ಮಾನವ ಹಕ್ಕುಗಳ ಮಹಾ ಗುರು ಭಾರತ


Team Udayavani, Dec 10, 2018, 6:00 AM IST

human-rights-day.jpg

ವಿಶ್ವದ ಎಲ್ಲ ಜನರೂ ಸುಖವಾಗಿರಲಿ, ಸಂತೋಷವಾಗಿರಲಿ ಎಂಬ ವಿಶ್ವಮಾನವ ಸಂದೇಶವನ್ನು ಮೊದಲು ಸಾರಿದವರು ಭಾರತೀಯರು. ಇಂದು ವಿಶ್ವ ಮಾನವ ಹಕ್ಕು ಸಂಸ್ಥೆ ಪ್ರತಿಪಾದಿಸುತ್ತಿರುವ ಆಹಾರ, ನೀರಿನ ಹಕ್ಕು ಸಮಾನವಾಗಿ ವಿತರಣೆಯಾಗಬೇಕು ಎಂಬ ನೈಜ ಬದುಕಿನ ಹಕ್ಕನ್ನು ಮೊದಲು ಪ್ರತಿಪಾದಿಸಿರುವುದು ನಮ್ಮ ವೇದಕಾಲದಲ್ಲಿ ರಚಿತವಾದ ಅಥರ್ವ ವೇದದಲ್ಲಿ ಅನ್ನುವುದನ್ನು ಮತ್ತೆ ನಾವು ವಿಶ್ವಕ್ಕೆ ತಿಳಿಸಬೇಕಾಗಿದೆ. ರಾಜಧರ್ಮದಲ್ಲಿ ಪ್ರಸ್ತಾಪಿಸಿ ರುವ ತಾಯಿಯಂತೆ ಭೂಮಿ ಎಲ್ಲ ಜೀವಿಗಳನ್ನು ಬೆಂಬಲಿಸುತ್ತದೆ. ಅದೇ ರೀತಿ ರಾಜ ಅಥವಾ ಆಳುವ ವರ್ಗ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಬೇಕೆಂಬ ನೀತಿ ವಾಕ್ಯವನ್ನು ಮೊದಲು ವಿಶ್ವಕ್ಕೆ ನೀಡಿದ ಕೀರ್ತಿ ಭಾರತೀಯರಿಗೆ ಸಲ್ಲುತ್ತದೆ. ಕೌಟಿಲ್ಯ ತನ್ನ ಅರ್ಥಶಾಸ್ತ್ರದಲ್ಲಿ ಖೈದಿ ನಿದ್ರಿಸುವಾಗ, ಆಹಾರ ಸೇವನೆ ಮಾಡುವಾಗ ಅಡ್ಡಿ ಪಡಿಸುವ ಅಧಿಕಾರಿಗಳಿಗೆ ದಂಡ ವಿಧಿಸಬೇಕು ಎಂದಿದ್ದಾನೆ.

ವಿಶ್ವಸಂಸ್ಥೆ ಮಾನ್ಯ ಮಾಡಿರುವ ಮಾನವ ಹಕ್ಕುಗಳಿಗೆ ಇಂದು ಎಪ್ಪತ್ತರ ಹುಟ್ಟುಹಬ್ಬ. 1948 ಡಿ. 10ರಂದು ವಿಶ್ವಸಂಸ್ಥೆ ಮಾನವ ಹಕ್ಕುಗಳಿಗೆ ಅಧಿಕೃತವಾಗಿ ಮುದ್ರೆ ಒತ್ತಿದ ದಿನ. ಮಾನವ ಹಕ್ಕುಗಳಿಗೆ ಇನ್ನಷ್ಟು ಭರವಸೆ ನೀಡುವ ದೃಷ್ಟಿಯಿಂದ ಭಾರತ ಸರಕಾರ 1993ರಂದು ಮಾನವ ಹಕ್ಕು ಆಯೋಗವನ್ನು ಸ್ಥಾಪಿಸಿ ತನ್ಮೂಲಕ ಪ್ರತಿ ರಾಜ್ಯ- ಪ್ರತಿ ಜಿಲ್ಲೆಗಳಲ್ಲಿ ಮಾನವ ಹಕ್ಕುಗಳ ಅರಿವು ಸಂರಕ್ಷಣೆಗಾಗಿ ವಿಶೇಷ ಘಟಕಗಳನ್ನು ಸ್ಥಾಪಿಸಲು ಅವಕಾಶ ಮಾಡಿಕೊಟ್ಟಿದೆ. 

