ಏಕೆ ಕೇಳಿಸುತ್ತಿಲ್ಲ ಕನ್ನಡಿಗರ ಕೂಗು?


Team Udayavani, Jul 28, 2018, 6:00 AM IST

19.jpg

ನಾವು ಕನ್ನಡ ಭಾಷಾ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡದೆ ಇದ್ದುದರಿಂದ ಈಗ ಕನ್ನಡ ಶಾಲೆಗಳನ್ನು ಮುಚ್ಚುವ ಮಟ್ಟಕ್ಕೆ ಬಂದಿದ್ದೇವೆ. ಆಧುನಿಕ ಕಾಲಕ್ಕೆ ಅನುಗುಣವಾಗಿ ನಮ್ಮ ಕನ್ನಡ ಶಾಲೆಗಳಿಗೂ ಬೇಕಾದ ಸವಲತ್ತುಗಳನ್ನು ಒದಗಿಸಿ, ಕಾಲಕಾಲಕ್ಕೆ ಅದನ್ನು ಅಭಿವೃದ್ಧಿ ಪಡಿಸುತ್ತ ಬಂದರೆ ಈ ಸಮಸ್ಯೆ ತಲೆದೋರುತ್ತಿರಲಿಲ್ಲ. ಖಾಸಗಿಯವರು ಶಾಲೆಗಳನ್ನು ಅಭಿವೃದ್ಧಿಪಡಿಸಿದಂತೆ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿಕೊಂಡು ಬರದೇ ಇದ್ದುದರಿಂದ ಜನತೆ ಖಾಸಗಿ ಶಾಲೆಗಳತ್ತ ಮುಖ ಮಾಡಿದ್ದಾರೆ.

ಸರಕಾರ ಯಾವುದೇ ಬರಲಿ ಅದು ನಾಡು-ನುಡಿ ನೆಲ-ಜಲದ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಬೇಕು. ಆದರೆ ಈಗಿನ ಸರಕಾರ ಕನ್ನಡ ಭಾಷೆಗೆ ಮಾರಕವಾಗುವಂತಹ ನಡೆಯನ್ನು ಅನುಸರಿಸುತ್ತಿರುವುದು ವ್ಯಕ್ತವಾಗುತ್ತಿದೆ. ಶಾಲೆಗಳ ವಿಲೀನ, ಕನ್ನಡ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವುದು, ಸಾಕಷ್ಟು ಪ್ರಮಾಣದ ವಿದ್ಯಾರ್ಥಿಗಳಿಲ್ಲದ ಶಾಲೆಯನ್ನು ಮುಚ್ಚುವುದು ಮುಂತಾದ ಪ್ರಕ್ರಿಯೆಗಳಿಗೆ ಚಾಲನೆ ನೀಡುವ ಚಿಂತನೆಯಲ್ಲಿದೆ. ಇವುಗಳು ಕನ್ನಡ ಭಾಷಾ ಬೆಳವಣಿಗೆಗೆ ಮಾರಕವಾಗಬಹುದಾದಂತಹ ಹೆಜ್ಜೆಗಳು. ಇದನ್ನು ಹಿರಿಯ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರು ತೀರ್ವವಾಗಿ ವಿರೋಧಿಸಿದ್ದಾರೆ. ಸರಕಾರ ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದರೆ ಗೋಕಾಕ ಚಳವಳಿ ಮಾದರಿಯಲ್ಲಿ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆಂಬ ಎಚ್ಚರಿಕೆ ಯನ್ನು ಈಗಾಗಲೇ ಸರಕಾರಕ್ಕೆ ಮುಟ್ಟಿಸಿದ್ದಾರೆ. 

