ಯೋಧರ ಜೀವ ಕಸಿದ ಉಗ್ರರಿಗೆ ಧಿಕ್ಕಾರ
Team Udayavani, Feb 17, 2019, 7:34 AM IST
ಕನಕಪುರ: ನಗರದ ಮುಖ್ಯ ರಸ್ತೆಯಲ್ಲಿ ಪತಂಜಲಿ ಯೋಗ ಶಿಬಿರದಿಂದ ಅಯ್ಯಪ್ಪ ಸ್ವಾಮಿ ದೇಗುಲದವರೆಗೂ ನೂರಾರು ಮಹಿಳೆಯರು ವಿವಿಧ ಸಂಘಟನೆ ಕಾರ್ಯಕರ್ತರು, ಸಾರ್ವಜನಿಕರು ಮೇಣದಬತ್ತಿ ಹಿಡಿದು ಉಗ್ರ ಸಂಘಟನೆ ವಿರುದ್ಧ ಧಿಕ್ಕಾರ ಕೂಗುತ್ತಾ ಚೆನ್ನಬಸಪ್ಪ ವೃತ್ತದಲ್ಲಿ ವೀರ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.
ಉಗ್ರ ಸಂಘಟನೆಯನ್ನು ಮಟ್ಟ ಹಾಕಲಿ: ಪತಂಜಲಿ ಯೋಗ ಶಿಬಿರದ ಸ್ಪೃತಿ ಮಾತನಾಡಿ, ಇಂದು ಇಡೀ ಭಾರತ ದುಃಖ ಸಾಗರದಲ್ಲಿ ಮುಳುಗಿದೆ. ನಮ್ಮ ಯೋಧರನ್ನು ಕಳೆದುಕೊಂಡು ಪ್ರತೀಕಾರ ಭಾವನೆ ನಮ್ಮೆಲ್ಲರಲ್ಲೂ ಮೂಡಿದೆ. ಕಾಶ್ಮೀರದಲ್ಲಿ ನಡೆದ ದಾಳಿಯಲ್ಲಿ 40ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ. ಯೋಧರನ್ನು ಬಲಿ ತೆಗೆದುಕೊಂಡ ಜೈಶ್-ಎ- ಉಗ್ರ ಸಂಘಟನೆಯನ್ನು ಸರ್ಕಾರ ಮಟ್ಟ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಲ ತಿಂಗಳ ಹಿಂದೆ ಮದುವೆ: ಬಿಜೆಪಿ ಮುಖಂಡ ನಾಗರಾಜು ಮಾತನಾಡಿ, ನಮ್ಮ ದೇಶದಲ್ಲಿ ವೀರ ಯೋಧರಿಗೆ ಕೊರತೆ ಇಲ್ಲ. ಇಂತಹ ದುರ್ಘಟನೆ ನಡೆದಿದ್ದರೂ ಬುದ್ಧಿಜೀವಿಗಳು, ವಿಚಾರವಾದಿಗಳು, ಪ್ರಗತಿಪರ ಸಂಘಟನೆಗಳು, ರಾಜಕಾರಣಿಗಳು ಖಂಡಿಸುತ್ತಿಲ್ಲ.
ನಮ್ಮ ತಾಲೂಕಿನ ಸಾಸಲಪುರದ ಹೆಣ್ಣು ಮಗಳನ್ನು ದೇಶಕ್ಕಾಗಿ ಪ್ರಾಣ ಕೊಟ್ಟ ಗುಡಿಗೆರೆ ಗ್ರಾಮದ ಗುರುವಿಗೆ ಕೊಟ್ಟು ಮದುವೆ ಮಾಡಿದ್ದೇವೆ. ವಿಧಿಯಾಟ ಮದುವೆಯಾಗಿ ಕೇವಲ 10 ತಿಂಗಳು ಎರಡು ದಿವಸಗಳು ಮಾತ್ರ ಕಳೆದಿವೆ. ಆತ ತನ್ನ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಚಿರ ನೆಮ್ಮದಿಯಾಗಿ ಇರಲಿ ಎಂದು ಆಶೀರ್ವಾದ ಮಾಡಿ ಎಂದು ಬರೆದುಕೊಂಡಿದ್ದ ಎಂದು ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?