ಬೆಂಗಳೂರು ಹಾಲು ಒಕ್ಕೂಟದ ಚುನಾವಣೆಗೆ ಸಿದ್ಧತೆ


Team Udayavani, Mar 13, 2019, 7:50 AM IST

haalu.jpg

ಕುದೂರು: ಬೆಂಗಳೂರು ಹಾಲು ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಎರಡು ನಿರ್ದೇಶಕ ಸ್ಥಾನ ಹೊಂದಿರುವ ಮಾಗಡಿಯಲ್ಲೂ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಕ್ಷೇತ್ರಗಳ ವಿಂಗಡನೆ: ಬಮೂಲ್‌ ನಿರ್ದೇಶಕರ ಸಂಖ್ಯೆ 12ರಿಂದ 13ಕ್ಕೆ ಏರಿದ್ದು, ಹೆಚ್ಚುವರಿ ಸ್ಥಾನ ಮಾಗಡಿ ತಾಲೂಕಿಗೆ ಸಿಕ್ಕಿದೆ. ಮಾಗಡಿ ಮತ್ತು ಕುದೂರು ಕ್ಷೇತ್ರಗಳನ್ನಾಗಿ ವಿಂಗಡಿಸಲಾಗಿದ್ದು, ಮಾಗಡಿಗೆ ಮಾಡಬಾಳ್‌, ಕಸಬಾ, ತಾವರೆಕೆರೆ ಹೋಬಳಿಯನ್ನು ಸೇರಿಸಲಾಗಿದೆ. ಕುದೂರು ಕ್ಷೇತ್ರಕ್ಕೆ ಕುದೂರು, ತಿಪ್ಪಸಂದ್ರ, ಸೋಲೂರು ಹೋಬಳಿಗಳನ್ನು ಸೇರಿಸಲಾಗಿದೆ. ಮಾಗಡಿ ಕ್ಷೇತ್ರದಲ್ಲಿ 152 ಸಂಘಗಳು ಬರಲಿದ್ದು, ಕುದೂರು ಕ್ಷೇತ್ರದಲ್ಲಿ 163 ಸಂಘಗಳಿವೆ. ಮೇನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಚುನಾವಣೆಯನ್ನು ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಪ್ರತಿಷ್ಠೆಯಾಗಿ ಸ್ವೀಕರಿಸಿವೆ.

ನಾಯಕರ ಒಲವು ನಿಗೂಢ: ಮಾಗಡಿ ಕ್ಷೇತ್ರದಿಂದ 4 ಬಾರಿ ನಿರ್ದೇಶಕರಾಗಿರುವ ಕಾಂಗ್ರೆಸ್‌ ಬೆಂಬಲಿತ ನರಸಿಂಹಮೂರ್ತಿ 5ನೇ ಬಾರಿಗೆ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ. ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಅವರ ಸಹೋದರ ಎಚ್‌.ಎನ್‌.ಅಶೋಕ್‌, ಮಾಜಿ ಜಿಪಂ ಸದಸ್ಯ ಬೆಳಗುಂಬ ವಿಜಯಕುಮಾರ್‌ ಕೂಡ ಆಸಕ್ತಿ ತೋರಿದ್ದಾರೆ. ಆದರೆ, ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಮತ್ತು ಸಂಸದ ಡಿ.ಕೆ.ಸುರೇಶ್‌ ಒಲವು ಯಾರ ಮೇಲಿದೆ ಎಂಬುದು ನಿಗೂಢವಾಗಿದೆ. 

ಸಹೋದರರ ಸವಾಲ್‌: ಈ ಬಾರಿ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದಿಂದ ಮಾಗಡಿ ಕ್ಷೇತ್ರಕ್ಕೆ ಸಹೋದರರ ಸವಾಲ್‌ ಎದುರಾಗುವುದು ಖಚಿತವಾಗಿದೆ. 5ನೇ ಬಾರಿಗೆ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆಗೆ ಹಾಲಿ ನಿರ್ದೇಶಕ ನರಸಿಂಹಮೂರ್ತಿ ಕಾಂಗ್ರೆಸ್‌ ಪಕ್ಷದಿಂದ ಕಣಕ್ಕಿಳಿಯಲು ತಯಾರಿ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಅವರ ಸಹೋದರ ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪೂಜಾರಿ ಪಾಳ್ಯದ ಕೃಷ್ಣಮೂರ್ತಿ ಕೂಡ ಜೆಡಿಎಸ್‌ ಪಕ್ಷದಿಂದ ಪ್ರಬಲ ಆಕಾಂಕ್ಷಿಯಾಗಿದ್ದು, ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದ ನಾಯಕರು ಇವರಿಬ್ಬರನ್ನೇ ಅಂತಿಮವಾಗಿ ಕಣಕ್ಕಿಳಿಸಿದರೆ ಸಹೋದರರ ಸವಾಲ್‌ ಎದುರಾಗುವುದು ಖಚಿತವಾಗುತ್ತದೆ. 