ಇಂದು ಮಾನವ ಹಕ್ಕುಗಳ ಸಂರಕ್ಷಣೆಗಾಗಿ ವಿಶ್ವ ಮಟ್ಟದಿಂದ ಹಿಡಿದು ಹಳ್ಳಿಯ ತನಕ ಹಲವು ಆಯೋಗಗಳು, ಘಟಕಗಳು ಸ್ಥಾಪನೆಗೊಂಡು ಹತ್ತು ಹಲವು ವಿಚಾರ ಸಂಕಿರಣಗಳನ್ನು ಅನೂಚಾನವಾಗಿ ನಡೆಸಿಕೊಂಡು ಬರುತ್ತಿದ್ದರೂ ಮನುಷ್ಯರನ್ನು ಮನುಷ್ಯರಾಗಿ ಕಾಣುವ ಮನಃಸ್ಥಿತಿ ಹುಟ್ಟಿ ಬಾರದಿರುವುದನ್ನು ನೋಡುತ್ತಿದ್ದೇವೆ. ಹೀಗಾಗಿ ಮಾನವ ಹಕ್ಕುಗಳ ಅನುಷ್ಠಾನದಲ್ಲಿ ನಾವೆಲ್ಲಿ ಸೋತಿದ್ದೇವೆ ಎಂಬ ಕುರಿತು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾದ ಸಂದರ್ಭವೂ ಇದಾಗಿದೆ. 

ಮಾನವ ಹಕ್ಕು ಆಜನ್ಮ ಸಿದ್ಧ ಹಕ್ಕು, ಪ್ರಕೃತಿ ದತ್ತವಾಗಿ ಬಂದಿರುವ ಹಕ್ಕಾಗಿದೆಯೇ ಹೊರತು ಯಾವುದೇ ವ್ಯಕ್ತಿಯ, ಸರಕಾರದ ಕೃಪೆ ಅಲ್ಲ ಅನ್ನುವ ಸತ್ಯದ ಅರಿವು ನಮಗಿರಬೇಕು. ತನ್ನಂತೆ ಪರರು ಬದುಕಬೇಕು ಎಂದು ತಿಳಿಯುವುದೇ ಮಾನವ ಹಕ್ಕುಗಳ ಮೂಲ ತತ್ವವೂ ಹೌದು. ಒಂದು ಜೀವಿಯನ್ನು ಸೃಷ್ಟಿಸುವ ಸಾಮರ್ಥ್ಯ ನಮಗಿಲ್ಲದಿರುವಾಗ, ಅದೇ ಜೀವಿಯನ್ನು ಹಿಂಸಿಸುವ, ಕೊಲ್ಲುವ ಅಧಿಕಾರವೂ ನಮಗಿಲ್ಲ ಅನ್ನುವುದು ನೈಸರ್ಗಿಕ ನ್ಯಾಯವೂ ಹೌದು. ಪ್ರತಿಯೊಂದು ಜೀವರಾಶಿಗೂ ಬದುಕುವ ಹಕ್ಕನ್ನು ಪ್ರಕೃತಿಯೇ ನೀಡಿರುತ್ತದೆ. ಅದಕ್ಕೆ ವಿರುದ್ಧವಾಗಿ ನಾವು ಚಲಿಸಿದಾಗ ನಮ್ಮ ಬದುಕಿಗೆ ನಾವೇ ಕಂಟಕರಾಗುತ್ತೇವೆ. ಈ ಜಗತ್ತಿನಲ್ಲಿ ಶೇ. 99ರಷ್ಟು ಜೀವರಾಶಿಗಳಿವೆ.ಇದರಲ್ಲಿ ಮನುಷ್ಯನ ಪ್ರಮಾಣ ಕೇವಲ ಶೇ.1ಕ್ಕಿಂತಲೂ ಕಡಿಮೆ. ಆದರೆ ನಾವು ಬದುಕುವ ಪರಿಸರವನ್ನು ಶೇ. 99ರಷ್ಟು ಹಾಳು ಮಾಡುತ್ತಿರುವುದು, ಶೇ.1ರಷ್ಟು ಪ್ರಮಾಣದಲ್ಲಿರುವ ಮಾನವ ಜೀವಿ ಎನ್ನುವುದು ಅಷ್ಟೇ ಸತ್ಯ. ಹಾಗಾಗಿ ಮನುಷ್ಯರಾದ ನಾವು ಬದುಕುವ ಹಕ್ಕನ್ನು ಪ್ರಕೃತಿಯಿಂದಲೇ ಕಲಿಯಬೇಕಾಗಿದೆಯೇ ಹೊರತು ನಮ್ಮ ಪಠ್ಯ ಪುಸ್ತಕಗಳಿಂದ ಅಲ್ಲ.

