ಕಮಲ ಪಾಳಯಕ್ಕೆ ಸಾಗರವೇ ಸಮಸ್ಯೆಯಾಯ್ತು!


Team Udayavani, Apr 17, 2018, 3:07 PM IST

shiv.jpg

ಶಿವಮೊಗ್ಗ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಯಡಿಯೂರಪ್ಪನವರ ಆಶಯದಂತೆ ಟಿಕೆಟ್‌ ಹಂಚಿಕೆಯಾಗಿದೆ. ಆದರೆ ಸಾಗರದಲ್ಲಿ ಮಾತ್ರ “ತಣ್ಣಗಿನ ಬಂಡಾಯ’ ಸ್ಫೋಟಿಸುವ ಎಲ್ಲ ಸಾಧ್ಯತೆಯಿದೆ.

ಮೊದಲ ಪಟ್ಟಿಯಲ್ಲಿ ಶಿವಮೊಗ್ಗ ಮತ್ತು ಶಿಕಾರಿಪುರದಲ್ಲಿ ಕ್ರಮವಾಗಿ ಈಶ್ವರಪ್ಪ ಮತ್ತು ಯಡಿಯೂರಪ್ಪನವರಿಗೆ ಟಿಕೆಟ್‌ ಪ್ರಕಟಗೊಂಡಿತ್ತು. ಎರಡನೇ ಪಟ್ಟಿಯಲ್ಲಿ ಸೊರಬದಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಬಂದ ಕುಮಾರ್‌ ಬಂಗಾರಪ್ಪನವರಿಗೆ ಟಿಕೆಟ್‌ ನೀಡಲಾಗಿದೆ.

ಇದು ನಿರೀಕ್ಷಿತವಾಗಿದ್ದರಿಂದ ಅಲ್ಲಿ ಯಾವುದೇ ಬಂಡಾಯದ ಭೀತಿ ಇಲ್ಲ. ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದಲ್ಲಿ ಅಶೋಕ್‌ ನಾಯ್ಕ ಅವರಿಗೆ ಟಿಕೆಟ್‌ ಪ್ರಕಟಗೊಂಡಿದ್ದು, ಹಲವು ಆಕಾಂಕ್ಷಿಗಳು ಇದ್ದರೂ ಯಾವುದೇ ಬಂಡಾಯದ ಬಿಸಿ ಪಕ್ಷಕ್ಕೆ ತಟ್ಟಿಲ್ಲ. ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರ ಅವರೊಬ್ಬರ ಹೆಸರು ಮಾತ್ರ ಶಿಫಾರಸ್ಸುಗೊಂಡಿದ್ದು, ಅದರಂತೆ ಅವರಿಗೆ ಟಿಕೆಟ್‌ ನೀಡಲಾಗಿದೆ.

ಆದರೆ ಸಾಗರದಲ್ಲಿ ಮಾತ್ರ ಸೊರಬದಿಂದ ವಲಸೆ ಬಂದ ಹರತಾಳು ಹಾಲಪ್ಪ ಮತ್ತು ತಮ್ಮ ಕ್ಷೇತ್ರ ಎಂದುಕೊಂಡಿದ್ದ ಬೇಳೂರು ಗೋಪಾಲಕೃಷ್ಣ ಅವರ ನಡುವೆ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆದಿತ್ತು. ಯಡಿಯೂರಪ್ಪ ಅವರು ತಮ್ಮ ಮೊದಲ ಸುತ್ತಿನ ಪ್ರವಾಸದಲ್ಲಿಯೇ ಹಾಲಪ್ಪ ಅವರಿಗೆ ಟಿಕೆಟ್‌ ಕೊಡುವುದಾಗಿ ಹೇಳಿದ್ದರು. ಇದರಂತೆ ಹಾಲಪ್ಪ ಕೂಡ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಯಾವುದೇ ಕಾರಣಕ್ಕೂ ತಮ್ಮ ಹೊರತಾಗಿ ಬೇರೆಯವರಿಗೆ ಟಿಕೆಟ್‌ ನೀಡಬಾರದು ಎಂದು ಹಠ ಹಿಡಿದಿದ್ದ ಬೇಳೂರು ಗೋಪಾಲಕೃಷ್ಣ ವರಿಷ್ಠರನ್ನು ಕೂಡ ಸಂಪರ್ಕಿಸಿದ್ದರು. ಪಕ್ಷದ ಸಮೀಕ್ಷೆಯಲ್ಲಿ ಕೂಡ ಇವರ ಹೆಸರು ಮುಂಚೂಣಿಯಲ್ಲಿತ್ತು ಎನ್ನಲಾಗಿದ್ದು, ಟಿಕೆಟ್‌ ಸಿಗುವ ನಿರೀಕ್ಷೆಯಲ್ಲಿದ್ದರು.

