ಬಿಡಾಡಿ ಹಸು- ಕುದುರೆ ಹಾವಳಿಗೆ ಕಡಿವಾಣ ಹಾಕಲು ಒತ್ತಾಯ
Team Udayavani, May 26, 2018, 12:56 PM IST
ಶಿವಮೊಗ್ಗ: ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಆಯಕಟ್ಟಿನ ಜಾಗಗಳಲ್ಲಿ ಬಿಡಾಡಿ ಹಸು, ಕುದುರೆಗಳ ಹಾವಳಿ ವಿಪರೀತವಾಗಿದ್ದು, ಶುಕ್ರವಾರ ಬೆಳಗ್ಗೆ ವಿದ್ಯಾನಗರ ಮುಖ್ಯರಸ್ತೆಯಲ್ಲಿ ಕುದುರೆಗಳು ರಸ್ತೆಗೆ ಅಡ್ಡ ಬಂದ ಪರಿಣಾಮ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಶಿವಮೊಗ್ಗ- ಭದ್ರಾವತಿ ಮುಖ್ಯ ರಸ್ತೆಯಲ್ಲಿನ ವಿದ್ಯಾನಗರ ಸಂಚಾರಿ ಪೊಲೀಸ್ ಠಾಣೆ ಸಮೀಪದಲ್ಲಿ ಬಿಡಾಡಿ ಕುದುರೆಗಳು ರಸ್ತೆಗೆ ಏಕಾಏಕಿ ನುಗ್ಗಿವೆ. ಪರಿಣಾಮ ಭದ್ರಾವತಿ ಕಡೆಗೆ ಸಂಚರಿಸುತ್ತಿದ್ದ ಐದಕ್ಕೂ ಹೆಚ್ಚು ವಾಹನಗಳ ನಡುವೆ ಸರಣಿ ಅಪಘಾತ ನಡೆದಿದೆ. ಕುದುರೆಗಳು ರಸ್ತೆಗೆ ಅಡ್ಡ ಬಂದ ಪರಿಣಾಮ ಅಪಘಾತವಾಗುವುದನ್ನು ತಪ್ಪಿಸಲು ಗೂಡ್ಸ್ ಆಟೋ ಚಾಲಕ ಬ್ರೇಕ್ ಹಾಕಿದ್ದಾನೆ.
ಆಟೋ ಹಿಂಭಾಗದಲ್ಲಿ ಬರುತ್ತಿದ್ದ ಟ್ರಾಕ್ಸ್, ಮಾರುತಿ ಸ್ವಿಫ್ಟ್, ಮಾರುತಿ 800 ಹಾಗೂ ಟೊಯೋಟೋ ಇಟಿಯೋಸ್ ಕಾರುಗಳು ಪರಸ್ಪರ ಹಿಂದಿನಿಂದ ಡಿಕ್ಕಿ ಹೊಡೆದಿವೆ. ಅದೃಷ್ಟವಶಾತ್ ವಾಹನದಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ. ಅಪಘಾತದಿಂದಾಗಿ ಕೆಲ ಕಾಲ ರಸ್ತೆ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥಗೊಂಡಿತ್ತು.
ಬೀಡಾಡಿ ಪ್ರಾಣಿಗಳ ಹಾವಳಿ: ನಗರದ ಎಲ್ಲೆಡೆ ಬೀಡಾಡಿ ಜಾನುವಾರು, ಕುದುರೆ ಹಾಗೂ ಹಂದಿ ಹಾವಳಿ ಹೆಚ್ಚಳವಾಗಿದೆ. ಏಕಾಏಕಿ ರಸ್ತೆಗೆ ಅಡ್ಡಲಾಗಿ ನುಗ್ಗುವುದರಿಂದ ಹಲವು ಅಪಘಾತಗಳು ಸಂಭವಿಸಿ ಅನೇಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿವೆ.
ಮಾಲೀಕರು ತಾವು ಸಾಕಿರುವ ಪ್ರಾಣಿಗಳನ್ನು ಬೀಡಾಡಿಯಾಗಿ ಎಲ್ಲೆಂದರಲ್ಲಿ ರಸ್ತೆಗೆ ಬಿಡದಂತೆ ಜಿಲ್ಲಾಡಳಿತ ಹಾಗೂ ನಗರಪಾಲಿಕೆ ಹಲವು ಬಾರಿ ಸೂಚನೆ ನೀಡಿದ್ದರೂ ಸಹ ಪ್ರಾಣಿಗಳ ಮಾಲೀಕರು ಮಾತ್ರ ಸೂಚನೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ.
ಈ ಹಿಂದೆ ಇಂತಹ ಬೀಡಾಡಿ ಜಾನುವಾರುಗಳು ರಸ್ತೆಯಲ್ಲಿ ಎಲ್ಲೆಂದರಲ್ಲಿ ಕಂಡಬಂದರೆ ಮಹಾನಗರಪಾಲಿಕೆ ಸಿಬ್ಬಂದಿಗಳು ಅವುಗಳನ್ನು ಆಗಾಗ್ಗೆ ಹಿಡಿದು ಗೋಶಾಲೆ ಮತ್ತು ನಗರದ ಹೊರವಲಯಕ್ಕೆ ಸಾಗಿಸುತ್ತಿದ್ದರು. ಇದಕ್ಕಾಗಿ ವಾಹನವೊಂದನ್ನು ಮೀಸಲಿಡಲಾಗಿತ್ತು. ಆದರೆ ಕೆಲವಾರು ತಿಂಗಳುಗಳಿಂದ ಪಾಲಿಕೆ ಇಂತಹ ಕ್ರಮಗಳನ್ನು ಕೈಗೊಳ್ಳದೇ ಇರುವುದು ಬಿಡಾಡಿ ಪ್ರಾಣಿಗಳ ಹಾವಳಿ ಹೆಚ್ಚಳವಾಗಲು ಕಾರಣವಾಗಿದೆ.
ಕೂಡಲೇ ಪಾಲಿಕೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡು ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್ವೈ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