ಶಬರಿಮಲೆಯಲ್ಲಿ ಬಿಜೆಪಿ ಸತ್ಯಶೋಧನೆ


Team Udayavani, Dec 3, 2018, 6:00 AM IST

sabarimala-temple.jpg

ತಿರುವನಂತಪುರ/ಪಂಪಾ: ಶಬರಿಮಲೆಯಲ್ಲಿನ ಪರಿಸ್ಥಿತಿ, ಪೊಲೀಸ್‌ ದೌರ್ಜನ್ಯ ಕುರಿತು ಮಾಹಿತಿ ಸಂಗ್ರಹಿಸಿ ವರದಿ ಪಡೆದುಕೊಳ್ಳುವ ಉದ್ದೇಶದಿಂದ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಕಳುಹಿಸಿರುವ ನಾಲ್ವರು ನಾಯಕರ ತಂಡ ಭಾನುವಾರ ಶಬರಿಮಲೆ ಪ್ರವೇಶಿಸಿದೆ.

ಬಿಜೆಪಿ ನಾಯಕರಾದ ನಳಿನ್‌ಕುಮಾರ್‌ ಕಟೀಲ್‌, ಪ್ರಹ್ಲಾದ್‌ ಜೋಷಿ, ವಿನೋದ್‌ ಸೋನ್ಕರ್‌, ಸರೋಜ್‌ ಪಾಂಡೆ ಅವರನ್ನೊಳಗೊಂಡ ತಂಡ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾರಂಭಿಸಿದೆ. ಭಕ್ತರು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಿ, ವಾಸ್ತವಿಕ ಅಂಶಗಳ ಬಗ್ಗೆ ಮಾಹಿತಿ ಸಂಗ್ರಹಿಸಿ 15 ದಿನಗಳೊಳಗೆ ಅಮಿತ್‌ ಶಾಗೆ ವರದಿ ನೀಡಲಿದೆ.

ಖ್ಯಾತನಾಮರ ಆಹ್ವಾನಿಸಲು ಚಿಂತನೆ: ಮತ್ತೂಂದೆಡೆ, ಶಬರಿಮಲೆಗೆ ಭೇಟಿ ನೀಡುವಂತೆ ಭಕ್ತಾದಿಗಳ ಮನವೊಲಿಸುವ ನಿಟ್ಟಿನಲ್ಲಿ ಸಿನಿಮಾ ಕ್ಷೇತ್ರದ ಪ್ರಮುಖರು ಸೇರಿದಂತೆ ಸೆಲೆಬ್ರಿಟಿಗಳಿಂದ ಜಾಹೀರಾತು ನೀಡಿಸಲು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಚಿಂತನೆ ನಡೆಸಿದೆ. 

ಸುಪ್ರೀಂಕೋರ್ಟ್‌ ತೀರ್ಪು ಜಾರಿ ಪರ-ವಿರೋಧದ ಬಗ್ಗೆ ನಡೆದ ಹಲವು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಸಕ್ತ ಸಾಲಿನಲ್ಲಿ ಭಕ್ತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಈ ಯೋಚನೆ ಮಾಡಲಾಗಿದೆ. ಸೆಲೆಬ್ರಿಟಿಗಳಿಂದ ಜಾಹೀರಾತು ನೀಡಿಸುವ ಮೂಲಕ ಭಕ್ತರಲ್ಲಿನ ಆತಂಕವನ್ನು ನಿವಾರಣೆ ಮಾಡುವುದು ಇದರ ಉದ್ದೇಶ. ಈ ಬಗ್ಗೆ ಡಿ.3ರಂದು ಅಂತಿಮ ನಿರ್ಧಾರ ಹೊರ ಬೀಳಲಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸ್ಥಳೀಯರಿಗಿಂತ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಿಂದ ಭೇಟಿ ನೀಡುವವರ ಸಂಖ್ಯೆಯೇ ಹೆಚ್ಚಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕೋರ್ಟ್‌ ಟೀಂನಿಂದ ಮಂಗಳವಾರ ಭೇಟಿ
ಶಬರಿಮಲೆ ದೇಗುಲದ ಸುತ್ತಮುತ್ತ ಯಾವುದೇ ಮೂಲಸೌಕರ್ಯ ನೀಡಲಾಗುತ್ತಿಲ್ಲ ಎಂಬ ಆರೋಪದ ಮೇರೆಗೆ ಕೇರಳ ಹೈಕೋರ್ಟ್‌ ನೇಮಕ ಮಾಡಿದ್ದ ತ್ರಿಸದಸ್ಯ ಸಮಿತಿ ಸೋಮವಾರ ಮತ್ತು ಮಂಗಳವಾರ ದೇಗುಲಕ್ಕೆ ಭೇಟಿ ನೀಡಲಿದೆ. ಸೋಮವಾರ ಪಂಪಾ ಮತ್ತು ನಲ್ಲಿಕಳ್‌ಗೆ ತೆರಳಿ ಪರಿಶೀಲನೆ ನಡೆಸಲಿದ್ದರೆ, ಮಂಗಳವಾರ ದೇಗುಲದ ಆವರಣದತ್ತ ಹೋಗಲಿದೆ. ಇಲ್ಲಿ ಭಕ್ತರಿಗೆ ಯಾವ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂಬುದನ್ನು ನೋಡುವುದಲ್ಲದೇ, ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಗೂ ಸೂಚನೆ ನೀಡಲಿದೆ.

75 ಸಾವಿರ- ಶನಿವಾರ ಸಂಜೆಯವರೆಗೆ ಭೇಟಿ ನೀಡಿದವರು
61 ಸಾವಿರ- ಶುಕ್ರವಾರ ಭೇಟಿ ನೀಡಿದ ಯಾತ್ರಿಗಳು

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.