ಒಂದು ಭಾಷೆ ಬೆಳೆಯಬೇಕಾದರೆ ಆ ಭಾಷೆಯನ್ನು ಮಾತನಾಡುವವರ, ಓದುವವರ, ಬರೆಯುವವರ ಹಾಗೂ ಆ ವಿಚಾರಗಳ ಬಗ್ಗೆ ಚಿಂತನ – ಮಂಥನ ಮಾಡುವವರ ಸಂಖ್ಯೆಯನ್ನು ಬೆಳೆಸಬೇಕು. ಪ್ರತಿಯೊಂದು ರಾಜ್ಯ ಮಾತೃಭಾಷೆಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ಕೊಡುತ್ತಿರುವಾಗ ನಾವೇಕೆ ಕನ್ನಡ ಭಾಷೆಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ಕೊಡಬಾರದು? ತಮಿಳು ನಾಡಿನವರಿಗೆ ತಮಿಳು, ಆಂಧ್ರ ಪ್ರದೇಶದವರಿಗೆ ತೆಲುಗು, ಕೇರಳ ದ ವರಿಗೆ ಮಲಯಾಳಂ ಭಾಷೆ ಹೇಗೆ ಪ್ರಧಾನವೋ ಹಾಗೆಯೇ ಕನ್ನಡಿಗರಿಗೆ ಕನ್ನಡ ಭಾಷೆಯೇ ಪ್ರಧಾನ ಆಗುವುದರಲ್ಲಿ ಯಾವ ತಪ್ಪೂ ಇಲ್ಲ. ಎಲ್ಲಾ ರಾಜ್ಯಗಳು ಮಾತೃಭಾಷೆಯನ್ನು ಕಡ್ಡಾಯ ಮಾಡಿದಂತೆ ಕರ್ನಾಟಕದಲ್ಲೂ ಕನ್ನಡವನ್ನು ಕಡ್ಡಾಯ ಮಾಡು ವುದರಲ್ಲಿ ತಪ್ಪಿಲ್ಲ ಹಾಗೂ ಪ್ರಾಥಮಿಕ ಶಿಕ್ಷಣವನ್ನು ಅವರವರ ಮಾತೃಭಾಷೆಯಲ್ಲೇ ಮಾಡಬೇಕೆಂದು ಕಡ್ಡಾಯಗೊಳಿಸಿದರೆ ಮಾತೃಭಾಷೆ ಉಳಿದೀತು ಹಾಗೂ ಬೆಳೆದೀತು. ಕನ್ನಡ ನಾಡಿನಲ್ಲಿ ವಾಸಿಸುವವರೆಲ್ಲರೂ ಕಡ್ಡಾಯವಾಗಿ ಕನ್ನಡ ಕಲಿಯಲೇಬೇಕು ಎನ್ನುವ ವಿಚಾರವು ಭಾಷಾ ಬೆಳವಣಿಗೆಗೆ ಪೂರಕವಾಗುತ್ತದೆ. ಇದನ್ನು ಮಾಡದೇ ಇರುವುದು ನಮ್ಮಲ್ಲಿರುವ ಭಾಷಾಭಿಮಾನದ ಕೊರತೆಯನ್ನು ಎತ್ತಿ ತೋರಿಸುತ್ತದೆ.

ಭಾಷಾಭಿಮಾನದ ವಿಷಯ ಬಂದಾಗ ತಮಿಳರ ನೆನಪಾಗುತ್ತದೆ. ತಮಿಳರಿಗೆ ತಮ್ಮ ಮಾತೃಭಾಷೆಗೆ ಮಿಗಿಲಾದದ್ದು ಯಾವುದೂ ಇಲ್ಲ. ತಮಿಳು ಮಾತನಾಡುವವರು ಬೇರೆ ರಾಜ್ಯ ದವರೇ ಆಗಿದ್ದರೂ ಮೆರೆಸಿರುವುದಕ್ಕೆ ಹಲವು ಉದಾಹರಣೆಗಳನ್ನು ಕೊಡಬಹುದು. ತಮಿಳುನಾಡಿಗೆ ಹೋದರೆ ಎಲ್ಲರ ಅರಿವಿಗೆ ಬರುವ ಸತ್ಯವಿದು. ಅಲ್ಲಿ ತಮಿಳು ಬಿಟ್ಟರೆ ಬೇರೆ ಭಾಷೆಗೆ ಪ್ರಾಧಾನ್ಯತೆ ಕಡಿಮೆ. ಮೊದಲ ಆದ್ಯತೆ ತಮಿಳಿಗೆ, ಅಲ್ಲಿನ ಆಡಳಿತ ಭಾಷೆ ತಮಿಳು. ಎಲ್ಲಾ ನಾಮಫ‌ಲಕಗಳು ತಮಿಳಿನಲ್ಲಿಯೇ ರಾರಾಜಿಸುತ್ತದೆ. ಇಲ್ಲಿನ ಮುಖ್ಯ ಉದ್ದೇಶ ತಮಿಳು ಭಾಷೆಯನ್ನು ಅಭಿವೃದ್ಧಿ ಪಡಿಸುವುದಾಗಿದೆ. ತಮಿಳುನಾಡಿನಲ್ಲಿ ಇರುವವರೆಲ್ಲರೂ ಕಡ್ಡಾಯವಾಗಿ ತಮಿಳು ಕಲಿಯಲೇಬೇಕಾ ಗುತ್ತದೆ. ಇದರಿಂದ ಭಾಷೆ ಬೆಳೆಯುತ್ತದೆ.

