ಒಳಾಂಗಣ ಸ್ಟೇಡಿಯಂ ನಿರ್ಮಾಣಕ್ಕೆ ಚಿಂತನೆ
Team Udayavani, Mar 3, 2019, 7:47 AM IST
ರಾಮನಗರ: ಜಿಲ್ಲಾ ಕೇಂದ್ರ ರಾಮನಗರದಲ್ಲಿ ಸುಸಜ್ಜಿತ ಒಳಾಂಗಣ ಸ್ಟೇಡಿಯಂ ನಿರ್ಮಾಣಕ್ಕೆ ಚಿಂತನೆ ನಡೆದಿದೆ ಎಂದು ಶಾಸಕಿ ಅನಿತಾ ಭರವಸೆ ನೀಡಿದರು. ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ನಗರಸಭೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿವಿಧ ಯೋಜನೆಯಡಿ ಸೌಲಭ್ಯಗಳ ವಿತರಣಾ ಸಮಾರಂಭ,
ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಶಹರಿ ಸಮೃದ್ಧಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯ ಅರ್ಕಾವತಿ ನದಿ ಪಾತ್ರದ ಅಭಿವೃದ್ಧಿಗೆ ಈಗಾಗಲೇ ನಿರ್ಧರಿಸಲಾಗಿದೆ. ಇದೇ ಯೋಜನೆಯಲ್ಲಿ ವ್ಯಾಯಾಮ ಶಾಲೆ, ವಾಕಿಂಗ್ ಪಾಥ್ ನಿರ್ಮಾಣಕ್ಕೂ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಕ್ಷೇತ್ರದ ಅಭಿವೃದ್ಧಿಗೆ 380ಕೋಟಿ ರೂ. ಅನುದಾನ: ಕ್ಷೇತ್ರದಲ್ಲಿ ಮೂಲ ಸೌಕರ್ಯಗಳ ವೃದ್ಧಿಗೆ ಸರ್ಕಾರ 380 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಎಸ್ಎಸ್ಸಿ ಅನುದಾನದಡಿಯಲ್ಲಿ ನಗರದಲ್ಲಿ ಕುಡಿಯುವ ನೀರು ಹಾಗೂ ಚರಂಡಿ ನಿರ್ಮಾಣಕ್ಕೆ ಕಾಮಗಾರಿಗಾಗಿ 10 ಕೋಟಿ ರೂ. ಅನುದಾನ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 10 ಕೋಟಿ ರೂ. ಹಣ ಮಂಜೂರಾಗಿದೆ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ವಿವಿಧೆಡೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಗ್ರಾಮೀಣಾಭಿವೃದ್ಧಿ ಹಾಗೂ ನಗರಾಭಿವೃದ್ಧಿಗೆ ಬದ್ಧರಾಗಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲೇ ಶಾಸಕಿಯಾಗಿ ಜನರ ಸೇವೆ ಮಾಡುವುದಾಗಿ ತಿಳಿಸಿದರು.
ಇಸ್ರೇಲ್ ಮಾದರಿ ಕೃಷಿ ಸಿಎಂ ಕನಸು: ರಾಜ್ಯದಲ್ಲಿ ಇಸ್ರೇಲ್ ಮಾದರಿ ಕೃಷಿ ಕೈಗೊಳ್ಳವುದು ಸಿಎಂ ಅವರ ಕನಸಾಗಿದೆ. ರೈತರ ಬಗ್ಗೆ ಅವರಿಗೆ ಅತೀವ ಕಾಳಜಿ ಇರುವುದರಿಂದಲೇ 48 ಸಾವಿರ ಕೋಟಿ ರೂ. ಸಾಲ ಮನ್ನ ಮಾಡಿದ್ದಾರೆ. ರೈತರಿಗೆ ಋಣ ಮುಕ್ತ ಪತ್ರ ಸದ್ಯದಲ್ಲೇ ದೊರೆಯಲಿದೆ. ಸಿಎಂ ಕುಮಾರಸ್ವಾಮಿಗೆ ಬಡವರ ಬಗ್ಗೆಯೂ ಕಾಳಜಿ ಹೆಚ್ಚಿದೆ. ರಸ್ತೆ ಬದಿಯ ವ್ಯಾಪಾರಿಗಳು ಅನಧಿಕೃತ ವ್ಯಕ್ತಿಗಳಿಂದ ಹೆಚ್ಚಿನ ಬಡ್ಡಿದರಕ್ಕೆ ಸಾಲ ಪಡೆಯುವದನ್ನು ತಪ್ಪಿಸಲು ಬ್ಯಾಂಕುಗಳ ಮೂಲಕವೇ ಬಡ್ಡಿರಹಿತ ಸಾಲ ಪಡೆಯಲು ಬಡವರ ಬಂಧು ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು.
