ಮೋದಿ ಅಮೆರಿಕ ಭೇಟಿ ಅನುಕೂಲಕರ ಫ‌ಲಿತವಿರಲಿ


Team Udayavani, Jun 24, 2017, 7:09 AM IST

24-ankana-3.jpg

ಮೋದಿ-ಟ್ರಂಪ್‌ ಭೇಟಿಯನ್ನು ಪಾಕ್‌ ಆತಂಕದಿಂದಲೇ ಗಮನಿಸುತ್ತದೆ. ಭಾರತ ಮತ್ತು ಅಮೆರಿಕ ನಿಕಟ
ವಾದಷ್ಟೂ ತನಗೆ ಗಂಡಾಂತರ ಎನ್ನುವುದು ಚೆನ್ನಾಗಿ ಅರ್ಥವಾಗಿದೆ.

ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಕೈಗೊಳ್ಳಲಿರುವ ಅಮೆರಿಕ ಪ್ರವಾಸ ಬಹಳಷ್ಟು ಕುತೂಹಲ ಕೆರಳಿಸಿದೆ. ಜೂ.26ರಂದು ಶ್ವೇತ ಭವನದಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜತೆಗೆ ಮೋದಿ ನಡೆಸಲಿರುವ ಮಾತುಕತೆಯ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಪ್ರಧಾನಿಯಾದ ಬಳಿಕ ಮೋದಿ ಕೈಗೊಳ್ಳುತ್ತಿರುವ ಐದನೇ ಅಮೆರಿಕ ಪ್ರವಾಸವಿದು. ಅಂತೆಯೇ ಮೋದಿ ಮತ್ತು ಟ್ರಂಪ್‌ ನಡುವಿನ ಮೊದಲ ದ್ವಿಪಕ್ಷೀಯ ಮಾತುಕತೆಯೂ ಹೌದು. 2014ರಲ್ಲಿ ಪ್ರಧಾನಿಯಾಗಿ ಆಯ್ಕೆಯಾದ ಸಂದರ್ಭದಲ್ಲಿ ನೀಡಿದ ಭೇಟಿಯಲ್ಲಿ ದ್ವಿಪಕ್ಷೀಯ ಸಂಬಂಧ ವರ್ಧನೆಯ ಜತೆಗೆ ಅಮೆರಿಕದಲ್ಲಿರುವ ಭಾರತೀಯ ಮೂಲದವರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶ ಇತ್ತು. ಮ್ಯಾಡಿಸನ್‌ ಸ್ಕ್ವೇರ್‌ನಲ್ಲಿ ಈ ಉದ್ದೇಶಕ್ಕಾಗಿಯೇ ಅನಿವಾಸಿ ಭಾರತೀಯರ ಸಮಾವೇಶನ್ನು ಏರ್ಪಡಿಸಲಾಗಿತ್ತು. ಎರಡನೇ ಭೇಟಿಯಲ್ಲಿ ಆ್ಯಪಲ್‌, ಮೈಕ್ರೋಸಾಫ್ಟ್, ಫೇಸ್‌ಬುಕ್‌, ಗೂಗಲ್‌, ಕ್ವಾಲ್ಕಮ್‌, ಸಿಸ್ಕೊ, ಅಡೋಬ್‌, ಟೆಸ್ಲಾ ಮತ್ತಿತರ ಜಾಗತಿಕ ಸಂಸ್ಥೆಗಳ ಸಿಇಒಗಳನ್ನು ಭೇಟಿ ಮಾಡುವ ಮೂಲಕ ಡಿಜಿಟಲ್‌ ವಾಣಿಜ್ಯ ವ್ಯವಹಾರಗಳ ಉತ್ತೇಜನಕ್ಕೆ ಪ್ರಯತ್ನ ನಡೆಯಿತು. ಕಳೆದ ವರ್ಷ ಮಾರ್ಚ್‌ನಲ್ಲಿ ಪರಮಾಣು ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸುವ ಸಲುವಾಗಿ ಮೋದಿ ಅಮೆರಿಕಕ್ಕೆ ಹೋಗಿದ್ದರು. ನಾಲ್ಕನೇ ಭೇಟಿಯಲ್ಲಿ ಪೂರ್ಣ ಪ್ರಮಾಣದ ದ್ವಿಪಕ್ಷೀಯ ಮಾತುಕತೆ ನಡೆಸಲಾಯಿತು. ಈ ಎಲ್ಲ ಭೇಟಿಯ ಸಂದರ್ಭದಲ್ಲಿ ಅಧ್ಯಕ್ಷರಾಗಿದ್ದವರು ಬರಾಕ್‌ ಒಬಾಮಾ. ಆದರೆ ಈ ಐದನೇ ಭೇಟಿಯ ಸಂದರ್ಭದಲ್ಲಿ ಅಮೆರಿಕದಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ ಹಾಗೂ ಈ ಬದಲಾವಣೆ ಜಾಗತಿಕ ಪರಿಣಾಮಗಳನ್ನು ಬೀರಿದೆ. ಹೀಗಾಗಿ ಟ್ರಂಪ್‌ ಮತ್ತು ಮೋದಿ ಭೇಟಿಯನ್ನು ಇಡೀ ವಿಶ್ವ ಎದುರು ನೋಡುತ್ತಿದೆ. 

