ


Team Udayavani, Feb 1, 2019, 7:04 AM IST

yella.jpg

ಚನ್ನಪಟ್ಟಣ: ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಅತ್ಯುನ್ನತ ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರು ಕಾರ್ಯ ನಿರ್ವಹಿಸದ ಕ್ಷೇತ್ರವಿಲ್ಲ. ಹಾಗಾಗಿ ಸಾಧಕ ಮಹಿಳೆಯರನ್ನು ಮಾದರಿಯಾಗಿಸಿಕೊಂಡು, ಇತರರೂ ಆತ್ಮವಿಶ್ವಾಸದಿಂದ ಸ್ವಾವಲಂಬಿಗಳಾ ಗಬೇಕು ಎಂದು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಜಿ.ಡಿ.ವೀಣಾ ಕುಮಾರಿ ತಿಳಿಸಿದರು.

ಪಟ್ಟಣದ ಶತಮಾನೋತ್ಸವ ಭವನದಲ್ಲಿ ನಡೆದ ಜಿಲ್ಲಾ ಮಹಿಳಾ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿದ ಅವರು ಮಾತನಾಡಿ, ಮಹಿಳೆ ಸಂಸಾರದ ಜತೆಗೆ ಇಡೀ ದೇಶವನ್ನೇ ಮುನ್ನಡೆಸ ಬಲ್ಲಳು ಎಂಬುದಕ್ಕೆ ಉದಾಹರಣೆಗಳಿವೆ. ಮಹಿಳೆ ಸಾಧನೆ ಮಾಡಬೇಕೆಂದರೆ ಆಕೆಯ ಹಿಂದೆ ಪ್ರೋತ್ಸಾಹ ನೀಡುವ ಹಲವು ಅವಕಾಶ ಗಳಿವೆ. ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು ಎಂದು ಹೇಳಿದರು.

ಮಹಿಳೆಗೆ ಸೂಕ್ತ ರಕ್ಷಣೆ ಇಲ್ಲ: ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಸರ್ಕಾರ ರೂಪಿಸಿದೆ. ಸಮಾಜದಲ್ಲಿ ಮಹಿಳೆಗೆ ಉನ್ನತ ಸ್ಥಾನ ನೀಡಲಾಗಿದೆ. ಆದರೆ, ಇಂದಿಗೂ ಆಕೆಗೆ ಸೂಕ್ತ ರಕ್ಷಣೆ ಸಿಗದೇ ಭಯದ ಕರಿನೆರಳಿನಲ್ಲಿಯೇ ಬದುಕು ಸಾಗಿಸಬೇಕಾದ ಅನಿವಾರ್ಯತೆ ಇದೆ. ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ಇಂದಿಗೂ ನಡೆಯುತ್ತಿವೆ. ಇದರ ವಿರುದ್ಧ ಮಹಿಳೆಯರು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದರು.

ವೈಚಾರಿಕತೆ ಬೆಳೆಸಿಕೊಳ್ಳಿ: ರೈತ ಹೋರಾಟ ಗಾರ್ತಿ ಸುನಂದ ಜಯರಾಮ್‌ ಮಾತನಾಡಿ, ಮಹಿಳೆಯರು ವೈಚಾರಿಕತೆ ಬೆಳೆಸಿಕೊಂಡು ಸಬಲೀಕರಣವಾಗಬೇಕು. ಭಯ ಮಹಿಳೆ ಯರನ್ನು ಸಾಧನೆಯಿಂದ ದೂರ ಸರಿಯುವಂತೆ ಮಾಡುತ್ತಿದೆ. ಈ ಭಯ ನಿವಾರಣೆಯಾದರೆ ಮಾತ್ರ ಸಬಲೀಕರಣ ಸಾಧ್ಯವಾ ಗುತ್ತದೆ. ಈ ಕೆಲಸವನ್ನು ಸರ್ಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು ಎಂದರು.

ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ: ಮಹಿಳೆಯರ ಸಬಲೀಕರಣದ ಬಗ್ಗೆ ಕಾನೂನಾತ್ಮಕವಾಗಿ ಯಾವುದೇ ನಿರ್ಧಾರ ಕೈಗೊಳ್ಳಬೇಕಾದರೂ ಶಾಸನ ಸಭೆಗಳಲ್ಲಿ ಅಗತ್ಯವಿರುವ ಮಹಿಳೆಯರ ಸಂಖ್ಯೆ ಇಲ್ಲ. ಮಹಿಳಾ ಪ್ರತಿನಿಧಿಗಳ ಸಂಖ್ಯೆ ಕಡಿಮೆ ಇದೆ. ಇದು ಸರಿಯಾದರೆ ಸಮಾಜದಲ್ಲಿ ಮಹಿಳೆಯರು ಪುರುಷರಿಗೆ ಸಮಾನವಾಗಿ ಸಾಧನೆ ಗೈಯಬಲ್ಲರು, ಶೇ.50ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲು ಆಡಳಿತ ನಡೆಸುವವರು ಮುಂದಾಗಬೇಕು ಎಂದರು.