ಅರ್ಹರಿಗೆ ಶೀಘ್ರ ಮಂಜೂರಾತಿ ಪತ್ರ ವಿತರಣೆ: ತಾಲೂಕಿನಲ್ಲಿ ವಸತಿ ರಹಿತರಿಗೆ ನಿವೇಶನ ಮತ್ತು ಮನೆ ನಿರ್ಮಿಸಿಕೊಳ್ಳಲು ತಾವು ಬದ್ಧರಾಗಿದ್ದೇವೆ. ಶೀಘ್ರದಲ್ಲೇ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡಲಾಗುವುದು. ಲೋಕಸಭಾ ಚುನಾವಣೆಗೆ ಏ.5ರೊಳಗೆ ನೀತಿ ಸಂಹಿತಿ ಜಾರಿಗೆ ಬರಲಿದೆಎಂದು ಹೇಳಲಾಗುತ್ತಿದೆ. ಹೀಗಾಗಿ ತಾಲೂಕು ಅಭಿವೃದ್ಧಿ ಕಾಮಗಾರಿಗಳನ್ನು ತರಾತುರಿಯಲ್ಲೇ ಆರಂಭಿಸಲಾಗುತ್ತಿದೆ ಎಂದರು.
ರಾಮನಗರ ಅಭಿವೃದ್ಧಿಗೆ ಶ್ರಮ: ಉಪಚುನಾವಣೆಯ ವೇಳೆ ಹಲವು ಭಾಗಗಳಲ್ಲಿ ಮಹಿಳೆಯರು ಕುಡಿಯುವ ನೀರು ಹಾಗೂ ಚರಂಡಿ ವ್ಯವಸ್ಥೆ ಕುರಿತು ತಮ್ಮ ಗಮನ ಸೆಳೆದಿದ್ದರು. ಈ ಸಮಸ್ಯೆ ನಿವಾರಣೆಗಾಗಿ ಶ್ರಮಿಸುತ್ತಿರುವುದಾಗಿ ಹೇಳಿದರು. ತಾವು ಶಾಸಕಿಯಾಗಿ ಆಯ್ಕೆಯಾಗಿ 100 ದಿನ ಕಳೆದಿದೆ, ರಾಮನಗರ ಅಭಿವೃದ್ಧಿಗೆ ಶ್ರಮಿಸುವ ಭರವಸೆ ನೀಡಿದರು.
ಈ ವೇಳೆಯಲ್ಲಿ ನಗರಸಭೆ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಮಂಗಳಾ, ಸದಸ್ಯರಾದ ಚೇತನ್ ಕುಮಾರ್, ಲೋಹಿತ್ ಬಾಬು, ರವಿ, ಮಂಜುನಾಥ್, ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ರಾಜಶೇಖರ್, ಜೆಡಿಎಸ್ ರಾಜ್ಯ ವಕ್ತಾರ ಬಿ.ಉಮೇಶ್, ತಹಶೀಲ್ದಾರ್ ರಾಜು, ನಗರಸಭೆ ಪೌರಾಯುಕ್ತೆ ಶುಭಾ ಭಾಗವಹಿಸಿದ್ದರು.
ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ: ರಾಮನಗರ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ, ಕಟ್ಟಡ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅನಿತಾ ಶನಿವಾರ ಭೂಮಿ ಪೂಜೆ ನೆರವೇರಿಸಿದರು. ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ 2.30 ಕೋಟಿ ರೂ. ವೆಚ್ಚದ ಕೆಂಜಿಗನಹಳ್ಳಿ ಕಾಲೋನಿ ಮೂಲಕ ಕೆಂಪನಹಳ್ಳಿ ಬಿಎಂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು,
ಬಾಲಕರ ಸರ್ಕಾರ ಪದವಿ ಪೂರ್ವ ಕಾಲೇಜು ಎ ಮತ್ತು ಬಿ ಬ್ಲಾಕ್ಗಳ ಕಟ್ಟಡ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ 9 ಕೋಟಿ 90 ಲಕ್ಷ ರೂ. ವೆಚ್ಚದಲ್ಲಿ ಎ ಮತ್ತು ಬಿ ಬ್ಲಾಕ್ಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್ನ 3 ಮತ್ತು 4ನೇ ಮಹಡಿ ಹಾಗೂ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರೆವೇರಿಸಿದರು.
ಜಾನಪದ ಲೋಕದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ಲೈಬ್ರರಿ ಹಾಗೂ ಕಾರ್ಯಾಗಾರ ಉದ್ಘಾಟಿಸಿದರು. ನಗರಸಭೆಯ 31ನೇ ವಾರ್ಡ್ನ ಮಾರಮ್ಮನ ದೇವಾಲಯದ ಬಳಿ ವಾಟರ್ ಟ್ಯಾಂಕ್, ರಾಯರದೊಡ್ಡಿ ಬಸ್ ನಿಲ್ದಾಣ ಸೇರಿದಂತೆ ಕೆಲ ವಾರ್ಡ್ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರೆವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!