ವಿಶ್ವ ಮಾನವ ಹಕ್ಕುಗಳ ಕುರಿತು ಪಾಠ ಮಾಡುವ ಸಂದರ್ಭದಲ್ಲಿ, ಮಾನವ ಹಕ್ಕುಗಳ ಸಂರಕ್ಷಕರ ಸ್ಥಾನದಲ್ಲಿ ಮೊದಲು ನಿಲ್ಲುವುದು ಅಮೆರಿಕದಂತಹ ಪಾಶ್ಚಾತ್ಯ ದೇಶಗಳು. ವಿಶ್ವದ ದೊಡ್ಡಣ್ಣನೆನ್ನಿಸಿಕೊಂಡ ಅಮೆರಿಕವೇ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಂರಕ್ಷಕ ಎಂಬಂತೆ ಅನ್ಯ ರಾಷ್ಟ್ರಗಳಿಗೆ ಬುದ್ಧಿ ಹೇಳುವ, ಪಾಠ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ವಾಸ್ತವಿಕ ವಿಚಾರವೆಂದರೆ ಇದುವರೆಗೆ ಮಾನವ ಹಕ್ಕುಗಳಿಗೆ ಕಂಟಕ ಪ್ರಾಯವಾಗಿ ನಿಂತ ರಾಷ್ಟ್ರವೇ ಅಮೆರಿಕ ಎಂಬುದೂ ಅಷ್ಟೇ ಸತ್ಯ. 1945ರ ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಜಪಾನಿನ ಹಿರೋಶಿಮಾ, ನಾಗಾಸಾಕಿ ನಗರಗಳ ಮೇಲೆ ಅಮೆರಿಕ ಅಣುಬಾಂಬುಗಳನ್ನು ಸುರಿದಾಗ ಲಕ್ಷೊàಪಲಕ್ಷ ಮಂದಿ ಸಾವನ್ನಪ್ಪಿದ್ದು, ಅಣು ಬಾಂಬಿನ ತಾಪವನ್ನು ತಾಳಲಾರದೆ ನದಿಯ ಕಡೆಗೆ ಓಡಿದ್ದು; ಅಲ್ಲಿಯ ನದಿಯ ನೀರು ಕೂಡಾ ಬಿಸಿ ತಾಪದಿಂದ ಕುದಿಯುತ್ತಿದ್ದ ಸಂದರ್ಭ, ಉಟ್ಟ ಬಟ್ಟೆಗಳೇ ಕರಗಿ ಮೈಗೆ ಅಂಟಿಕೊಂಡ ಭಯಾನಕ ದೃಶ್ಯವು ಇಂದಿಗೂ ನಾವು ನೆನಪಿಸಿಕೊಳ್ಳಬೇಕಾದ ಇತಿಹಾಸದ ಕಹಿ ಅನುಭವ. ಇಂತಹ ಭಯಾನಕ ದೃಶ್ಯಕಂಡ ಅಂದಿನ ವಿಜ್ಞಾನಿಗಳು “ನಾವೇಕೆ ಬಾಂಬುಗಳನ್ನು ತಯಾರಿಸಬೇಕಿತ್ತು ಎಂದು ಅತ್ತರಂತೆ.’ ಇಂತಹ ಅಮೆರಿಕವೇ ಇಂದು ಮಾನವ ಹಕ್ಕುಗಳ ಪ್ರತಿಪಾದನೆಗಾಗಿ ವಿಶ್ವಸಂಸ್ಥೆಯ 192 ದೇಶಗಳಿಗೆ ಬುದ್ಧಿ ಹೇಳುವ ಸಂದರ್ಭ ನಿರ್ಮಾಣವಾಗಿದೆ. ಇದೇ ಅಮೆರಿಕಕ್ಕೆ 2003ರಲ್ಲಿ ಇರಾಕ್‌ನ ಸದ್ದಾಂ ಹುಸೇನ್‌ನನ್ನು ಪದಚ್ಯುತಿಗೊಳಿಸಬೇಕೆಂಬ ಕಾರಣಕ್ಕಾಗಿ ಇರಾಕ್‌ ನೆಲದ ಮೇಲೆ ಯುದ್ಧ ಘೋಷಣೆ ಮಾಡಿ ಹಗಲು ರಾತ್ರಿ ಅನ್ನುವ ಪರಿಬೇಧವಿಲ್ಲದೆ ನಾಗರಿಕರ ಮೇಲೆ ಕ್ಷಿಪಣಿ-ಬಾಂಬುಗಳನ್ನು ಸುರಿದು ಮಾರಣಹೋಮ ಗೈದ ಅಪಕೀರ್ತಿ ಸಂದಾಯವಾಗಿದೆ. ಇದನ್ನೆಲ್ಲ ವಿಶ್ವಸಂಸ್ಥೆ ಮೂಕ ಪ್ರೇಕ್ಷಕನಾಗಿ ನೋಡುವ ಸ್ಥಿತಿ ನಿರ್ಮಾಣವಾಗಿತ್ತು. 