ಶಾಸಕರ ತಿರ್ಮಾನವೇ ಅಂತಿಮ: ಇನ್ನೂ ಕುದೂರು ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಜಿಪಂ ಮಾಜಿ ಅಧ್ಯಕ್ಷ ಎಂ.ಕೆ.ಧನಂಜಯ, ಕೆಇಬಿ ರಾಜಣ್ಣ ಮತ್ತು ವೀರಶೈವ ಮುಖಂಡ ಶಿವಪ್ರಸಾದ್‌ ಹೆಸರು ಕೇಳಿ ಬರುತ್ತಿದೆ. ಶಾಸಕ ಎ.ಮಂಜುನಾಥ್‌ ತಿರ್ಮಾನವೇ ಅಂತಿಮವಾಗಿದೆ. ಕುದೂರು ಕ್ಷೇತ್ರದಿಂದ ಸೋಲೂರು ಹೋಬಳಿಯ ಸಂತೋಷ್‌, ಬ್ಯಾಡರಹಳ್ಳಿ ರಾಜು, ಕನ್ನಸಂದ್ರ ಮಂಜುನಾಥ್‌ ನಡುವೆ ಪೈಪೋಟಿ ನಡೆಯಲಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದು, ಮೈತ್ರಿ ನಿಯಮ ಪಾಲಿಸುತ್ತಾರೆಯೂ ಅಥವಾ ಚುನಾವಣೆ ನಡೆಸುತ್ತಾರೆಯೂ ಎಂದು ಕಾದು ನೋಡಬೇಕಿದೆ.

ಸ್ಪರ್ಧೆ ಮಾಡಬೇಕು ಎಂದು ಅಂದುಕೊಂಡಿದ್ದೇನೆ. ಮಾಜಿ ಶಾಸಕ ಬಾಲಕೃಷ್ಣ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಈಗಾಗಲೇ ನನಗೆ ಸಾಕಷ್ಟು ಜವಾಬ್ದಾರಿ ಇದ್ದು, ಯೋಚಿಸಿ ತೀರ್ಮಾನ ತೆಗೆದುಕೊಳ್ಳುತೇನೆ.
-ಎಚ್‌.ಎನ್‌.ಅಶೋಕ್‌, ಜಿಪಂ ಸದಸ್ಯರು

ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದು, ನಾನು ಕೂಡ ಪ್ರಬಲ ಅಭ್ಯರ್ಥಿ. ಒಪ್ಪಿಗೆ ಪಡೆದೆ ಚುನಾವಣೆಗೆ ನಿಲ್ಲುತ್ತೇನೆ. ಶಾಸಕ ಎ.ಮಂಜು ತೀರ್ಮಾನಕ್ಕೆ ಬದ್ಧನಾಗಿದ್ದೇನೆ.
-ಪೂಜಾರಿಪಾಳ್ಯದ ಕೃಷ್ಣಮೂರ್ತಿ, ಮಾಗಡಿ ಪ್ರಾಧಿಕಾರದ ಅಧ್ಯಕ್ಷ
 
ಕುದೂರು ಕ್ಷೇತ್ರದಿಂದ ನಾನು ಕೂಡ ಆಕಾಂಕ್ಷಿಯಾಗಿದ್ದು, ಮಾಜಿ ಶಾಸಕ ಬಾಲಕೃಷ್ಣ ಒಪ್ಪಿಗೆ ಪಡೆದು ಚುನಾವಣೆಗೆ ನಿಲ್ಲುತ್ತೇನೆ.
-ರಾಜಣ್ಣ ಕೆಇಬಿ 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.