ಜನಸಾಮಾನ್ಯರಿಗೆ ನಿಲುಕುವ ಜೆನರಿಕ್‌ ಹೆಲ್ತ್‌ಕೇರ್‌ 


Team Udayavani, Jul 15, 2018, 6:00 AM IST

47.jpg

ಪ್ರಧಾನಮಂತ್ರಿ ಜನೌಷಧಿಯನ್ನು ಎಲ್ಲ ಮೆಡಿಕಲ್‌ ಮಳಿಗೆಗಳಲ್ಲಿ ಮಾರಬೇಕೆಂದು ಕೇಂದ್ರ ಸರಕಾರ ಆದೇಶವನ್ನು ಹೊರಡಿಸಲಿದೆಯಂತೆ. ಔಷಧಿ ಅಂಗಡಿಗಳಲ್ಲಿ ಮತ್ತು ಆಸ್ಪತ್ರೆಯಲ್ಲಿ ಲಭ್ಯ ವಿರುವ ಔಷಧಿ, ಅದರ ದುಬಾರಿ ದರದ ಬಗ್ಗೆ ಜನಸಾಮಾನ್ಯರಿಗೆ ತಿಳಿದೇ ಇದೆ. ಹೆಚ್ಚಿನ ಔಷಧಿಗಳು ದುಬಾರಿಯಾಗಿದ್ದು ಕೈಗೆಟಕುವ ದರದಲ್ಲಿ ಸಿಗುತ್ತಿಲ್ಲ. ಇದನ್ನು ಹೋಗಲಾಡಿಸುವ ಉದ್ದೇಶದಿಂದ “ಪ್ರಧಾನಮಂತ್ರಿ ಜನೌಷಧಿ ಪರಿಯೋಜನೆ’ಯನ್ನು ಆರಂಭಿಸಲಾಯ್ತು. ಈ ಯೋಜನೆಯಡಿ, ಶೀತ, ಜ್ವರದಿಂದ, ಕ್ಯಾನ್ಸರ್‌ವರೆಗೂ ಔಷಧಿಗಳು ಲಭ್ಯ. ವೈದ್ಯರು ಸೂಚಿಸಿದ ದುಬಾರಿ ಔಷಧಿಗಳಿಂದಾಗಿ, ಚಿಕಿತ್ಸೆ ಅಪೂರ್ಣಗೊಂಡು ಬಡ ರೋಗಿಗಳು ಆಸ್ಪತ್ರೆಯಿಂದ ಮನೆಗೆ ಬಿಡುಗಡೆಗೊಂಡ ಅನೇಕ ಉದಾಹರಣೆಗಳು ನಮ್ಮ ಮುಂದಿವೆ. ಇಂತಹ ರೋಗಿಗಳಿಗೆ ಈ ಯೋಜನೆಯಿಂದ ಲಾಭವಿದೆ. ವೈದ್ಯಶಾಸ್ತ್ರೀಯ ಮೌಲ್ಯ ಅಥವಾ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ ಕೈಗೆಟಕುವ ದರದಲ್ಲಿ ಜೆನೆರಿಕ್‌ ಔಷಧಿಗಳನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶ. 500ಕ್ಕೂ ಮಿಕ್ಕಿ ಔಷಧಿಗಳು ಈ ಯೋಜನೆಯಡಿ ಲಭ್ಯ. ಸಮಾಜದ ಪ್ರತಿಯೊಂದು ವರ್ಗಕ್ಕೂ ಎಲ್ಲ ಔಷಧಿಗಳು ಕೈಗೆ ನಿಲುಕುವಂತಾಗಬೇಕು ಮತ್ತು ಜೆನೆರಿಕ್‌ ಔಷಧಿಗಳ ಬಗ್ಗೆ ಹೆಚ್ಚೆಚ್ಚು ಜಾಗೃತಿಯನ್ನು ಜನಸಾಮಾನ್ಯರಲ್ಲಿ ಮೂಡಿಸುವ ಪ್ರಯತ್ನವಾಗಬೇಕು. ಈ ಯೋಜನೆ ರೋಗಿಗಳಿಗೆ ಜೆನೆರಿಕ್‌ ಔಷಧಿಗಳನ್ನು ಸೂಚಿಸುವಂತೆ, ವೈದ್ಯರನ್ನು ತರಬೇತುಗೊಳಿಸುತ್ತದೆ. 

