ಸರ್ಕಾರಿ ಶಾಲೆಯಿಂದ ಮಕ್ಕಳು- ಪೋಷಕರ ಬಾಂಧವ್ಯ ಗಟ್ಟಿ


Team Udayavani, Feb 27, 2019, 6:56 AM IST

sarkari-s.jpg

ಕನಕಪುರ: ಸರ್ಕಾರಿ ಶಾಲೆಯಯಿಂದ ಮಕ್ಕಳು ಮತ್ತು ಪೋಷಕರ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತಿವೆ ಎಂದು ಸಮಾಜ ಸೇವಕ ಗಣೇಶ್‌ ಹೇಳಿದರು. ನಗರದ ಬಾಣಂತಮಾರಮ್ಮ ಬಡಾವಣೆಯ ಬಾಣಂತ ಮಾರಮ್ಮ ಸರ್ಕಾರಿ ಶಾಲೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಸರ್ಕಾರಿ ಶಾಲೆಗಳು ಜ್ಞಾನದ ದೇಗಲುಗಳು. ಇಲ್ಲಿ ಕಲಿಯುತ್ತಿರುವ ಮಕ್ಕಳು ಧನ್ಯರು. ಸಾರ್ವಜನಿಕರಿಗೆ ಸರ್ಕಾರಿ ಶಾಲೆ ಎಂದು ತಾತ್ಸಾರ ಬೇಡ. ಸಮಾಜದಲ್ಲಿ ಸಾಧನೆ ಮಾಡಿದ ಮತ್ತು ಸರ್ಕಾರಿ ಸೇವೆಯಲ್ಲಿ ಶೇ.90ರಷ್ಟು ಮಂದಿ ಸರ್ಕಾರಿ ಶಾಲೆಯಲ್ಲಿ ಕಲಿತವರೇ ಇದ್ದಾರೆ ಎಂದರು. 

ಬದುಕುವುದನ್ನು ಕಲಿಸುತ್ತದೆ ಸರ್ಕಾರಿ ಶಾಲೆ: ಖಾಸಗಿ ಶಾಲೆಯಲ್ಲಿ ಹೋಮ್‌ವರ್ಕ್‌ ಅಷ್ಟೇ ಮಕ್ಕಳ ನಿತ್ಯದ ದಿನಚರಿ. ಆದರೆ, ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಎಲ್ಲವನ್ನು ಕಲಿಸುವ ಶಿಕ್ಷಕರಿದ್ದಾರೆ. ಶಾಲೆ ಬಿಟ್ಟ ತಕ್ಷಣ ಸಾಮಾಜಿಕ ಪ್ರಪಂಚಕಕ್ಕೆ ತೆರಳಿ ಅಲ್ಲಿ ಸಮಾಜದ ಜ್ಞಾನ ಪಡೆದುಕೊಳ್ಳುತ್ತಾರೆ. ಖಾಸಗಿ ಶಾಲೆಯಲ್ಲಿ ಕಲಿತ ಮಕ್ಕಳಿಗೆ ತಮ್ಮ ಬಂಧುಗಳೊಂದಿಗೆ ಹೇಗೆ ಮಾತನಾಡ‌ಬೇಕು ಎನ್ನುವ ಅರಿವು ಇರುವುದಿಲ್ಲ. ಎಲ್ಲವನ್ನು ಕಲಿತು ಬದುಕುವುದನ್ನೇ ಕಲಿಯದಿದ್ದರೆ ಅದು ವಿದ್ಯೆ ಎನಿಸಲಾರದು. ಅದಕ್ಕಾಗಿ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲೇ ಕಲಿಸಿ ಎಂದರು. 

ಸರ್ಕಾರಿ ಶಾಲೆಗೆ ಸೌಲಭ್ಯ ಕಲ್ಪಿಸಿ: ಶಾಲಾಭಿವೃದ್ಧಿ ಸಮಿತಿ ಸದಸ್ಯ ನಾಗರಾಜು ಮಾತನಾಡಿ, ಸರ್ಕಾರಿ ಶಾಲೆ ಆರಂಭದ ದಿನದಲ್ಲಿ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದರು. ಇಂದು ಸಹ ನಗರದ ಅನೇಕ ಶಾಲೆಗಳ ಪೈಕಿ ಅತಿಹೆಚ್ಚು ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿರುವುದು ಸಂತಷ ತಂದಿದೆ. ಆದರೆ, ಸಮಾಜ ಸೇವಕರು ಸಹ ಇಂತಹ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯವ ಮೂಲಕ ಇಲ್ಲಿನ ಮೂಲ ಸೌಲಭ್ಯ ಕಲ್ಪಿಸಬೇಕಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷ ಮಲ್ಲೇಶ್‌ಗೆ ಕುಡಿಯುವ ನೀರು, ಕಟ್ಟಡಕ್ಕೆ ಬಣ್ಣದ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಸಲ್ಲಿಸಲಾಯಿತು. ಶಾಲೆಯಲ್ಲಿ ಉತ್ತಮ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು. ಈ ವೇಳೆಯಲ್ಲಿ ನಗರಸಭೆ ಸದಸ್ಯ ರಾಮಚಂದ್ರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಣಿ, ಉಪಾಧ್ಯಕ್ಷ ಸಾಧುಲ್ಲಾಖಾನ್‌, ಸದಸ್ಯರಾದ ಚಂದ್ರು, ಶಿವಲಿಂಗಯ್ಯ, ನಾಗೇಶ್‌, ನಾಗರಾಜು, ಮುಖ್ಯ ಶಿಕ್ಷಕ ರಾಮು ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲೆಯ ಶಿಕ್ಷಕಿ ಶಿವಲೀಲ ವಾರ್ಷಿಕ ವರದಿ ಮಂಡಿಸಿದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.