ಟ್ರಂಪ್‌-ಮೋದಿ ಮಾತುಕತೆಯ ಅಜೆಂಡಾ ಏನು ಎನ್ನುವುದು ಇನ್ನೂ ಬಹಿರಂಗವಾಗಿಲ್ಲ. ಇದು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ಆಯಾಮಗಳಿರುವ ಭೇಟಿ ಎನ್ನಲಾಗುತ್ತಿದೆ. ಹೂಡಿಕೆಯ ಹರಿವು, ತಂತ್ರಜ್ಞಾನ ಮತ್ತು ಅನ್ವೇಷಣೆಗಳ ಸಹಭಾಗಿತ್ವ, ಭಯೋತ್ಪಾದನೆ ನಿಗ್ರಹ, ಸೈಬರ್‌ ಭದ್ರತೆ ಸಹಕಾರ, ರಕ್ಷಣಾ ಸಹಕಾರ ಇತ್ಯಾದಿ ಮಾಮೂಲು ದ್ವಿಪಕ್ಷೀಯ ವಿಚಾರಗಳು ಚರ್ಚೆಗೆ ಬರಲಿವೆ. ಪಾಕಿಸ್ತಾ ನಕ್ಕೆ ಸಂಬಂಧಿಸಿದಂತೆ ಟ್ರಂಪ್‌ ಸರಕಾರ ಬಿಗಿ ನಿಲುವು ತಳೆದಿದೆ. ಪಾಕ್‌ಗೆ ನೀಡುವ ನೆರವನ್ನು ಕಡಿತಗೊಳಿಸುವ ಪ್ರಸ್ತಾವವೂ ಅವರ ಬಳಿಯಿದೆ. ಜತೆಗೆ ಪಾಕ್‌ನ ಉಗ್ರರ ಅಡಗುತಾಣಗಳಿಗೆ ಡ್ರೋನ್‌ ದಾಳಿ ಮಾಡುವ ಸಾಧ್ಯತೆಯನ್ನೂ ಅಮೆರಿಕ ಪರಿಶೀಲಿಸುತ್ತಿದೆ. ಭಯೋತ್ಪಾದನೆ ವಿಚಾರದಲ್ಲಿ ಅಮೆರಿಕ ಕೈಗೊಳ್ಳುವ ಯಾವುದೇ ನಿರ್ಧಾರ ಭಾರತಕ್ಕೆ ಅನುಕೂಲಕರವಾಗಿರುತ್ತದೆ ಎಂದು ನಿರೀಕ್ಷಿಸಬಹುದು. ಭಾರತ ಬಹುಕಾಲದಿಂದ ನಿರೀಕ್ಷಿಸುತ್ತಿದ್ದ 22 ಗಾರ್ಡಿಯನ್‌ ಡ್ರೋನ್‌ಗಳನ್ನು ನೀಡಲು ಅಮೆರಿಕ ಒಪ್ಪಿಕೊಂಡಿರುವುದು ಸಕಾರಾತ್ಮಕವಾದ ಬೆಳವಣಿಗೆ. 