ಯಾವುದು ಜೆನೆರಿಕ್‌ ಔಷಧಿಗಳು?
ಸರಳವಾಗಿ ತಿಳಿಸುವುದಾದರೆ ಜೆನೆರಿಕ್‌ ಔಷಧಿಗಳೆಂದರೆ ಸಮಾನ ಗುಣಮಟ್ಟದ, ಅದೇ ವೈದ್ಯಶಾಸ್ತ್ರೀಯ ಮೌಲ್ಯವುಳ್ಳ ಬ್ರಾಂಡ್‌ ರಹಿತ (ಅನ್‌ ಬ್ರಾಂಡೆಡ್‌) ಔಷಧಿಗಳು. ಅವು ವಿಶೇಷ ಔಷಧಿಗಳಲ್ಲ, ಜೆನೆರಿಕ್‌ ಹೆಸರುಳ್ಳ, ಅತಿ ಕಡಿಮೆ ಬೆಲೆಗೆ ದೊರಕುವ ಅನ್‌ಬ್ರಾಂಡೆಡ್‌ ಔಷಧಿಗಳು. ಔಷಧಿ ಕಂಪೆನಿಗಳು ಔಷಧಿಗಳ ಸಂಶೋಧನೆಗಾಗಿ ಅಪಾರ ಹಣವನ್ನು ವಿನಿಯೋಗಿಸುತ್ತವೆ. ಸಂಶೋಧನೆಯ ಬಳಿಕವೂ ಔಷಧಿಗಳ ವೈದ್ಯಶಾಸ್ತ್ರೀಯ ಮೌಲ್ಯ, ರೋಗ ಉಪಶಮನದಲ್ಲಿ ಅದರ ಪರಿಣಾಮವನ್ನು ನಿರ್ಧರಿಸುವಲ್ಲೂ ಹಣ ಖರ್ಚುಮಾಡುತ್ತವೆ. ಅದರ ಸಮಗ್ರ ಪ್ರಕ್ರಿಯೆಗೆ ತುಂಬಾ ಸಮಯವೂ ಬೇಕು. ಇನ್ನೂ ಹೆಚ್ಚಿನ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಕಂಪೆನಿಗಳು ಈ ಎಲ್ಲಾ ವೆಚ್ಚವನ್ನು ವಸೂಲುಮಾಡಬೇಕು. ಆದ್ದರಿಂದ ಶೋಧಿಸಲ್ಪಟ್ಟ ಔಷಧಿಗಳ ಮೇಲೆ ಪೇಟೆಂಟನ್ನು ಹೊಂದಿರುತ್ತವೆ. ಅದೇ ಫಾರ್ಮುಲವನ್ನು ಬಳಸಿ ಔಷಧಿಯನ್ನು ಬೇರೆ ಕಂಪೆನಿಗಳು ಉತ್ಪಾದಿಸುವಂತಿಲ್ಲ. ಪೇಟೆಂಟ್‌ ಅವಧಿ ಮುಗಿದ ಬಳಿಕ ಅದೇ ಔಷಧಿಯನ್ನು ಬೇರೆ ಕಂಪೆನಿಗಳು ಉತ್ಪಾದಿಸಬಹುದು. ಈ ಔಷಧಿಗಳು ಲೈಸೆನ್ಸ್‌ ದೊರೆತ ಬಳಿಕ ಅದರ ಜೆನೆರಿಕ್‌ ಹೆಸರಿನಲ್ಲೇ ಉತ್ಪಾದಿಸಲ್ಪಡಬೇಕು ಮತ್ತು ವೈದ್ಯ ಶಾಸ್ತ್ರೀಯ ಮೌಲ್ಯವನ್ನು ದೃಢೀಕರಿಸಬೇಕು. ಇಂತಹ ಔಷಧಿಗಳೇ ಜೆನೆರಿಕ್‌ ಔಷಧಿಗಳು. ಇವುಗಳು ಜನೌಷಧಿ ಮಳಿಗೆಗಳಲ್ಲಿ ದೊರಕುತ್ತವೆ. 

ಜೆನೆರಿಕ್‌ ಔಷಧಿಗಳ ಗುಣಮಟ್ಟ 
ಯಾವುದೇ ವಸ್ತುವೊಂದು ಅತಿ ಅಗ್ಗದ ಬೆಲೆಗೆ ದೊರಕುವಾಗ ಅದು ಕಳಪೆ ಗುಣಮಟ್ಟದ್ದು ಎಂಬ ಭಾವನೆ ಜನಸಾಮಾನ್ಯರಿಗಿದೆ. ಆದರೆ ಜೆನೆರಿಕ್‌ ಔಷಧಿಗಳು ಹಾಗಲ್ಲ. ಜೆನೆರಿಕ್‌ ಮತ್ತು ಬ್ರಾಂಡೆಡ್‌ ಔಷಧಿಗಳ ಸತ್ವ ಸಮಾನವಾದುದು. ಅದರ ವೈದ್ಯಶಾಸ್ತ್ರೀಯ ಮೌಲ್ಯಗಳೂ ಸಮವಾಗಿವೆ. ಬಣ್ಣದ ಅಂಶಗಳು, ತುಂಬಲು ಬಳಸುವ ಸಾಧನಗಳು, ರುಚಿ ಇತ್ಯಾದಿಗಳು ಭಿನ್ನವಾಗಿದ್ದರೂ ಅದರ ವೈದ್ಯಶಾಸ್ತ್ರೀಯ ಮೌಲ್ಯಕ್ಕೆ ಹಾನಿಯಿಲ್ಲ. ಜನೌಷಧಿ ಮಳಿಗೆಗಳಲ್ಲಿ ದೊರಕುವ ಮೊದಲು ಔಷಧಿಗಳು ಅದರ ಪರಿಣಾಮ, ಗುಣಮಟ್ಟ ಮತ್ತು ಸುರಕ್ಷತೆ ಬಗ್ಗೆ, ನ್ಯಾಷನಲ್‌ ಎಕ್ರಿಡಿಟೇಶನ್‌ ಬೋರ್ಡ್‌ ಫಾರ್‌ ಟೆಸ್ಟಿಂಗ್‌ ಆಂಡ್‌ ಕ್ಯಾಲಿಬ್ರೇಶನ್‌ ಲಾಬ್‌ನಲ್ಲಿ ವ್ಯಾಪಕ, ಕಠಿಣ ಪರೀಕ್ಷೆಗೆ ಒಳಪಡುತ್ತವೆ. ಬಳಿಕ ಮಾರುಕಟ್ಟೆಗೆ ಬಿಡುಗಡೆಗೊಳ್ಳುತ್ತದೆ.

