ಮರಡಿ ಹಳ್ಳದ ಕಿರುಸೇತುವೆ ನಿರ್ಮಾಣ ಯಾವಾಗ ?


Team Udayavani, Jun 4, 2018, 4:45 PM IST

shiv-1.jpg

ತೀರ್ಥಹಳ್ಳಿ: ಮಳೆಗಾಲ ಆರಂಭವಾದರೆ ಸಾಕು ಈ ಊರಿನ ಗ್ರಾಮಸ್ಥರಿಗೆ ಏನೋ ಆತಂಕ, ಭಯ ಕಾಡುತ್ತದೆ. ತಮ್ಮ ಊರಿನ ಗ್ರಾಪಂನ ನ್ಯಾಯಬೆಲೆ ಅಂಗಡಿಗೆ ಹೋಗಬೇಕಾದ ಚಿಂತೆಯಲ್ಲಿ ತೊಡಗುತ್ತಾರೆ. ಏಕೆಂದರೆ ನ್ಯಾಯಬೆಲೆ ಅಂಗಡಿಗೆ ಹತ್ತಿರದಿಂದಲೇ ಹೋಗಬೇಕಾದ ಕಿರು ಸಂಪರ್ಕ
ಸೇತುವೆ ನಿರ್ಮಾಣವಾಗದೆ ಹಲವು ದಶಕಗಳೇ ಕಳೆದಿದೆ. ಈ ಸಮಸ್ಯೆಯ ಬಗ್ಗೆ ಯಾವೊಬ್ಬ ಜನಪ್ರತಿನಿಧಿಗಳು ಕಿವಿಗೊಡದೆ ಇರುವುದು ದುರಂತದ ವಿಚಾರ.

ತಾಲೂಕಿನ ಹೊದಲ ಅರಳಾಪುರ ಗ್ರಾಪಂನ ಹುಣಸೆಬೈಲು ಹಾಗೂ ಮುಂಡಿಗೆಮನೆಯ ಬಿಪಿಎಲ್‌ ಪಡಿತರದಾರರು, ಬಡ ರೈತರು, ಕೂಲಿ ಕಾರ್ಮಿಕರು, ಸಾರ್ವಜನಿಕರು ಗ್ರಾಪಂ ಕೇಂದ್ರಕ್ಕೆ ಮಳೆಗಾಲದಲ್ಲಿ ಹೋಗಬೇಕಾದ ಸಮಸ್ಯೆಯ ಸುಳಿ ಹೇಳ ತೀರದಾಗಿದೆ. 

 ಈ ಗ್ರಾಪಂ ವ್ಯಾಪ್ತಿಯ ಮರಡಿ ಹಳ್ಳಕ್ಕೆ ಕಿರುಸೇತುವೆ ನಿರ್ಮಾಣ ಮಾಡಬೇಕೆಂದು ಕಳೆದ 40 ವರ್ಷಗಳಿಂದ ಈ ಊರಿನ ಗ್ರಾಮಸ್ಥರು ಜನಪ್ರತಿನಿಧಿಗಳಿಗೆ, ಸರ್ಕಾರಕ್ಕೆ ಹತ್ತಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಉಪಯೋಗವಾಗಿಲ್ಲ. 

ಮರಡಿ ಹಳ್ಳಕ್ಕೆ ಕಿರುಸೇತುವೆ ಬೇಕೆಂದು 1993ರಲ್ಲಿ ಆರಗ ಜ್ಞಾನೇಂದ್ರ ಶಾಸಕರಾಗಿದ್ದಾಗ ಕಿರುಸೇತುವೆಗಾಗಿ ಪಿಲ್ಲರ್‌ ನಿರ್ಮಿಸಿದ್ದರು. ಅಂದಿನಿಂದ ವರ್ಷಪೂರ್ತಿ ಗ್ರಾಮಸ್ಥರು ಆ
ಪಿಲ್ಲರ್‌ ಮೇಲೆ ಹಾಕಿದ ಅಡಕೆ ಸಾರದ ಮೇಲೆ ಓಡಾಡಬೇಕಾದ ಸ್ಥಿತಿ ಬಂದಿದೆ. ನಂತರ ಇದರ ಬಗ್ಗೆ ಯಾವುದೇ ಇಲಾಖೆ ಕಣ್ಣೆತ್ತಿಯೂ ಸಹ ನೋಡಿಲ್ಲ.