ಅಫ್ಘಾನಿಸ್ತಾನ, ಪಾಕಿಸ್ತಾನ, ಸೊಮಾಲಿಯಾದಲ್ಲಿ ಜನರು ಹಸಿವು, ಬಡತನ ನಿರುದ್ಯೋಗದಿಂದ ನರಳುತ್ತಿದ್ದಾಗ ಹಸಿದ ಹೊಟ್ಟೆಗೆ ಅನ್ನ ನೀಡದೇ, ದುಡಿಯುವ ಕೈಗೆ ಕೆಲಸ ನೀಡದೇ, ಯುದ್ಧ ಮಾಡಲು ಯುದ್ಧ ಸಾಮಗ್ರಿಗಳನ್ನು ಕೈಗೆ ನೀಡುವುದರ ಮೂಲಕ ವಿಶ್ವದಲ್ಲಿ ಭಯೋತ್ಪಾದನಾ ಶಕ್ತಿಗಳಿಗೆ ಇಂಬು ನೀಡಿ ಭಯೋತ್ಪಾದನೆಯನ್ನು ವಿಶ್ವ ಸಮಸ್ಯೆಯಾಗಿ ರೂಪಿಸಿದ ರೂವಾರಿ ಎಂಬ ಹಣೆಪಟ್ಟಿಯನ್ನು ಅಮೆರಿಕ ಕಟ್ಟಿಸಿಕೊಂಡಿದೆ. ಭಯೋತ್ಪಾದನೆಯ ಪಿಡುಗಿನಿಂದ ಭಾರತ ನಲುಗುತ್ತಿದ್ದ ಸಂದರ್ಭದಲ್ಲಿ ವಿಶ್ವಸಂಸ್ಥೆಯಲ್ಲಿ ಭಯೋತ್ಪಾದನೆ ವಿಷಯ ಚರ್ಚೆಗೆ ತೆಗೆದುಕೊಂಡಾಗ ಅಂದು ಇದೇ ಅಮೆರಿಕ ಭಯೋತ್ಪಾದನೆ ಸ್ಥಳೀಯ ಸಮಸ್ಯೆ ಅನ್ನುವ ಧಾಟಿಯಲ್ಲಿ ವಾದ ಮಂಡಿಸಿತ್ತು.