ಆದರೆ ಟಿಕೆಟ್‌ ಹರತಾಳು ಹಾಲಪ್ಪ ಅವರ ಪಾಲಾಗುತ್ತಿದ್ದಂತೆ ಬೇಳೂರು ಗೋಪಾಲಕೃಷ್ಣ ತೀವ್ರ ನಿರಾಶೆಗೆ ಒಳಗಾಗಿದ್ದಾರೆ. ತಮ್ಮ ಮುಂದಿನ ನಡೆ ಏನೆಂಬುದನ್ನು ಎಲ್ಲಿಯೂ ಬಿಟ್ಟುಕೊಟ್ಟಿಲ್ಲ. ಪಕ್ಷದ ವಿರುದ್ಧವೂ ಮಾತನಾಡಿಲ್ಲ. ಪಕ್ಷ ಬಿಡುವ, ಪ್ರತಿಭಟನೆ ನಡೆಸುವ ಹೆಜ್ಜೆಯನ್ನು ಕೂಡ ಅವರು ಇಟ್ಟಿಲ್ಲ.

ಬದಲಾಗಿ ತಮ್ಮದೇ ಆದ ರಾಜಕೀಯ ಅಸ್ತಿತ್ವವನ್ನು ಕಂಡುಕೊಳ್ಳುವತ್ತ ಹೆಜ್ಜೆ ಹಾಕತೊಡಗಿದ್ದಾರೆ. ಅವರ ಎದುರು ಮೂರು ಹಾದಿಗಳಿದ್ದವು. ಈ ಹಿಂದೆ ಕಾಗೋಡು ತಿಮ್ಮಪ್ಪ ಅವರು ಕರೆದು ಮಾತನಾಡಿದ್ದರು. ಪಕ್ಷಕ್ಕೆ ಬಂದು ತನ್ನ ಪರವಾಗಿ ಕೆಲಸ ಮಾಡು. ಇದು ತಮ್ಮ ಕೊನೆಯ ಚುನಾವಣೆಯಾಗಿರುವುದರಿಂದ ಮುಂದೆ ಸಾಗರದಲ್ಲಿ ಕಾಂಗ್ರೆಸ್‌ ಪಕ್ಷದ ಚುಕ್ಕಾಣಿ ಹಿಡಿಯಬಹುದು ಎಂಬ ಮಾತನ್ನು ಆಡಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಹೀಗಾಗಿ ಕಾಂಗ್ರೆಸ್‌ನತ್ತ ಹೆಜ್ಜೆ ಇಡಬಹುದು. ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗದಾಗ ಜೆಡಿಎಸ್‌ ಸೇರಿ ಸ್ಪರ್ಧಿಸಿ ಎರಡನೇ ಸ್ಥಾನ ಗಳಿಸಿದ್ದರು. ಈಗಲೂ ಜೆಡಿಎಸ್‌ ಸಾಗರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ. ಹೀಗಾಗಿ ಆ ಪಕ್ಷದತ್ತ ವಲಸೆ ಹೋಗಬಹುದು. ಇಲ್ಲವೇ, ಬಿಜೆಪಿಯಲ್ಲಿಯೇ ಉಳಿದು ಮುಂದಿನ ಅವಕಾಶಕ್ಕಾಗಿ ಕಾಯುತ್ತಾ ಕುಳಿತುಕೊಳ್ಳುವುದು.

ಆದರೆ ಬೇಳೂರು ಹೊಸದೊಂದು ಹೆಜ್ಜೆ ಇಡಬಹುದು ಎಂದು ಅವರ ಆಪ್ತ ವಲಯದಿಂದ ಕೇಳಿ ಬರುತ್ತಿದೆ. ಯಾವುದೇ ಪಕ್ಷಕ್ಕೆ ಸೇರದೆ, ಪಕ್ಷೇತರರಾಗಿ ಸ್ಪರ್ಧಿಸುವುದು. ಬಿಜೆಪಿಯನ್ನು ಯಾವುದೇ ಕಾರಣಕ್ಕೂ ಟೀಕಿಸಿದೆ, ತಮಗೆ ತಪ್ಪಿದ ಅವಕಾಶವನ್ನು ಜನರೆದುರು ಹೇಳುತ್ತಾ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಈಗಲೂ ಇದ್ದೇನೆ ಎಂದು ಹೇಳಿಕೊಂಡು ಮೋದಿ ಹೆಸರಿನಲ್ಲಿ ಜನರ ವಿಶ್ವಾಸ ಗಳಿಸುವುದು. ಈ ನಿಟ್ಟಿನಲ್ಲಿ ಆಲೋಚಿಸುತ್ತಿರುವ ಬೇಳೂರು “ತಣ್ಣನೆಯ ಬಂಡಾಯ’ ಪ್ರದರ್ಶಿಸುವ ಸಾಧ್ಯತೆ ದಟ್ಟವಾಗಿದೆ.
 
ಇನ್ನೂ ಭದ್ರಾವತಿಯಲ್ಲಿ ಯಾರಿಗೂ ಟಿಕೆಟ್‌ ಪ್ರಕಟಗೊಂಡಿಲ್ಲ. ಇದುವರೆಗೆ ಇಲ್ಲಿ ಬಿಜೆಪಿ ಗೆದ್ದಿಲ್ಲ. ಮಾತ್ರವಲ್ಲ, ಹೇಳಿಕೊಳ್ಳುವಂತಹ ಮತ ಗಳಿಕೆ ಕೂಡ ಮಾಡಿಲ್ಲ. ಹೀಗಾಗಿ ಟಿಕೆಟ್‌ಗೆ ಪೈಪೋಟಿಯೂ ಇಲ್ಲ 

„ವಿಶೇಷ ವರದಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.