ನಾವು ಕನ್ನಡ ಭಾಷಾ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡದೆ ಇದ್ದುದರಿಂದ ಈಗ ಕನ್ನಡ ಶಾಲೆಗಳನ್ನು ಮುಚ್ಚುವ ಮಟ್ಟಕ್ಕೆ ಬಂದಿದ್ದೇವೆ. ಆಧುನಿಕ ಕಾಲಕ್ಕೆ ಅನುಗುಣವಾಗಿ ನಮ್ಮ ಕನ್ನಡ ಶಾಲೆಗಳಿಗೂ ಬೇಕಾದ ಸವಲತ್ತುಗಳನ್ನು ಒದಗಿಸಿ, ಕಾಲಕಾಲಕ್ಕೆ ಅದನ್ನು ಅಭಿವೃದ್ಧಿ ಪಡಿಸುತ್ತ ಬಂದರೆ ಈ ಸಮಸ್ಯೆ ತಲೆದೋ ರುತ್ತಿರಲಿಲ್ಲ. ಖಾಸಗಿಯವರು ಶಾಲೆಗಳನ್ನು ಅಭಿವೃದ್ಧಿಪಡಿಸಿದಂತೆ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿಕೊಂಡು ಬರದೇ ಇದ್ದುದರಿಂದ ಜನತೆ ಖಾಸಗಿ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರಿಂದ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಯಾಗುತ್ತ ಬಂದಿದೆ. ಸರಕಾರಿ ಶಾಲೆಗಳನ್ನು ಸಬಲಗೊಳಿಸಲು ಸರಕಾರ ಮನಸ್ಸು ಮಾಡದೆ ಇದ್ದುದರಿಂದ ಇಂದು ಸರಕಾರಿ ಶಾಲೆಗಳು ಗುಣಮಟ್ಟವೂ ಸೇರಿದಂತೆ ಪ್ರತಿಯೊಂದು ವಿಷಯ ಗಳಲ್ಲಿ ಕುಸಿದಿವೆ. ಶಾಲೆಗಳಿದ್ದರೆ ವಿದ್ಯಾರ್ಥಿಗಳಿಲ್ಲ, ವಿದ್ಯಾರ್ಥಿ ಗಳಿದ್ದರೆ ಶಿಕ್ಷಕರಿಲ್ಲ, ಎನ್ನುವ ಸ್ಥಿತಿಯಲ್ಲಿ ನಮ್ಮ ಸರಕಾರಿ ಶಾಲೆಗಳಿವೆ ಹಾಗೂ ಇಲ್ಲಿ ಗುಣಮಟ್ಟದ ಶಿಕ್ಷಣದ ಕೊರತೆ ಇರುವುದರಿಂದ ಎಲ್ಲರೂ ಸರಕಾರಿ ಶಾಲೆಗಳನ್ನು ಕಡೆಗಣಿಸಿದ್ದಾರೆ. ಇನ್ನಾದರೂ ಸರಕಾರ ಎಚ್ಚೆತ್ತುಕೊಂಡು ಸರಕಾರಿ ಶಾಲೆಗಳನ್ನು ಸಬಲೀಕರಣ ಗೊಳಿಸಬೇಕೇ ವಿನಃ ಅದನ್ನು ಮುಚ್ಚಲು ಮುಂದಾಗಬಾರದು.

