ಚುನಾವಣೆ: ರೆಸಾರ್ಟ್‌ನಲ್ಲಿ ಚರ್ಚೆ


Team Udayavani, Feb 3, 2019, 7:20 AM IST

chunanav.jpg

ರಾಮನಗರ: ಲೋಕಸಭಾ ಚುನಾವಣೆಗಳು ಹತ್ತಿರವಾದಂತೆಲ್ಲ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿದೆರುತ್ತಿವೆ. ಇದಕ್ಕೆ ಬಿಜೆಪಿ ಹೊರತೇನಲ್ಲ. ಶನಿವಾರ ಸಂಜೆ ಬಿಡದಿ ಬಳಿಯ ಈಗಲ್ಟನ್‌ ರೆಸಾರ್ಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಗೆ 8 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಪೂರ್ವಭಾವಿ ಸಭೆಯನ್ನು ಆಯೋಜಿಸಿರುವುದಾಗಿ ತಿಳಿದುಬಂದಿದೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆಗಳೇ ಹೆಚ್ಚಾಗಿರುವುದರಿಂದ ಆ ಪಕ್ಷಗಳ ವಿರುದ್ಧ ರಾಜಕೀಯ ರಣತಂತ್ರ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆಗಳಾಗಿವೆ. ಬಿಜೆಪಿ ಪಕ್ಷದಿಂದ ಯಾರು ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ತುಟಿ ಬಿಚ್ಚದ ಪಕ್ಷದ ಮುಖಂಡರು, ಯಾರೇ ಅಭ್ಯರ್ಥಿಯಾಗಲಿ ಅವರ ಗೆಲುವಿಗೆ ಶ್ರಮಿಸಿ ಎಂಬ ಮಂತ್ರವನ್ನು ಪಠಿಸಿದ್ದಾರೆ. ನಾಯಕರ ಮಾತಿನಲ್ಲಿ ಎಂ.ರುದ್ರೇಶ್‌ ಮತ್ತು ಸಿ.ಪಿ.ಯೋಗೇಶ್ವರ್‌ ಹೆಸರು ಹೆಚ್ಚಾಗಿ ಪ್ರಸ್ತಾಪವಾಗಿದೆ ಎಂದು ತಿಳಿದು ಬಂದಿದೆ.

ಸಭೆಗೆ ಸಿ.ಪಿ.ವೈ ಗೈರು: ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವಿಚಾರದಲ್ಲಿ ನಡೆದ ಸಭೆಯಲ್ಲಿ ಸಿ.ಪಿ.ಯೋಗೇಶ್ವರ್‌, ತುಳಸಿ ಮುನಿರಾಜು ಮತ್ತು ಎಂ.ರುದ್ರೇಶ್‌ ಅವರ ಹೆಸರುಗಳು ಪ್ರಸ್ತಾಪವಾಗಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಲು ಸಿ.ಪಿ.ವೈ ನಿರಾಕರಿಸಿದ್ದು, ಎಂ.ರುದ್ರೇಶ್‌ ಅವರ ಬಗ್ಗೆ ಕಾರ್ಯಕರ್ತರ ಒಲವು ವ್ಯಕ್ತವಾಗಿ ಎಂ.ರುದ್ರೇಶ್‌ ಅವರ ಹೆಸರು ಜಿಲ್ಲೆಯಲ್ಲಿ ಪ್ರಚಾರವಾಗಿತ್ತು. ಇದಕ್ಕೆ ಪೂರಕ ಎಂಬಂತೆ ಶನಿವಾರ ಈಗಲ್ಟನ್‌ ರೆಸಾರ್ಟ್‌ನಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್‌ವಹಿಸಿದ್ದು, ಚನ್ನಪಟ್ಟಣದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ ಗೈರಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಬೂತ್‌ ಮಟ್ಟದಲ್ಲಿ ಸಂಘಟನೆಗೆ ಸಲಹೆ: ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಬೂತ್‌ ಮಟ್ಟದಲ್ಲಿ ಸಂಘಟನೆ ಕೈಗೊಳ್ಳುವಂತೆ ಮುಖಂಡರು ಸಲಹೆ ನೀಡಿದ್ದಾರೆ. ತಲಾ 25 ಕಾರ್ಯಕರ್ತರ ತಂಡವನ್ನು ರಚಿಸಿ ಹೊಣೆಗಾರಿಕೆಯಿಂದ ಸಂಘಟನೆ ಮಾಡುವಂತೆ ಸಲಹೆ ನೀಡಲಾಗಿದೆ. ಸಮಾವೇಶ, ಸಕ್ರಿಯ ಕಾರ್ಯಕರ್ತರ ನೋಂದಣಿ, ಕಾರ್ಯಕಾರಣಿ ಸಭೆ ನಡೆಸುವ ಕುರಿತು ಚರ್ಚೆ ನಡೆದಿದೆ.