ಬಿಪಿಪಿಐ(ಬ್ಯುರೋ ಆಫ್ ಫಾರ್ಮಾ ಪಿಎಸ್‌ಯು ಆಫ್ ಇಂಡಿಯಾ)ಯು ಈ ಯೋಜನೆಯನ್ನು ಮಾನಿಟರ್‌ ಮಾಡಲು ಸ್ಥಾಪಿಸಲ್ಪಟ್ಟಿದೆ. ರಾಜ್ಯ ಸರಕಾರದ ಪಾಲುದಾರಿಕೆಯೊಂದಿಗೆ ಬಿಪಿಪಿಐ ಜನೌಷಧಿ ಮಳಿಗೆಗಳನ್ನು ತೆರೆಯುವುದು, ಮಾನಿಟರ್‌ ಮಾಡುವುದು, ಜೆನೆರಿಕ್‌ ಔಷಧಿಗಳ ಬೆಲೆಯನ್ನು ನಿಗದಿಗೊಳಿಸುವುದು, ವಿತರಣೆಯನ್ನು ಖಾತರಿಪಡಿಸುತ್ತದೆ. ಜನೌಷಧಿ ಮಳಿಗೆಗಳನ್ನು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತೆರೆಯುವುದು ಬಿಪಿಪಿಐಯ ಮುಖ್ಯ ಉದ್ದೇಶ. ರಾಜ್ಯ ಸರಕಾರಗಳು ಸರಕಾರೀ ಆಸ್ಪತ್ರೆಗಳ ಸಮೀಪ ಸೂಕ್ತ ಜಾಗವನ್ನು ಒದಗಿಸಬೇಕು. ಅಂಚೆ ಕಚೇರಿ, ರೈಲ್ವೇ ಸ್ಟೇಷನ್‌, ಪಂಚಾಯತ್‌ ಕಚೇರಿ, ಬಸ್‌ಸ್ಟಾಂಡ್‌, ರಕ್ಷಣಾ ಪ್ರದೇಶಗಳಲ್ಲೂ ಜಾಗವನ್ನು ಒದಗಿಸಬೇಕು. ಜನೌಷಧಿ ಮಳಿಗೆಗಳನ್ನು ತೆರೆಯುವ ಪ್ರಕ್ರಿಯೆ ಬಹಳ ಸರಳವಾಗಿದೆ. ಯೋಗ್ಯತೆಯುಳ್ಳ ಸಾಮಾನ್ಯ ವ್ಯಕ್ತಿ, ಸರಕಾರೇತರ ಸಂಸ್ಥೆ ಅಥವಾ ಟ್ರಸ್ಟ್‌ ಮಳಿಗೆಗಗಳನ್ನು ತೆರೆಯಬಹುದು. ಜನೌಷಧಿಯನ್ನು ಉತ್ತೇಜಿಸುವ ಸಲುವಾಗಿ ರೂ. 2000 ಅರ್ಜಿ ಶುಲ್ಕವನ್ನೂ ಮನಾ °ಮಾಡಲಾಗಿದೆ. ಜನೌಷಧೀ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರಕಾರ ಆರ್ಥಿಕ ಸಹಾಯವನ್ನು ನೀಡುತ್ತದೆ.

ಜಲಂಚಾರು ರಘುಪತಿ ತಂತ್ರಿ

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

5-

ಸಮುದಾಯ ಪ್ರಜ್ಞೆ ಬಿತ್ತಲು ಮನೆಯೇ ಪ್ರಶಸ್ತ

1-sadsdsa

Children ಹದಿಹರೆಯ -ತಾಯಿಯ ಕರ್ತವ್ಯ

1-sadsdsad

Emotion-language-life; ಭಾವ-ಭಾಷೆ-ಬದುಕು

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.