ಈ ಸೇತುವೆ ನಿರ್ಮಾಣವಾದರೆ ಈ ಊರಿನ ಗ್ರಾಮಸ್ಥರು ಗ್ರಾಪಂ ಕೇಂದ್ರಕ್ಕೆ ಹೋಗಲು 3 ಕಿಮೀ ಆಗುತ್ತದೆ. ಆದರೆ ಈಗ ಮಳೆಗಾಲದಲ್ಲಿ 5 ಕಿಮೀ ಸುತ್ತಿ ನಡೆದು ಹೋಗಬೇಕಾದ ದುಸ್ಥಿತಿ ಬಂದಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಾರೆ.  ಕಳೆದ ವರ್ಷ ಮರಡಿ ಹಳ್ಳದ ಕಿರು ಸೇತುವೆಗಾಗಿ ಲೋಕೋಪಯೋಗಿ ಇಲಾಖೆಯವರು 25ಲಕ್ಷದ ಅಂದಾಜುಪಟ್ಟಿ ತಯಾರಿಸಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಕಳುಹಿಸಿದ್ದರು.

ನಂತರ ಯಾವೊಬ್ಬ ಜನಪ್ರತಿನಿಧಿಯಾಗಲಿ ಹುಣಸೆಬೈಲು ಮುಂಡಿಗೆಮನೆ ಗ್ರಾಮಸ್ಥರಾಗಲಿ ಇದರ ಬಗ್ಗೆ ಹೆಚ್ಚು ಗಮನಹರಿಸದ ಕಾರಣ ಈ ಪ್ರಸ್ತಾವನೆ ಅಲ್ಲಿಗೆ ನಿಂತು ಹೋಯಿತು. ಪ್ರತಿ ಬಾರಿ ಚುನಾವಣೆ ಬಂದಾಗ ಮೂರು ಪಕ್ಷಗಳು ಈ ಕಿರುಸೇತುವೆ ನಿರ್ಮಾಣದ ಬಗ್ಗೆ ಬಣ್ಣ ಬಣ್ಣದ ಭರವಸೆ ನೀಡಿ ಮತ ಯಾಚಿಸುತ್ತಾರೆ. ಆದರೆ ಗ್ರಾಮಸ್ಥರ ಪಾಡು ಮಾತ್ರ ಶೋಚನೀಯವಾಗಿದೆ. 

ಇನ್ನಾದರೂ ಸಂಬಂಧಪಟ್ಟ ಇಲಾಖೆಯವರಾಗಲಿ, ಶಾಸಕರ, ಸಂಸದರ, ಜಿಪಂ ಸದಸ್ಯರ ಅನುದಾನದಿಂದ ಈ ಕಿರು ಸೇತುವೆ ನಿರ್ಮಾಣವಾಗಬಹುದೆಂಬ ಚಿಂತೆ ಗ್ರಾಮಸ್ಥರಲ್ಲಿ
ಕಾಡುತ್ತಿದೆ. ಪ್ರತಿ ಮಳೆಗಾಲದಲ್ಲೂ ಸಹ ಈ ಊರಿನ ಗ್ರಾಮಸ್ಥರು ಪಡಿತರ ಸಾಮಾನುಗಳನ್ನು ತರಲು ಹೋಗುವಾಗಲೆಲ್ಲ ಜನಪ್ರತಿನಿಧಿಗಳಿಗೆ ಶಾಪ ಹಾಕುತ್ತಲೇ ಇದ್ದಾರೆ. ಮುಂದಿನ ದಿನಗಳಲ್ಲಾದರೂ ಮರಡಿ ಹಳ್ಳಕ್ಕೆ ಕಿರುಸೇತುವೆ ನಿರ್ಮಾಣವಾಗಲಿ ಎಂಬುದು ಹುಣಸೆಬೈಲು- ಮುಂಡಿಗೆಮನೆ ಗ್ರಾಮಸ್ಥರ ಆಶಯವಾಗಿದೆ.

„ರಾಂಚಂದ್ರ ಕೊಪ್ಪಲು

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.