ಮಾಡಿದ್ದುಣ್ಣೋ ಮಹಾರಾಯ ಎಂಬ ನಾಣ್ಣುಡಿಯಂತೆ 2001 ಸೆ. 11ರಂದು ಒಸಾಮ ಬಿನ್‌ ಲಾಡೆನ್‌ ಎಂಬ ಮಹಾ ಭಯೋತ್ಪಾದಕ ಅಮೆರಿಕದ ವಿಶ್ವ ವ್ಯಾಪಾರ ಕೇಂದ್ರ ಮತ್ತು ಪೆಂಟಗಾನ್‌ ಮೇಲೆ ಬಾಂಬು ಸಿಡಿಸಿದಾಗ, ಇದೇ ಅಮೆರಿಕ ಜಗತ್ತಿಗೆ ಕೇಳುವ ಥರದಲ್ಲಿ ಭಯೋತ್ಪಾದನೆ ಒಂದು ಜಾಗತಿಕ ಸಮಸ್ಯೆ ಎಂದು ಬೊಬ್ಬೆ ಹೊಡೆದದ್ದು ಮಾತ್ರವಲ್ಲ; ಸಿರಿವಂತರ ಮನೆಗೆ ಕಲ್ಲು ಬಿದ್ದರೆ ಊರೆಲ್ಲ ಸುದ್ದಿ ಅನ್ನುವ ಹಾಗೆ ಅಂದಿನಿಂದ ವಿಶ್ವ ಮಟ್ಟದಲ್ಲಿ ಭಯೋತ್ಪಾದನಾ ತಡೆಗಾಗಿ ವಿಶೇಷ ಅಧ್ಯಯನದ ವಿಚಾರ ಸಂಕಿರಣಗಳನ್ನು ನಡೆಸಲಾಯಿತು ಮತ್ತು ಪಠ್ಯ ಪುಸ್ತಕಗಳ ಪುಟಗಳಲ್ಲಿಯೂ ಭಯೋತ್ಪಾದನಾ ವಿಷಯಗಳನ್ನು ಸೇರಿಸಲಾಯಿತು. 

ಮಾನವ ಹಕ್ಕುಗಳ ಪ್ರತಿಪಾದನೆಯಲ್ಲಿ, ಅನುಷ್ಠಾನದಲ್ಲಿ ಮೊದಲ ಪಂಕ್ತಿಯಲ್ಲಿ ನಿಲ್ಲಬೇಕಾದ ದೇಶ ಭಾರತ ಅನ್ನುವುದನ್ನು ನಾವೇ ಮರೆತಿರುವುದು ಅತ್ಯಂತ ವಿಷಾದನೀಯ. ಮಾನವ ಹಕ್ಕುಗಳ ಕುರಿತು ನಮ್ಮ ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಾದ ಸಂದರ್ಭದಲ್ಲಿ ನಾವು ಉಲ್ಲೇಖೀಸುತ್ತಿರುವುದು ಪಾಶ್ಚಾತ್ಯ ರಾಷ್ಟ್ರಗಳ, ವಿಶ್ವಸಂಸ್ಥೆಯ ಕೊಡುಗೆಯನ್ನೇ ಆಗಿದೆ. ಮಾನವ ಹಕ್ಕುಗಳ ವಿಚಾರದಲ್ಲಿ ಭಾರತದ ಕೊಡುಗೆಗಳೇನು ಎಂಬುದು ನಮ್ಮ ಪಠ್ಯಪುಸ್ತಕಗಳಲ್ಲಿ ಕಾಣಸಿಗುತ್ತಿಲ್ಲ. ಮಾನವ ಹಕ್ಕುಗಳ ಪರಿಕಲ್ಪನೆ ಭಾರತೀಯ ಸಂಸ್ಕೃತಿಯಲ್ಲಿ, ವೇದ ಪುರಾಣಗಳಲ್ಲಿ, ನಮ್ಮ ಇತಿಹಾಸಕಾರರ, ಆಡಳಿತಗಾರ ಚಿಂತನೆಯಲ್ಲಿ ಸಾಕಷ್ಟು ಪಡಿಮೂಡಿದೆ ಅನ್ನುವ ನಿಜ ಸಂಗತಿಯನ್ನು ನಮ್ಮ ಯುವ ಪೀಳಿಗೆಗೆ ಮನನ ಮಾಡಬೇಕಾಗಿದೆ.

