ರಾಜ್ಯ ಲೂಟಿ ಮಾಡಿದವರಿಗೆ ಅಧಿಕಾರ ಸಿಗಲ


Team Udayavani, May 5, 2018, 5:45 PM IST

shiv-1.jpg

ಶಿಕಾರಿಪುರ: ಯಡಿಯೂರಪ್ಪನವರೇ, ನೀವು ತಿಪ್ಪರಲಾಗ ಹಾಕಿದ್ರು ನಿಮ್ಮಪ್ಪನಾಣೆ ಮುಖ್ಯಮಂತ್ರಿಯಾಗಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ನೂರು ಬಾರಿ ನರೇಂದ್ರ ಮೋದಿ ಬಂದರೂ, ಸಾವಿರಾರು ಬಾರಿ ಅಮಿತ್‌ ಶಾ ರಾಜ್ಯಕ್ಕೆ ಬಂದರೂ ಜನ ನಿಮ್ಮ ಪಕ್ಷಕ್ಕೆ ಅಧಿಕಾರ ಕೊಡುವುದಿಲ್ಲ. ರಾಜ್ಯವನ್ನು ಲೂಟಿ ಮಾಡಿದ ನಿಮಗೆ ಜನ ಆಶೀರ್ವಾದ ಮಾಡುವುದಿಲ್ಲ. ಲೂಟಿಕೂರರ ಮುಷ್ಟಿಯಿಂದ ಕರ್ನಾಟಕವನ್ನು ಕಾಪಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಟ್ಟಣದ ಹೊಸ ಸಂತೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಯಡಿಯೂರಪ್ಪ ನಂ. 1 ರೈತ ವಿರೋಧಿ. 2009 ರ ಡಿ. 30 ರಂದು ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂಧರ್ಭದಲ್ಲಿ ನಮ್ಮ ಪಕ್ಷದ ಉಗ್ರಪ್ಪ ರೈತರ ಸಾಲ ಮನ್ನಾ ಮಾಡಿ ಎಂದು ಮನವಿ ಮಾಡಿದಾಗ ನಮ್ಮ ಸರ್ಕಾರದಲ್ಲಿ ಹಣವಿಲ್ಲ. ಹಣ ಪ್ರಿಂಟ್‌ ಮಾಡುವ ಮಿಷನ್‌ ಇಲ್ಲ ಎಂದು ಹೇಳಿದ್ದನ್ನು ಜನ ಹಾಗೂ ರೈತರು ಮರೆತಿಲ್ಲ. 224 ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರಿಗೆ, ಮುಸ್ಲಿಂ , ಕ್ರಿಶ್ಚಿಯನ್ನರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿಮ್ಮಪಕ್ಷ ಅವಕಾಶ ಕೊಟ್ಟಿಲ್ಲ ಎಂದರು. ಧರ್ಮ- ಧರ್ಮಗಳ ನಡುವೆ, ಜಾತಿ- ಜಾತಿಗಳ ನಡುವೆ ಬೆಂಕಿ ಹಚ್ಚಿ ಸಂಘರ್ಷ ಮೂಡಿಸುವುದು ರಾಜಕಾರಣವಲ್ಲ. ಎಲ್ಲಾ ಧರ್ಮ, ಸಮುದಾಯ, ಜಾತಿಗಳನ್ನು ಒಂದೇ ದೃಷ್ಟಿಕೋನದಲ್ಲಿ ತೆಗೆದುಕೊಂಡು ಹೋಗುವುದು ನಿಜವಾದ ಜಾತ್ಯತೀತತೆಯ ಲಕ್ಷಣ. ಅದಕ್ಕೆ ಪ್ರತ್ಯಕ್ಷ ಉದಾಹರಣೆ ಎಂದರೆ ಕಾಂಗ್ರೆಸ್‌ ಸಿದ್ಧಾಂತಗಳು ಮತ್ತು ಆಡಳಿತ ಎಂದರು.

