ಕಲಾವಿದರಿಗೆ ವಿಧೇಯತೆ ಮುಖ್ಯ


Team Udayavani, Mar 4, 2019, 10:49 AM IST

belaku.jpg

ರಾಮನಗರ: ಕಲಾವಿದರಾಗ ಬಯಸುವವರಲ್ಲಿ ವಿನಯ ಮತ್ತು ವಿಧೇಯತೆ ಇರಬೇಕು. ಆಗ ಮಾತ್ರ ಜನ ಮೆಚ್ಚುವಕಲಾವಿದನಾಗಿ ರೂಪುಗೊಳ್ಳಲು ಸಾಧ್ಯಎಂದು ರಂಗಭೂಮಿಯ ಹಿರಿಯ ನಿರ್ದೇಶಕ ವೆಂಕಟರಾಮ್‌ ಕುಪ್ಯ ಹೇಳಿದರು.

ತಾಲೂಕಿನ ಕೃಷ್ಣಾಪುರದೊಡ್ಡಿಯ ತಾನಿನಾರಂಗದಂಗಳದಲ್ಲಿ ಶನಿವಾರ ಶಾಂತಲಾಚಾರಿಟಬಲ್‌ ಟ್ರಸ್ಟ್‌ ಹಮ್ಮಿಕೊಂಡಿದ್ದ ತಿಂಗಳಕಲಾ ಬೆಳಕು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾವು ಹಿರಿಯ ಕಲಾವಿದರ ಸೇವೆ ಮಾಡಿದ್ದರಿಂದಲೇ ಪರಿಪೂರ್ಣ ಕಲಾವಿದನಾಗಿ ರೂಪು ಗೊಂಡಿದ್ದಾಗಿ ಅವರುಹೇಳಿದರು.

ಸದ್ಯ 91 ವರ್ಷ ವಯೋಮಾನದ ತಾವು 1943ರಲ್ಲಿ ಎಚ್‌.ಆರ್‌.ಶಾಸಿŒಯವರ ನಾಟಕ ಕಂಪನಿಗೆ ಸೇರಿಕೊಂಡಿದ್ದಾಗಿ ತಮ್ಮ ಜೀವನದ ಪುಟಗಳನ್ನು ತೆರೆದಿಟ್ಟರು. ನಂತರ ಸುಬ್ಬಯ್ಯನಾಯ್ಡು ಅವರ ನಾಟಕ ಕಂಪನಿಸೇರಿದ್ದಾಗಿ ಹೇಳಿದರು. ಆಗ ಎಣ್ಣೆ ದೀಪ, ಪುಟ್‌ಲೆçಟ್‌ ಬೆಳಕಿನಲ್ಲಿ  ನಾಟಕ ಪ್ರದರ್ಶನ ನಡೆಯುತ್ತಿತ್ತು. ಧ್ವನಿವರ್ಧಕವೂ ಇರಲಿಲ್ಲ ಎಂದು ಹೇಳಿದರು.

ತಿಂಗಳುಗಟ್ಟಲೇ ಕಾಯುತ್ತಿದ್ದೆವು: ತಾವು17ನೇ ವಯಸ್ಸಿನಲ್ಲಿ ತಮಿಳುನಾಡಿನ ಎಂ.ಜಿ.ರಾಮಚಂದ್ರನ್‌ ಜತೆ ತಮಿಳು ನಾಟಕದಲ್ಲಿ ನಟಿಸಿದ್ದಾಗಿ, ಹೊನ್ನಪ್ಪ ಭಾಗವತರ್‌,ಸಮ್ಮನ್‌ ಮೂರ್ತಿ ಭಾಗವತರ್‌ ಹತ್ತಿರಸಂಗೀತ ಕಲಿತಿದ್ದಾಗಿ ಹೇಳಿದರು. ಆಗಿನಕಾಲದಲ್ಲಿ ಅಭಿನಯಿಸಲು ತಿಂಗಳು ಗಟ್ಟಲೆ ಕಾಯಬೇಕಾಗಿತ್ತು ಎಂದು  ಹೇಳಿದರು.