ಸರಕಾರ ಇದನ್ನು ಮಾಡದೇ ಕನ್ನಡ ಶಾಲೆಗಳಲ್ಲೂ ಆಂಗ್ಲ ಮಾಧ್ಯಮ ಆರಂಭಿಸಲು ಮುಂದಾಗಿದೆ. ಆಂಗ್ಲ ಭಾಷೆ ಅಂತಾ ರಾಷ್ಟ್ರೀಯವಾಗಿ ಮನ್ನಣೆ ಪಡೆದ ಭಾಷೆ ಆಗಿರುವುದರಿಂದ ಅದನ್ನು ಎಲ್ಲರೂ ಕಲಿಯಬೇಕು ಎಂಬ ವಿಚಾರದಲ್ಲಿ ಅಭ್ಯಂತರವಿಲ್ಲ. ಇಂಗ್ಲೀಷನ್ನು ಬೇಕಾದರೆ ಒಂದನೇ ತರಗತಿಯಿಂದಲೇ ಒಂದು ಭಾಷೆಯಾಗಿ ಸರಕಾರಿ ಶಾಲೆಗಳಲ್ಲೂ ಕಲಿಸಲಿಕ್ಕೆ ಯಾವುದೇ ತಕರಾರು ಕೂಡಾ ಇಲ್ಲ. ಆದರೆ ಇಂಗ್ಲೀಷ್‌ ಮಾಧ್ಯಮವನ್ನು ಸರಕಾರಿ ಶಾಲೆಯಲ್ಲಿ ಆರಂಭಿಸಲು ವಿರೋಧವಿದೆ. ಕೊನೆಯ ಪಕ್ಷ ಪ್ರಾಥಮಿಕ ಶಿಕ್ಷಣವಾದರೂ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಮಾಡಿದರೆ ಮಾತ್ರ ಕನ್ನಡ ಭಾಷೆಯನ್ನು ಅಭಿವೃದ್ಧಿಗೊಳಿಸಬಹುದು ಎಂಬ ವಾದ ಕನ್ನಡಿಗರದು. ಕರ್ನಾಟಕದಲ್ಲಿದ್ದು ಕನ್ನಡ ಕಲಿಯದಿದ್ದರೆ ಉಳಿದ ರಾಜ್ಯದಲ್ಲಿಂದು ಕನ್ನಡವನ್ನು ಕಲಿತಾರೆ? ಕರ್ನಾಟಕದಲ್ಲೇ ಕನ್ನಡವನ್ನು ಬಲಪಡಿಸುವ ಕೆಲಸವಾಗಬೇಕಾಗಿದೆ. 

ಇನ್ನು ಶಾಲೆಗಳನ್ನು ವಿಲೀನ ಮಾಡಿದರೆ ಆ ಪ್ರದೇಶದಲ್ಲಿ ಸರಕಾರಿ ಶಾಲೆಗಳಲ್ಲಿ ಕಲಿಯುವ ಕನ್ನಡದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಅವರು ಹತ್ತಿರದ ಶಾಲೆ ಬಿಟ್ಟು ದೂರದ ಶಾಲೆಗೆ ಹೋಗಬೇಕಾದ ಅನಿವಾರ್ಯತೆ ತಲೆದೋ ರುತ್ತದೆ. ಹೆಚ್ಚಾಗಿ ಸರಕಾರಿ ಶಾಲೆಯಲ್ಲಿ ಕಲಿಯುವವರು ಆರ್ಥಿಕ ವಾಗಿ ಹಿಂದುಳಿದವರೇ ಆಗಿರುತ್ತಾರೆ. ಹಿಂದುಳಿದವರಿಗೆ ಪೂರಕವಾಗಿರಬೇಕಾದ ಸರಕಾರಿ ಶಾಲೆಗಳು ಮಾರಕವಾಗಿ ಪರಿಣಮಿಸಿದಂತಾಗುತ್ತದೆ. ಖಾಸಗಿ ಶಾಲೆಗಳಲ್ಲಿರುವ ಎಲ್ಲಾ ಸೌಲಭ್ಯ ಹಾಗೂ ಗುಣಮಟ್ಟದ ಶಿಕ್ಷಣವನ್ನು ಸರಕಾರಿ ಶಾಲೆಗಳಲ್ಲೂ ನೀಡಿ, ಸರಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಲು ನಮ್ಮ ಸರಕಾರ ಮುಂದಾಗಬೇಕು. ಆಗ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಬಹುದು. ಈ ನಿಟ್ಟಿನಲ್ಲಿ ಸರಕಾರದೊಂದಿಗೆ ಸಾರ್ವಜನಿಕರು ಪೂರಕವಾಗಿ ಸ್ಪಂದಿಸಿದರೆ ಮಾತ್ರ ನಮ್ಮ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬಹುದು.