ವಿಶ್ವದ ಎಲ್ಲ ಜನರೂ ಸುಖವಾಗಿರಲಿ, ಸಂತೋಷವಾಗಿರಲಿ ಎಂಬ ವಿಶ್ವಮಾನವ ಸಂದೇಶವನ್ನು ಮೊದಲು ಸಾರಿದವರು ಭಾರತೀಯರು. ಇಂದು ವಿಶ್ವ ಮಾನವ ಹಕ್ಕು ಸಂಸ್ಥೆ ಪ್ರತಿಪಾದಿಸುತ್ತಿರುವ ಆಹಾರ, ನೀರಿನ ಹಕ್ಕು ಸಮಾನವಾಗಿ ವಿತರಣೆಯಾಗಬೇಕು ಎಂಬ ನೈಜ ಬದುಕಿನ ಹಕ್ಕನ್ನು ಮೊದಲು ಪ್ರತಿಪಾದಿಸಿರುವುದು ನಮ್ಮ ವೇದಕಾಲ ದಲ್ಲಿ ರಚಿತವಾದ ಅಥರ್ವ ವೇದದಲ್ಲಿ ಅನ್ನುವುದನ್ನು ಮತ್ತೆ ನಾವು ವಿಶ್ವಕ್ಕೆ ತಿಳಿಸಬೇಕಾಗಿದೆ. ರಾಜಧರ್ಮದಲ್ಲಿ ಪ್ರಸ್ತಾಪಿಸಿರುವ ತಾಯಿ ಯಂತೆ ಭೂಮಿ ಎಲ್ಲ ಜೀವಿಗಳನ್ನು ಬೆಂಬಲಿಸುತ್ತದೆ. ಅದೇ ರೀತಿ ರಾಜ ಅಥವಾ ಆಳುವ ವರ್ಗ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸ ಬೇಕೆಂಬ ನೀತಿ ವಾಕ್ಯವನ್ನು ಮೊದಲು ವಿಶ್ವಕ್ಕೆ ನೀಡಿದ ಕೀರ್ತಿ ಭಾರ ತೀಯ ರಿಗೆ ಸಲ್ಲುತ್ತದೆ. ಕೌಟಿಲ್ಯ ತನ್ನ ಅರ್ಥಶಾಸ್ತ್ರದಲ್ಲಿ ಖೈದಿ ನಿದ್ರಿಸು ವಾಗ, ಆಹಾರ ಸೇವನೆ ಮಾಡುವಾಗ ಅಡ್ಡಿ ಪಡಿಸುವ ಅಧಿಕಾರಿಗಳಿಗೆ ದಂಡ ವಿಧಿಸಬೇಕು ಎಂದಿದ್ದಾನೆ. ಇಂದು ಇದೇ ಮಾತುಗಳನ್ನು ವಿಶ್ವ ಸಂಸ್ಥೆಯೋ, ಅಂತರಾಷ್ಟ್ರೀಯ ನ್ಯಾಯಾಲಯವೋ ಹೇಳಿದೆ ಅನ್ನುವು ದನ್ನು ಉಲ್ಲೇಖೀಸುತ್ತೇವೆ.ಬದಲಿಗೆ ನಮ್ಮ ಕೌಟಿಲ್ಯ ಪ್ರತಿಪಾದಿಸಿ ದ್ದಾನೆ ಅನ್ನುವುದನ್ನು ಜಗತ್ತಿಗೆ ಮನವರಿಕೆ ಮಾಡುವಲ್ಲಿ ನಾವು ಸೋತಿದ್ದೇವೆ.

