ಕಾರು-ಕ್ಯಾಂಟರ್‌ ಡಿಕ್ಕಿ: 6 ಸ್ನೇಹಿತರ ಸಾವು


Team Udayavani, Aug 29, 2017, 10:25 AM IST

29-STATE-5.jpg

ಶಿವಮೊಗ್ಗ: ಕಾರು ಹಾಗೂ ಕ್ಯಾಂಟರ್‌ ಮಧ್ಯೆ ಡಿಕ್ಕಿಯಾಗಿ 6 ಮಂದಿ ಸ್ನೇಹಿತರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ-ಸಾಗರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಆಯನೂರು ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಕಾರಿನಲ್ಲಿದ್ದ ಚಾಲಕ ಅಶೋಕ್‌ (25), ದಿನೇಶ್‌ (25), ಮಾರಿಮುತ್ತು (25), ಕಿರಣ್‌ (24), ಕಾರ್ತಿಕ್‌, ನವೀನ (24)ಮತ್ತು ಕೇಶವ (19) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಸಂತೋಷ್‌ ಎಂಬಾತ, ಕ್ಯಾಂಟರ್‌ ಚಾಲಕ ಹಾಗೂ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವರುಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ತಾಲೂಕು ಬ್ರಹೆಶ್ವರದ ಅಂಬೇಡ್ಕರ್‌ ಕಾಲೋನಿಯ 7 ಮಂದಿ ಸ್ನೇಹಿತರು ಸಿನಿಮಾ ವೀಕ್ಷಣೆ ಮಾಡಲು ಕಾರಿನಲ್ಲಿ ಶಿವಮೊಗ್ಗಕ್ಕೆ ಹೊರಟಿದ್ದರು  ಎನ್ನಲಾಗಿದೆ. 

ಶಿವಮೊಗ್ಗದಿಂದ ಲಿಕ್ಕರ್‌ ತುಂಬಿದ್ದ ಕ್ಯಾಂಟರ್‌ ಸಾಗರಕ್ಕೆ ತೆರಳುತ್ತಿತ್ತು. ಎರಡೂ ವಾಹನಗಳು ಮಿತಿ ಮೀರಿದ ವೇಗದಲ್ಲಿದ್ದು, ಮುಖಾಮುಖೀಯಾಗಿ ಡಿಕ್ಕಿ ಹೊಡೆದವು. ಎರಡೂ ವಾಹನಗಳ ಚಾಲಕರು ತುಂತುರು ಮಳೆಯಾಗುತ್ತಿದ್ದರೂ ಅತಿ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದೇ ಭೀಕರ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಿಂದಾಗಿ ಕೆಲಕಾಲ ಸಾಗರಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿಯ ಸಂಚಾರಕ್ಕೆ ತೊಂದರೆಯಾಗಿತ್ತು. ಬಳಿಕ ಕುಂಸಿ ಪೊಲೀಸರು ಅಪಘಾತಕ್ಕೀಡಾಗಿದ್ದ ವಾಹನಗಳನ್ನು ತೆರವುಗೊಳಿಸಿದರು. ಅಪಘಾತ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಅಭಿನವ್‌ ಖರೆ, ಎಎಸ್‌ಪಿ ಮುತ್ತುರಾಜ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಮಹಾಂತೇಶ್‌, ಕುಂಸಿ ಎಸ್‌.ಐ. ಸಂದೀಪ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಸಾವಿನ ಹೆದ್ದಾರಿ..!
ಶಿವಮೊಗ್ಗ- ಸಾಗರ ನಡುವಿನ 206 ರಾಷ್ಟ್ರೀಯ ಹೆದ್ದಾರಿ ಸಧ್ಯ ಅಗಲೀಕರಣಗೊಳ್ಳುತ್ತಿದ್ದು, ಇಲ್ಲಿ ಭಾರೀ ಸಂಖ್ಯೆಯಲ್ಲಿ ವಾಹನಗಳ ಸಂಚಾರವಿದೆ. ಈ ರಸ್ತೆಯಲ್ಲಿ ಪದೇ ಪದೇ ಭೀಕರ ಅಪಘಾತಗಳು ಸಂಭವಿಸಿ ಅಪಾರ ಸಂಖ್ಯೆಯಲ್ಲಿ ಸಾವು-ನೋವು ಉಂಟಾಗಿದೆ. ಇತ್ತೀಚೆಗಷ್ಟೆ ಆನಂದಪುರ ಬಳಿ ಆಟೋ-ಖಾಸಗಿ ಬಸ್‌ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದರು. ಅದಕ್ಕಿಂತ ಹಿಂದೆ ಇನೋವಾ ನಿಂತಿದ್ದ ಟಿಂಬರ್‌ ಲಾರಿಗೆ ಡಿಕ್ಕಿ ಹೊಡೆದು ಏಳು ಮಂದಿ
ಮೃತಪಟ್ಟಿದ್ದರು. ಪ್ರತಿನಿತ್ಯ ಒಂದಲ್ಲ ಒಂದು ಅಪಘಾತಗಳು ಈ ರಸ್ತೆಯಲ್ಲಿ ಸಂಭವಿಸುತ್ತಿದ್ದು, ಸೂಕ್ತ ಸೂಚನಾ ಫಲಕಗಳು, ವೇಗ ನಿಯಂತ್ರಕಗಳು ಇಲ್ಲದಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಲ್ಲದೇ ಅತಿಯಾದ ವೇಗ ಮತ್ತು ಅಜಾಗರೂಕತೆಯ ಚಾಲನೆ ಕೂಡ ಅಪಘಾತಕ್ಕೆ ಕಾರಣ
ಎನ್ನಲಾಗಿದೆ. ಹೀಗೆ ಪದೇ ಪದೇ ಅಪಘಾತಗಳಿಂದ ಸಾಗರ ರಸ್ತೆ ಸಾವಿನ ರಸ್ತೆಯಾಗಿ ಮಾರ್ಪಟ್ಟಿದೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.