ದೇಶ ಅಭಿವೃದ್ಧಿಗೆ ಮುಂದಾಗಿ: ಹೋರಾಟಗಾರ್ತಿ ಅನುಸೂಯಮ್ಮ ಮಾತನಾಡಿ, ಯುವಕರು ಸ್ವಾರ್ಥ ಮನೋಭಾವವನ್ನು ಬದಿಗೊತ್ತಿ ದೇಶದ ಅಭಿವೃದ್ಧಿಗೆ ಮುಂದಾಗಬೇಕು. ಭಯ ಇರುವ ತನಕ ದೇಶದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ. ಮಹಿಳೆಯರು ಎಲ್ಲವನ್ನೂ ಎದುರಿಸಿ ಸಮಾಜದ ಸುಸ್ಥಿತಿಗೆ ದುಡಿಯುವ ಜತೆಗೆ ಅಭಿವೃದ್ಧಿಯಾಗಬೇಕು ಎಂದರು.

ಕಾರ್ಯಕ್ರಮ ಉತ್ತಮ ಬೆಳವಣಿಗೆ: ಜಿಪಂ ಸದಸ್ಯೆ ಸುಗುಣ ಮಾತನಾಡಿ, ಜಿಲ್ಲೆಯಲ್ಲಿ ಮೊದಲ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಹಿಳಾ ಸಾಂಸ್ಕೃತಿಕ ಉತ್ಸವದ ಮೂಲಕ ಜಿಲ್ಲೆಯಲ್ಲಿ ಸಾಧನೆ ಮಾಡಿರುವ ಮಹಿಳೆಯರು, ಕಲಾವಿದರನ್ನು ಒಂದೆಡೆ ಸೇರಿಸಿ ಹಬ್ಬದಂತೆ ಕಾರ್ಯಕ್ರಮ ರೂಪಿಸಿ ರುವುದು ಉತ್ತಮ ಬೆಳವಣಿಗೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಕೊಲ್ಲಾಪುರದ ಮಹಾಲಕ್ಷ್ಮೀ ದೇವಾಲಯದ ಆವರಣದಿಂದ ಜಾನಪದ ಕಲಾ ತಂಡಗಳಿಗೆ ಚಾಲನೆ ನೀಡಲಾಯಿತು. ಅಂಚೆ ಕಚೇರಿ ರಸ್ತೆಯ ಮೂಲಕ ಶತಮಾನೋತ್ಸವ ಭವನದವರೆಗೆ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ಹಲವು ಕಲಾ ತಂಡಗಳು ಪ್ರದರ್ಶನ ನೀಡಿದವು, ವಿಚಾರ ಗೋಷ್ಠಿ, ಕವಿಗೋಷ್ಠಿಗಳು ನಡೆಯಿತು. ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.

ಮಾಗಡಿ ಕಸಾಪ ಅಧ್ಯಕ್ಷೆ ಕಲ್ಪನಾ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಕೆ.ಟಿ.ಲಕ್ಷ್ಮಮ್ಮ, ಟೆಕ್ಕೀಸ್‌ ಟೀಂ ಅಧ್ಯಕ್ಷೆ ನವ್ಯಶ್ರೀ ಆರ್‌., ಟಿಎಪಿಸಿಎಂಎಸ್‌ ಅಧ್ಯಕ್ಷೆ ವನಜ, ಸುಮಂಗಲ, ಕವಿತಾ ರಾವ್‌, ಮಹಿಳಾ ಕಾಂಗ್ರೆಸ್‌ ಉಪಾಧ್ಯಕ್ಷೆ ಕಾವೇರಮ್ಮ, ಮುಖಂಡರಾದ ಜಯಮ್ಮ, ಪಾರ್ವತಮ್ಮ, ಸಾವಿತ್ರಿ ರಾವ್‌, ರಾಧಿಕಾ ರವಿಕುಮಾರಗೌಡ, ರೇಖಾ ಉಮಾಶಂಕರ್‌, ಗೀತಾ ವೆಂಕಟೇಶ್‌, ಶಾರದಾ ನಾಗೇಶ್‌, ವಿಮಲಾ ಯೋಗ ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.