ಎಲ್ಲರಿಗೂ ಪಾಸ್‌ಪೋರ್ಟ್‌ ಅವಶ್ಯ


Team Udayavani, Mar 2, 2019, 7:16 AM IST

yllarigu.jpg

ಚನ್ನಪಟ್ಟಣ: ಪಾಸ್‌ಪೋರ್ಟ್‌ ಕೇವಲ ದೇಶಕ್ಕೆ ಹೋಗುವ ಉದ್ದೇಶಕ್ಕಾಗಿ ಇರುವ ವ್ಯವಸ್ಥೆಯಲ್ಲ. ಅದು ದೇಶದ ಪ್ರತಿಯೊಬ್ಬ ನಾಗರಿಕರು ಹೊಂದಬೇಕಾದ ಅವಶ್ಯ ಗುರುತಿನ ಚೀಟಿಯಾಗಿದೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು.

ಪಟ್ಟಣದ ಪ್ರಧಾನ ಅಂಚೆ ಕಚೇರಿಯ ಪಕ್ಕದಲ್ಲಿ ನಿರ್ಮಿಸಿರುವ ನೂತನ ಅಂಚೆ ಕಚೇರಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಪಾಸ್‌ಪೋರ್ಟ್‌ ಅನ್ನು ಹಲವು ದಾಖಲಾತಿಗಳನ್ನು ಪರಿಶೀಲನೆ ನಡೆಸಿ ನೀಡಲಾಗುತ್ತದೆ. ಜತೆಗೆ ಪೊಲೀಸ್‌ ಪರಿಶೀಲನೆಯೂ ಆಗಿರುತ್ತದೆ. ಆಧಾರ್‌, ಎಪಿಕ್‌ ಕಾರ್ಡ್‌ಗಳಿದ್ದರೂ ಪಾಸ್‌ಪೋರ್ಟ್‌ ದೇಶದ ನಾಗರಿಕರು ಅಗತ್ಯವಾಗಿ ಪಡೆದುಕೊಳ್ಳಬೇಕಿದೆ ಎಂದರು.

ಲೋಕಸಭಾ ಕ್ಷೇತ್ರಗಳಲ್ಲಿ ಸೇವಾ ಕೇಂದ್ರ ಆರಂಭ: ಪಾಸ್‌ಪೋರ್ಟ್‌ ಪರಿಶೀಲನೆ ಹಾಗೂ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ದೂರದ ಬೆಂಗಳೂರು ಅಥವಾ ಮೈಸೂರು ನಗರಗಳಿಗೆ ಈ ಹಿಂದೆ ಹೋಗಬೇಕಿತ್ತು. ದಿನವಿಡೀ ಕಾಲ ಕಳೆಯಬೇಕಿತ್ತು. ಆದರೆ, ಇದೀಗ ಎಲ್ಲಾ ವಿಧಾನಗಳನ್ನು ಸರಳೀಕರಿಸಿ ಹತ್ತಿರದಲ್ಲೇ ಸೇವೆ ಸಿಗುವಂತೆ ಭಾರತ ಸರ್ಕಾರ ದೇಶದೆಲ್ಲೆಡೆ 400 ಸೇವಾ ಕೇಂದ್ರಗಳನ್ನು ತೆರೆಯಲು ಮುಂದಾಗಿದೆ. ಕರ್ನಾಟಕದಲ್ಲಿಯೂ ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ ಒಂದರಂತೆ ಅಂಚೆ ಇಲಾಖೆ ಸಹಯೋಗದೊಂದಿಗೆ ಸೇವಾ ಕೇಂದ್ರ ತೆರೆಯಲಾಗುತ್ತಿದೆ, ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ತಂತ್ರಜ್ಞಾನದಿಂದ ಅಂಚೆ ಮೂಲೆಗುಂಪು: ಈ ಹಿಂದೆ ಅಂಚೆ ಇಲಾಖೆ ಗ್ರಾಮೀಣ ಭಾಗದಲ್ಲಿ ಮಾಹಿತಿ ಸಂವಹನಕ್ಕಾಗಿ ಸಾಕಷ್ಟು ಶ್ರಮಿಸಿದೆ. ಅಂಚೆ ಇಲಾಖೆ ಇಲ್ಲದಿದ್ದರೆ ಯಾವುದೇ ಮಾಹಿತಿ ರವಾನೆಯಾಗುತ್ತಿರಲಿಲ್ಲ. ವರ್ಷಗಟ್ಟಲೆ ಜನಸೇವೆ ಸಲ್ಲಿಸಿದ ಇಲಾಖೆ ಇತ್ತೀಚಿನ ದಿನಗಳಲ್ಲಿ ತಂತ್ರಜಾnನ ಬೆಳೆದಂತೆ ಮೂಲೆಗುಂಪಾಗುತ್ತಿದೆ. ಅದನ್ನು ತಪ್ಪಿಸಲು ಅಂಚೆ ಸೇವೆಯ ಜತೆಗೆ ಬ್ಯಾಂಕಿಂಗ್‌, ಜೀವ ವಿಮೆ, ಪೆನನ್‌ ಸ್ಕೀಂ ಹೀಗೆ ಇತರೆ ಸೇವೆಗಳನ್ನು ನೀಡಲು ಭಾರತ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ಸನಿಹದಲ್ಲೇ ಪಾಸ್‌ಪೋರ್ಟ್‌ ಸೇವೆ: ಪ್ರಾದೇಶಿಕ ಪಾಸ್‌ಪೋರ್ಟ್‌ ಅಧಿಕಾರಿ ಭರತ್‌ಕುಮಾರ್‌ ಕುತ್ತಾಟಿ ಮಾತನಾಡಿ, ಸಾರ್ವಜನಿಕರಿಗೆ ಪಾಸ್‌ ಪೋರ್ಟ್‌ ಸೇವೆ ಸನಿಹದಲ್ಲೇ ಸಿಗುವಂತೆ ಮಾಡುವ ಉದ್ದೇಶದಿಂದ ಅಂಚೆ ಇಲಾಖೆ ಸಹಯೋಗದೊಂದಿಗೆ ಸೇವಾ ಕೇಂದ್ರ ಆರಂಭಿಸಲಾಗುತ್ತಿದೆ. ಅಂಚೆ ಇಲಾಖೆಯ ಸಿಬ್ಬಂದಿ ಹಾಗೂ ವಿದೇಶಾಂಗ ಇಲಾಖೆ ಅಧಿಕಾರಿ ಸಾರ್ವಜನಿಕರಿಗೆ ಸೇವೆ ಸಲ್ಲಿಸಲಿದ್ದಾರೆ. ಪ್ರತಿಯೊಬ್ಬರೂ ಪಾಸ್‌ಪೋರ್ಟ್‌ ನೀಡುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು.