ಮಗುವಿನ ಹಾಲಿಗೂ ಕಾಸಿಲ್ಲ: 1956ರಲ್ಲಿ ಚಾಮುಂಡೇಶ್ವರಿ ಕಂಪನಿಯಲ್ಲಿ ಕೆಲಸ ಮಾಡಿದೆ. ಮಗುವಿನ ಹಾಲಿಗೂ ಕಾಸಿಲ್ಲದೆ ಪರಿಸ್ಥಿತಿ. ರಸ್ತೆಯಲ್ಲಿ ಸಿಕ್ಕಿದ ಒಂದಾಣೆಯಿಂದ ಮಗುವಿಗೆ ಹಾಲು ಖರೀದಿ ಮಾಡಿದ್ದು, ತಾವು ಜೀವನದಲ್ಲಿ ಪಟ್ಟ ಸಂಕಷ್ಟದ ಸನ್ನಿವೇಶಗಳ ಬಗ್ಗೆ ಅವರು ತಿಳಿಸಿದರು. ಈಗ ಭಗೀರಥನನ್ನು ಕುರಿತ ನಾಟಕ ರಚನೆಯಲ್ಲಿ ತೊಡಗಿಸಿಕೊಂಡಿರುವು ದಾಗಿ ತಿಳಿಸಿದರು. ತಮ್ಮ ಕುಟುಂಬದ ಬಗ್ಗೆ ಮಾತನಾಡಿದ ಅವರು, ನಾಟಕ ರಂಗದಲ್ಲೇ ದುಡಿದು ಏಳು ಮಕ್ಕಳನ್ನು ಸಾಕಿ ಸಲಹಿ, ಮದುವೆ ಮಾಡಿದೆ. ಬಾಲಕ ನಿದ್ದಾಗಲೇ ನಾಟಕದ ಗೀಳು ಹಚ್ಚಿಕೊಂಡ ತಮಗೆ ರಂಗಭೂಮಿ ಕ್ಷೇತ್ರ ಜನಮನ್ನಣೆ ತಂದುಕೊಟ್ಟಿದೆ ಎಂದು ಅವರು ಹೇಳಿದರು.

80 ವರ್ಷ ನಿರಂತರ ರಂಗಭೂಮಿ ಸೇವೆ: ಶಾಂತಲಾ ಚಾರಿಟಬಲ್‌ ಟ್ರಸ್ಟಿನ ಸಂಸ್ಥಾಪಕಿ ಕವಿತಾರಾವ್‌ ಮಾತನಾಡಿ, ರಂಗಭೂಮಿಯ ಹಿರಿಯ ಕಲಾವಿದರಾದ ವೆಂಕಟರಾಮ್‌ಕುಪ್ಯ ಈ ತಲೆಮಾರಿನ ಕಲಾವಿದರಿಗೆ ಮಾದರಿ ಯಾಗಿದ್ದಾರೆ. 80 ವರ್ಷಗಳಿಂದ ನಿರಂತರ ವಾಗಿ ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರು ಇಳಿವಯಸ್ಸಿನಲ್ಲಿಯೂ ಕ್ರಿಯಾಶೀಲತೆಯಿಂದ ಇದ್ದಾರೆ ಎಂದು ಹೇಳಿದರು.

ದೇಶಿಯ ಕಲೆ ಉಳಿಸಿ: ಅಧುನಿಕ ಮಾಧ್ಯಮಗಳು ರಂಗ ಕಲೆ ನೇಪಥ್ಯಕ್ಕೆ ಸರಿಯುತ್ತಿದೆ. ಯುವ ಸಮುದಾಯ ಈ ಕಲೆಗಳನ್ನು ಉಳಿಸಿಕೊಳ್ಳಲು ಮುಂದಾಗ ಬೇಕು. ರಂಗಭೂಮಿ ಉಳಿದರೆ ದೇಶಿಯ ಆಚಾರ, ವಿಚಾರ, ಸಂಸ್ಕೃತಿ, ಸಂಪ್ರದಾಯ ಗಳು ಉಳಿಯುತ್ತವೆ ಎಂದು ಹೇಳಿದರು.

ನಾಟಕಗಳನ್ನು ವೀಕ್ಷಿಸಿ: ನಾಟಕಗಳು ನೈಜತೆ ಮತ್ತು ಮಾನವೀಯ ಮೌಲ್ಯಗಳನ್ನು ಉತ್ತಮ ಪಡಿಸುವಲ್ಲಿ ಮಹತ್ವ ಪೂರ್ಣವಾದವುಗಳಾಗಿವೆ. ನಾಟಕಗಳನ್ನು ವೀಕ್ಷಿಸುವ ಮೂಲಕ ರಂಗ ಕಲೆಗೆ ಮತ್ತು ಕಲಾವಿದರಿಗೆ ಪೋ›ತ್ಸಾಹ ನೀಡುವಂತಹ ಕೆಲಸವಾಗಬೇಕಾಗಿದೆ ಎಂದು ಹೇಳಿದರು.

ಸಂಗೀತ ವಿದ್ವಾನ್‌ ಶಿವಾಜಿರಾವ್‌, ರಂಗಭೂಮಿ ಕಲಾವಿದ ರಂಗಸ್ವಾಮಿ, ಗಾಯಕ ಮಹದೇವಯ್ಯ, ಲೋಹಿಯಾ ಅಧ್ಯಯನ ಕೇಂದ್ರದ ಶ್ರೀನಿವಾಸ್‌ ಕರಿಯಪ್ಪ, ಲೇಖಕರ ವೇದಿಕೆಯ ಅಧ್ಯಕ್ಷ ಕೂ.ಗಿ. ಗಿರಿಯಪ್ಪ, ಪರಿಸರವಾದಿ ಬಿ.ಟಿ. ರಾಜೇಂದ್ರ, ರೇಣುಕಾಪ್ರಸಾದ್‌, ಉಪನ್ಯಾಸಕ ಸಿ. ರಮೇಶ್‌ ಹೊಸದೊಡ್ಡಿ ಹಾಜರಿದ್ದರು. 

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.