ಕನ್ನಡ ಭಾಷಾಭಿವೃದ್ಧಿಗಾಗಿ ನಮ್ಮ ಸರಕಾರ ಇಚ್ಛಾಶಕ್ತಿಯನ್ನು ತಾಳಬೇಕಾದ ಅವಶ್ಯಕತೆ ಇದೆ. ಕನ್ನಡ ಭಾಷೆಯನ್ನು ಕನ್ನಡಿಗರು ಹಾಗೂ ನಮ್ಮ ಸರಕಾರ ಸೇರಿಕೊಂಡು ಬೆಳೆಸಬೇಕಾಗಿದೆ. ಸರಕಾರ ಈ ಬಗ್ಗೆ ಚಿಂತನೆ ಮಾಡಬೇಕೇ ವಿನಹ ಸರಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗುವ ಕ್ರಮ ಸಮಂಜಸವಾ ದುದಲ್ಲ. ನಮ್ಮ ನಾಡು-ನುಡಿ ನೆಲ-ಜಲದ ಉಳಿವಿನ ಪ್ರಶ್ನೆ ಬಂದಾಗಲೆಲ್ಲ ಕನ್ನಡಿಗರು ಒಗ್ಗಟ್ಟಾಗಿದ್ದಾರೆ. ಆದರೆ ಕನ್ನಡಿಗರ ಕೂಗು ಸರಕಾರಕ್ಕೆ ಕೇಳಿಸುತ್ತಿಲ್ಲ ಅಥವಾ ಕೇಳಿಸಿದರೂ ಜಾಣ ಕಿವುಡುತನ ಪ್ರದರ್ಶಿಸುತ್ತಿದೆ. ಸರಕಾರದ ಈ ಧೋರಣೆ ಸರಿಯಾದುದಲ್ಲ ನಮ್ಮ ಸರಕಾರ ಕರ್ನಾಟಕದ ಸಮಸ್ಯೆಗಳಿಗೆಲ್ಲ ಪೂರಕವಾಗಿ ಸ್ಪಂದಿಸಬೇಕು.

 ನಾಡು-ನುಡಿ ನೆಲ-ಜಲದ ಸಮಸ್ಯೆಗಳು ಯಾವ, ಜಾತಿ, ಧರ್ಮ, ಮತ ಪಕ್ಷಕ್ಕೆ ಸೀಮಿತವಾದುದಲ್ಲ. ಯಾವುದೇ ಪಕ್ಷ ಆಡಳಿತಕ್ಕೆ ಬಂದರೂ ಈ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸ ಬೇಕಾದ ಅಗತ್ಯ ಇರುತ್ತದೆ. ಆದರೆ ಆಡಳಿತಕ್ಕೆ ಬಂದ ಸರಕಾರಗಳು ಹೇಳುವುದು ಒಂದು, ಮಾಡುವುದು ಇನ್ನೊಂದು ಆಗಬಾರದು. ಸರಕಾರಕ್ಕೆ ನಮ್ಮ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಇಚ್ಛಾಶಕ್ತಿ ಇರಬೇಕಾಗುತ್ತದೆ, ಮಾತೃ ಭಾಷೆಯ ಬಗ್ಗೆ ಕಾಳಜಿ ಇರಬೇಕಾಗುತ್ತದೆ. ಕನ್ನಡ ಶಾಲೆಗಳನ್ನು ಮುಚ್ಚುವುದು ಕನ್ನಡಕ್ಕೆ ಕೊಟ್ಟ ದೊಡ್ಡ ಕೊಡಲಿ ಏಟು ಎಂದು ಪರಿಗಣಿಸಬೇಕಾಗುತ್ತದೆ. ಮುಖ್ಯಮಂತ್ರಿಯವರು ಕನ್ನಡ ಶಾಲೆಗಳನ್ನು ಮುಚ್ಚುವ ಕೆಲಸಕ್ಕೆ ಮುಂದಾಗದೆ, ಅದನ್ನು ಸಬಲೀಕರಣ ಮಾಡಲು ಮುಂದಾಗಲಿ. ಇನ್ನಾದರೂ ಕನ್ನಡಿಗರ ಕೂಗಿಗೆ ಸಕಾರಾತ್ಮಕವಾಗಿ ಸ್ಪಂದಿಸಲಿ.

ಜಿ. ಕೇಶವ ಪೈ

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

5-

ಸಮುದಾಯ ಪ್ರಜ್ಞೆ ಬಿತ್ತಲು ಮನೆಯೇ ಪ್ರಶಸ್ತ

1-sadsdsa

Children ಹದಿಹರೆಯ -ತಾಯಿಯ ಕರ್ತವ್ಯ

1-sadsdsad

Emotion-language-life; ಭಾವ-ಭಾಷೆ-ಬದುಕು

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.