ರೋಗ ಪತ್ತೆ ಹಚ್ಚುವ ವಿಚಾರದಲ್ಲಿ ಸರ್ಕಾರ ಜನರ ಜೊತೆ ಚೆಲ್ಲಾಟವಾಡುತ್ತಿದೆ : ಡಿ.ಕೆ.ಸುರೇಶ್
Team Udayavani, Apr 18, 2021, 11:10 PM IST
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೋಗ ಪತ್ತೆ ಹಚ್ಚುವ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ಕೋವಿಡ್ ಪಾಸಿಟಿವ್ ವಿಚಾರದಲ್ಲಿ ಗೊಂದಲವಿದ್ದು, ಅಧಿಕಾರಿಗಳು, ಮಂತ್ರಿಗಳ ನಡುವೆ ಹೊಂದಾಣಿಕೆಯಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಬೇಕಾಬಿಟ್ಟಿ ಪರೀಕ್ಷೆ ಮಾಡುತ್ತಿರುದು ಗಮನಕ್ಕೆ ಬಂದಿದೆ. ಕೆಲವು ಕಡೆ ಪಾಸಿಟಿವ್ ಬರುತ್ತದೆ. ಬೇರೆ ಕಡೆ ಮಾಡಿಸಿದಾಗ ನೆಗೆಟಿವ್ ಬರುತ್ತಿದೆ. ಸಾರ್ವಜನಿಕರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.
ಲ್ಯಾಬ್ ಟೆಕ್ನಿಶಿಯನ್ಸ್ ಟೆಸ್ಟಿಂಗ್ ಪ್ರಕರಣ ಹೊರಬಂದಿವೆ. ಇಷ್ಟಾದರೂ ಸರ್ಕಾರ ಸರಿಯಾಗಿ ಪರಿಗಣಿಸುತ್ತಿಲ್ಲ. ಆರೋಗ್ಯ ಇಲಾಖೆ ನಾವು ಮಾಡಿದ್ದೇ ಸರಿ ಎಂದು ಹೊರಟಿದೆ. ರಾಜ್ಯದಲ್ಲಿ ಸೋಂಕಿತರು ಮತ್ತು ಸಾವಿನ ಸಂಖ್ಯೆ ದಿನವೂ ಹೆಚ್ಚಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಕೊಡಬೇಕಾದ ಬಾಕಿ ಹಾಗೇ ಉಳಿದಿದೆ. ಬಾಕಿ ಏಕೆ ಉಳಿಸಿಕೊಂಡಿದ್ದಾರೆಯೋ ಗೊತ್ತಿಲ್ಲ ಎಂದರು.
ಇದನ್ನೂ ಓದಿ :ರಂಜಾನ್ಗೆ ಜನ ಸೇರುವುದನ್ನು ನಿಷೇಧಿಸಿ ಎಂದು ಪ್ರಧಾನಿಗೆ ನಟಿ ಕಂಗನಾ ಒತ್ತಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