ಪಾಸ್‌ಪೋರ್ಟ್‌ ಪೌರತ್ವದ ಸಂಕೇತ: ಪಾಸ್‌ ಪೋರ್ಟ್‌ ಸೇವೆ ಸಾರ್ವಜನಿಕರಿಗೆ 10-12 ದಿನಗಳಲ್ಲಿ ಲಭ್ಯವಾಗಬೇಕಿದ್ದರೂ ಪೊಲೀಸ್‌ ಪರಿಶೀಲನೆ ತಡವಾಗುತ್ತಿರುವುದರಿಂದ ಪ್ರಕ್ರಿಯೆ ತಡವಾಗುತ್ತಿದೆ. ಆನ್‌ಲೈನ್‌ನಲ್ಲೇ ಎಲ್ಲ ಪ್ರಕ್ರಿಯೆ ನಡೆಯಬೇಕಿರುವುದರಿಂದ ತಡವಾಗುವುದಿಲ್ಲ. ಸಾರ್ವಜನಿಕರು ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ ನಿಗದಿಯಾದ ದಿನಾಂಕದಂದು ಸೇವಾ ಕೇಂದ್ರಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಒದಗಿಸಬೇಕು. ಪಾಸ್‌ಪೋರ್ಟ್‌ ದೇಶದ ಪೌರತ್ವದ ಸಂಕೇತವಾಗಿದೆ ಎಂದು ಹೇಳಿದರು.

ಸದ್ಬಳಕೆಯಿಂದ ಉದ್ದೇಶ ಸಾರ್ಥಕ: ಬೆಂಗಳೂರು ಭಾಗದ ಪೋಸ್ಟ್‌ ಮಾಸ್ಟರ್‌ ಜನರಲ್‌ ಕರ್ನಲ್‌ ಅರವಿಂದ ವರ್ಮ ಮಾತನಾಡಿ, ಪಾಸ್‌ಪೋರ್ಟ್‌ ಸೇವಾ ಕೇಂದ್ರ ಅಂಚೆ ಕಚೇರಿ ಪಕ್ಕದಲ್ಲೇ ಸ್ಥಾಪನೆಯಾಗಬೇಕೆಂಬ ನಿಯಮವಿದೆ. ಅನ್ಯಕೆಲಸಕ್ಕಾಗಿ ವಿನ್ಯಾಸಗೊಂಡಿದ್ದ ಕಚೇರಿಯನ್ನೇ ಸೇವಾ ಕೇಂದ್ರಕ್ಕೆ ಬಳಕೆ ಮಾಡಲಾಗುತ್ತಿದೆ. ಸಾರ್ವಜನಿಕರು ಕೇಂದ್ರದ ಸದ್ಬಳಕೆ ಮಾಡಿಕೊಂಡರೆ ಉದ್ದೇಶ ಸಾರ್ಥಕವಾಗುತ್ತದೆ ಎಂದರು. ಈ ವೇಳೆಯಲ್ಲಿ ಅಂಚೆ ಅಧೀಕ್ಷಕ ಎನ್‌.ವಿ. ಸತ್ಯನಾರಾಯಣ ರಾಜು, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ವೀಣಾ ಕುಮಾರಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.