ಕೇಂದ್ರದ ಸಾಧನೆಗಳೇ ಗೆಲುವಿನ ಮಂತ್ರ: ಪಕ್ಷ ಸಂಘಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರ ಕಳೆದ 5 ವರ್ಷಗಳಲ್ಲಿ ಜಾರಿಗೆ ತಂದಿರುವ ಮಹತ್ತರವಾದ ಯೋಜನೆಗಳು, ತೆಗೆದುಕೊಂಡ ಕಠಿಣ ನಿರ್ಧಾರಗಳು, ರಾಜ್ಯಕ್ಕೆ ಕೊಟ್ಟ ಸಹಕಾರ, ಆಯುಷ್ಮನ್‌ ಭಾರತದಂತಹ ಮಹತ್ವದ ಯೋಜನೆಗಳ ಬಗ್ಗೆ ಜನಸಾಮಾನ್ಯರಲ್ಲಿ ಮನವರಿಕೆ ಮಾಡಿ ಎಂದು ಮುಖಂಡರು ಸಲಹೆ ನೀಡಿದ್ದಾಗಿ ಗೊತ್ತಾಗಿದೆ.

ಶುಕ್ರವಾರ ವಿತ್ತ ಸಚಿವ ಪಿಯೂಷ್‌ ಗೋಯೆಲ್‌ ಮಂಡಿಸಿದ 2019-20ನೇ ಸಾಲಿನ ಬಜೆಟ್ ರೈತರ, ಕಾರ್ಮಿಕರ, ಮಧ್ಯಮ ವರ್ಗದವರನ್ನು ಗುರಿಯಿರಿಸಿಕೊಂಡು ಮಂಡಸಿಲಾಗಿದೆ. ದೇಶಾದ್ಯಂತ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಬಜೆಟ್‌ನಲ್ಲಿಯ ಅಂಶಗಳ ಬಗ್ಗೆಯೂ ಜನಸಾಮಾನ್ಯರ ಮನಮುಟ್ಟುವಂತೆ ವಿವರಿಸುವ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು. ಪ್ರಧಾನಿ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾರನ್ನು ಪ್ರಚಾರಕ್ಕೆ ಕರೆ ತರುವಂತೆ ವಿವಿಧ ಘಟಕಗಳ ಅಧ್ಯಕ್ಷರು, ಕಾರ್ಯಕರ್ತರು ಮುಖಂಡರ ಗಮನ ಸೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಸಭೆಯಲ್ಲಿ ಮುಖಂಡರಾದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಪ್ರಭಾರಿ ಸಚ್ಚಿದಾನಂದ, ಕುಣಿಗಲ್‌ ಕೃಷ್ಣಕುಮಾರ್‌, ಎನ್‌.ಮುನಿರಾಜುಗೌಡ, ಸತ್ಯನಾರಾಯಣ, ರಾಮನಗರ ಜಿಪಂ ಮಾಜಿ ಅಧ್ಯಕ್ಷ ಸಿ.ಪಿ.ರಾಜೇಶ್‌, ಸ್ಥಳೀಯ ಪ್ರಮುಖರಾದ ಮುರಳೀಧರ, ಎಸ್‌.ಆರ್‌.ನಾಗರಾಜ್‌, ಜಿ.ವಿ.ಪದ್ಮನಾಭ ಮುಂತಾದವರು ಭಾಗವಹಿಸಿದ್ದರು. ಸಭೆಗೆ ಮುನ್ನ ಡಾ.ಶಿವಕುಮಾರಸ್ವಾಮೀಜಿ, ಕೇಂದ್ರ ಸಚಿವ ಅನಂತಕುಮಾರ್‌, ಮಾಜಿ ಕೇಂದ್ರ ಸಚಿವರಾದ ಜಾರ್ಜ್‌ ಫ‌ರ್ನಾಂಡಿಸ್‌, ಜಾಫ‌ರ್‌ ಷರೀಪ್‌, ಚಿತ್ರ ನಟ ಅಂಬರೀಷ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.