ಸಾಮಾನ್ಯ ರೈತ ಕುಟುಂಬದಿಂದ ಬಂದ ಗೋಣಿ ಮಾಲತೇಶ ಅವರ ಮೇಲಿನ ಪ್ರೀತಿ, ಕಾಂಗ್ರೆಸ್‌ ಪಕ್ಷದ ಮೇಲಿನ ವಿಶ್ವಾಸ ಹಾಗೂ ಯಡಿಯೂರಪ್ಪ ಮತ್ತು ಮಗನ ಮೇಲಿರುವ ಆಕ್ರೋಶ ಮತಗಳಾಗಿ ಹೊರಹೊಮ್ಮಿ ವಿಧಾನಸಭೆ ಪ್ರವೇಶಿಸಲು ನಿಮ್ಮ ಆಶೀರ್ವಾದ ಬೇಕು. ಮೊದಿಯವರು ಪದೇ ಪದೇ ತಮ್ಮ ಎದೆ ತೋರಿಸಿ ವಿಶಾಲವಾದ ಎದೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಜನಪರ, ಬಡವರ ಪರ ಪ್ರೀತಿ ಇಲ್ಲ. ಕೇವಲ ಪುರಸಭೆಯ ಸದಸ್ಯರಾಗಿದ್ದ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಇನ್ನು ಪಕ್ಷದ ಸಾಮಾನ್ಯ ಕಾರ್ಯಕರ್ತ ಗೋಣಿ ಮಾಲತೇಶ್‌ ಶಾಸಕನಾಗುವುದರಲ್ಲಿ ತಪ್ಪೇನಿದೆ. ಗೋಣಿ ಮಾಲತೇಶ್‌ ಈ ಮಣ್ಣಿನ ಮನನಾಗಿದ್ದಾನೆ. ನೀವು ಬೂಕನಕೆರೆಯಿಂದ ವಲಸೆ ಬಂದವರಿಗೆ ಅಧಿಕಾರ ಕೊಟ್ಟಿದ್ದೀರಿ. ನಿಮ್ಮ ಊರಿನ ನಿಮ್ಮ ಮನೆಯ ಮಗನಿಗೆ ಆಶೀರ್ವಾದ ಮಾಡಿ ಗೆಲ್ಲಿಸಿ ಎಂದರು.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಿಂದ ತಾಲೂಕು ಹಾಗೂ ಜಿಲ್ಲೆಯಲ್ಲಿ ಹಲವು ದಿನದಿಂದ ನೆನೆಗುದಿಗೆ ಬಿದ್ದಿದ್ದ ರೈತರ ಬಗರ್‌ಹುಕುಂ ಮತ್ತು ಅನೇಕ ಸಮಸ್ಯೆಗಳನ್ನು ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಲಾಗಿದೆ ಎಂದರು  ಕಾಂಗ್ರೆಸ್‌ ಅಭ್ಯರ್ಥಿ ಗೋಣಿ ಮಾಲತೇಶ್‌ ಮಾತನಾಡಿ, ನೀವು ನನನ್ನು ಗೆಲ್ಲಿಸಿದರೆ ನನ್ನ ದೇಹದಲ್ಲಿ ಉಸಿರು ಇರುವವರೆಗೂ ನಿಮ್ಮ ಸೇವೆ ಮಾಡುವೆ ಎಂದರು.

 ವಿ.ಪ. ಸದಸ್ಯ ಆರ್‌. ಪ್ರಸನ್ನ ಕುಮಾರ್‌, ಜಿಲ್ಲಾಧ್ಯಕ್ಷ ತೀ.ನ. ಶ್ರೀನಿವಾಸ, ಪಶ್ಚಿಮ ಘಟ್ಟ ನಿಗಮದ ಚಂದ್ರಶೇಖರ, ಮಾಜಿ ಎಂ.ಎಲ್‌.ಸಿ. ಶಾಂತವೀರಪ್ಪ ಗೌಡ, ಬಿ.ಎನ್‌. ಮಹಾಲಿಂಗಪ್ಪ, ಯುವ ಘಟಕದ ಮಯೂರ್‌ ದರ್ಶನ್‌, ಮಹೇಶ್‌ ಹುಲ್ಮಾರ್‌, ನರಸಿಂಗ ನಾಯ್ಕ, ಪಾರಿವಾಳದ ಶಿವರಾಂ, ಎಸ್‌.ಎಂ. ರಮೇಶ್‌ ಮತ್ತಿತರರು ಇದ್ದರು. ಈ ಸಂದರ್ಭದಲ್ಲಿ ಮಾಜಿ ಎಂ.ಎಲ್‌.ಸಿ. ಶಾಂತವೀರಪ್ಪ ಗೌಡ, ಬಿ.ಎನ್‌. ಮಹಾಲಿಂಗಪ್ಪ ಮತ್ತು ಅವರ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

Sagara ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

ಕೆ.ಎಸ್ ಈಶ್ವರಪ್ಪ

Shimoga; ಮೋದಿ ಬಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ: ಕೆ.ಎಸ್ ಈಶ್ವರಪ್ಪ

4-shivamogga

LS Polls: ‘ಮೋದಿ ಪ್ರಧಾನಿಯಾಗಿಸಲು ಬಿಜೆಪಿ ಬೆಂಬಲಿಸಿ’

MUST WATCH

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

ಹೊಸ ಸೇರ್ಪಡೆ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.