ಇದೇ ವೇಳೆ ಚೀನಕ್ಕೆ ಮೋದಿ-ಟ್ರಂಪ್‌ ಮಾತುಕತೆ ಮೇಲೆ ಮಿತಿಮೀರಿದ ಕುತೂಹಲ ಇರುವಂತೆ ಕಾಣಿಸುತ್ತದೆ. ಏಶ್ಯಾ ಫೆಸಿಫಿಕ್‌ ವಲಯದಲ್ಲಿ ಸೇನಾ ಸಂಬಂಧವನ್ನು ಗಟ್ಟಿಗೊಳಿಸುವ ಯಾವುದೇ ಕ್ರಮ ದಕ್ಷಿಣ ಚೀನ ಸಾಗರದ ಮೇಲಿನ ಶಾಂತಿಯನ್ನು ಕದಡುವ ಸಾಧ್ಯತೆಯಿದೆ ಎಂದು ಚೀನ ಬಹಿರಂಗವಾಗಿ ಎಚ್ಚರಿಸಿದೆ. ದಕ್ಷಿಣ ಚೀನ ಸಮುದ್ರದ ಮೇಲಿನ ತನ್ನ ಸಾರ್ವಭೌಮತ್ವಕ್ಕೆ ಎದುರಾಗುವ ಯಾವ ಸವಾಲನ್ನು ಕೂಡ ಸಹಿಸಲು ಚೀನ ತಯಾರಿಲ್ಲ. ತನ್ನದೇ ಪ್ರಯತ್ನದಿಂದ ಇಲ್ಲಿ ಶಾಂತಿ ನೆಲೆಯಾಗಿದೆ ಎಂದು ಹೇಳಿಕೊಳ್ಳುತ್ತಿರುವ ಚೀನ, ಭಾರತ ಮತ್ತು ಅಮೆರಿಕ ಶಾಂತಿಗೆ ಅಪಾಯಕಾರಿ ಎಂದು ಭಾವಿಸಿದೆ. 

ಇದೇ ವೇಳೆ ಟ್ರಂಪ್‌ ಸರಕಾರದ ಎಚ್‌1ಬಿ ವೀಸಾ ನೀತಿಯ ಕುರಿತು ಮೋದಿ ನಡೆಸಬಹುದಾದ ಮಾತುಕತೆಯ ಮೇಲೂ ಚೀನಕ್ಕೆ ಆಸಕ್ತಿಯಿದೆ. ಏಕೆಂದರೆ ಟ್ರಂಪ್‌ ವೀಸಾ ನೀತಿಯಿಂದ ಹೆಚ್ಚು ನಷ್ಟವಾಗಿರುವುದು ಚೀನ ಮತ್ತು ಭಾರತಕ್ಕೆ. ಮೋದಿ ಭೇಟಿಯಿಂದ ವೀಸಾ ವಿಚಾರದಲ್ಲಿ ಟ್ರಂಪ್‌ ಮೆದುವಾದರೆ ಅದರ ಲಾಭ ತನಗೂ ಸಿಗಬಹುದು ಎನ್ನುವುದು ಚೀನದ ಲೆಕ್ಕಾಚಾರ. ಪಾಕ್‌ ಈ ಭೇಟಿಯನ್ನು ಆತಂಕದಿಂದಲೇ ಗಮನಿಸುತ್ತದೆ. ಭಾರತ ಮತ್ತು ಅಮೆರಿಕ ನಿಕಟವಾದಷ್ಟೂ ತನಗೆ ಗಂಡಾಂತರ ಎನ್ನುವುದು ಅದಕ್ಕೆ  ಚೆನ್ನಾಗಿ ಅರ್ಥವಾಗಿದೆ. ಪ್ರಧಾನಿ ಮೋದಿಯವರ ಅಮೆರಿಕ ಭೇಟಿ, ಟ್ರಂಪ್‌ ಅವರ ಕೆಲವು ಕಠಿಣ, ಹಠಮಾರಿ ಧೋರಣೆ  ಹೊರತಾಗಿ  ಭಾರತಕ್ಕೆ ಅನುಕೂಲವಾಗಲಿ ಎಂಬುದೇ ಹಾರೈಕೆ. 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.