ವಿಶ್ವಕ್ಕೆ ಮಾನವ ಧರ್ಮದ ಪಾಠವನ್ನು ಮೊದಲು ಬೋಧಿಸಿದವರು ಭಾರತೀಯರು ಎಂಬುದಕ್ಕೆ ಮಹಾತ್ಮ ಗಾಂಧೀಜಿಯವರು ವಿಶ್ವಪಿತ ನಾಗಿ ವಿಶ್ವಕುಟುಂಬವೇ ಒಪ್ಪಿಕೊಂಡು ಪ್ರತಿ ವರ್ಷ ಗಾಂಧಿ ಜನ್ಮ ದಿನದಂದು ವಿಶ್ವ ಅಹಿಂಸಾ ದಿನವಾಗಿ ವಿಶ್ವಸಂಸ್ಥೆ ಆಚರಿಸುತ್ತಿರುವುದು ಇದಕ್ಕೆ ಸಾಕ್ಷಿ ನೀಡುತ್ತದೆ. ಸ್ವತಂತ್ರ ಭಾರತ ರೂಪಿಸಿಕೊಂಡ ಪಂಚಶೀಲ ವಿದೇಶಾಂಗ ನೀತಿಯನ್ನು ಇಂದು ವಿಶ್ವವೇ ಸಾರ್ವತ್ರಿಕ ಒಪ್ಪಿಕೊಂಡು ಮಾನ್ಯ ಮಾಡಿದೆ. ಭಾರತೀಯರಾದ ನಾವು ಸೋತಿದ್ದು ಎಲ್ಲಿ ಅಂದರೆ ನಮ್ಮ ಅಮೂಲ್ಯ ಗುಣಗಳನ್ನು ವಿಶ್ವಕ್ಕೆ ಪರಿಚಯಿಸುವುದರಲ್ಲಿ. ಈ ಮಾತನ್ನು ಬಹುಹಿಂದೆಯೇ ಸ್ವಾಮಿ ವಿವೇಕಾನಂದರು ತಿಳಿಸಿದ್ದರು. ಈ ಮಾತು ಇಂದಿಗೂ ಸತ್ಯ ಮತ್ತು ಪ್ರಸ್ತುತ ಕೂಡಾ. ಇಂದು ಇಡೀ ಜಗತ್ತೇ ಯುದ್ಧ ಎಂಬ ಎರಡಕ್ಷರದ ಕರಿನೆರಳಿನಲ್ಲಿ ಭಯದ ವಾತಾವರಣದಲ್ಲಿ ಬದುಕಬೇಕಾದ ಸ್ಥಿತಿಯಲ್ಲಿದೆ. ಯುದ್ಧಗಳನ್ನೇ ವೈಭವೀಕರಿಸುವ ಶ್ರೀಮಂತ ರಾಷ್ಟ್ರಗಳೂ ಇವೆ. ದಯವೇ ಧರ್ಮದ ಮೂಲ ಎಂಬ ಬಸವಣ್ಣನವರ ವಚನದ ಸಾಲುಗಳು, ಜಾತಿ-ಧರ್ಮ ಜನಾಂಗದ ಹೆಸರಿನಲ್ಲಿ ಜಗಳವಾಡುವ ರಾಷ್ಟ್ರಗಳಿಗೆ ನೀಡುವ ವಿಶ್ವ ಮಾನ ವೀಯತೆಯ ದಿವ್ಯ ಸ್ಪರ್ಶ. ಹಾಗಾಗಿ ಮಾನವ ಹಕ್ಕುಗಳಿಗೆ ಭಾರತವೇ ಮಹಾನ್‌ ಗುರುವಾಗಿ ನಿಲ್ಲುವ ಅರ್ಹತೆಯನ್ನು ಪಡೆದಿದೆ ಎಂಬುದನ್ನು ವಿಶ್ವ ಒಪ್ಪಿಕೊಳ್ಳಬೇಕಾದ ಸಂದರ್ಭವಿದು.

– ಪ್ರೊ| ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

5-

ಸಮುದಾಯ ಪ್ರಜ್ಞೆ ಬಿತ್ತಲು ಮನೆಯೇ ಪ್ರಶಸ್ತ

1-sadsdsa

Children ಹದಿಹರೆಯ -ತಾಯಿಯ ಕರ್ತವ್ಯ

1-sadsdsad

Emotion-language-life; ಭಾವ-ಭಾಷೆ-ಬದುಕು

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.