ಸಿಂಪಿ ಸಮಾಜದಿಂದ ಶಿಸ್ತುಬದ್ಧ ಜೀವನ: ಹಾಲಪ್ಪ
Team Udayavani, Jun 8, 2018, 5:35 PM IST
ಸಾಗರ: ರಾಜ್ಯದ ಹಿಂದುಳಿದ ವರ್ಗದಲ್ಲಿ ಸಿಂಪಿ ನಾಮದೇವ ಸಮಾಜ ಸಹ ಒಂದಾಗಿದೆ. ಆದರೆ ಸಾಗರದಲ್ಲಿ ಸಣ್ಣ ಜನಸಂಖ್ಯೆ ಹೊಂದಿರುವ ಸಿಂಪಿ ಸಮಾಜ ಅತ್ಯಂತ ಶಿಸ್ತುಬದ್ಧ ಜೀವನ ನಡೆಸುತ್ತಿದೆ ಎಂದು ಶಾಸಕ ಹರತಾಳು ಹಾಲಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಅಶೋಕ ರಸ್ತೆಯಲ್ಲಿರುವ ಹರಿಮಂದಿರದಲ್ಲಿ ಬುಧವಾರ ನಾಮದೇವ ಸಿಂಪಿ ಸಮಾಜದ ವತಿಯಿಂದ ನೀಡಲಾದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಿಂಪಿ ಸಮಾಜ ಹಿಂದಿನಿಂದಲೂ ಬಿಜೆಪಿಯನ್ನು ಬೆಂಬಲಿಸಿಕೊಂಡು ಬಂದಿದ್ದು, ಈ ಬಾರಿ ಸಹ ಅದನ್ನು ಮುಂದುವರಿಸಿದೆ. ಈ ಹಿನ್ನೆಲೆಯಲ್ಲಿ ನೀವು ಅಭಿನಂದಿಸುವುದಕ್ಕಿಂತ ನಾನು ನಿಮ್ಮನ್ನು ಅಭಿನಂದಿಸುವುದೇ ಸೂಕ್ತ ಎಂದು ಹೇಳಿದರು. ರಾಜ್ಯದಲ್ಲಿ ಹಿಂದುಳಿದ ಸಮಾಜ ದೊಡ್ಡ ಪ್ರಮಾಣದಲ್ಲಿದೆ. ತಾಲೂಕಿನಲ್ಲಿ ಸಹ ಹಿಂದುಳಿದ ಸಮಾಜದ ಬಹುಸಂಖ್ಯಾತರು ಎನಿಸಿಕೊಂಡವರು ಸರ್ಕಾರದ ಬಹುತೇಕ ಸೌಲಭ್ಯಗಳನ್ನು ತಮ್ಮದಾಗಿಸಿಕೊಂಡು ಬಿಡುತ್ತಾರೆ. ಆದರೆ ನನ್ನ ಅವ ಧಿಯಲ್ಲಿ
ಅಂತಹ ಅಚಾತುರ್ಯ ನಡೆಯಲು ಅವಕಾಶ ಕೊಡುವುದಿಲ್ಲ. ಎಲ್ಲ ಜನಾಂಗಕ್ಕೂ ಸರ್ಕಾರದ ಯೋಜನೆ ಸಮಪ್ರಮಾಣದಲ್ಲಿ ಹಂಚಿಕೆಯಾಗುವಂತೆ ನಿಗಾ ವಹಿಸಲಾಗುತ್ತದೆ. ಜೊತೆಗೆ ಸಮುದಾಯ ಭವನ ನಿರ್ಮಾಣ ಮಾಡುವ ನಿಮ್ಮ ಆಶಯಕ್ಕೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ನಾಮದೇವ ಸಿಂಪಿ ಸಮಾಜದ ಅಧ್ಯಕ್ಷ ಕಾಶಿನಾಥ ಚೌಧರಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸದಸ್ಯ ಸಂತೋಷ್ ಆರ್. ಶೇಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ. ಮೇಘರಾಜ್, ಕಾರ್ಯದರ್ಶಿ ಚೇತನರಾಜ್ ಕಣ್ಣೂರು, ಕೃಷ್ಣಮೂರ್ತಿ ಬೆನ್ನೂರು ಇದ್ದರು. ಗಣೇಶ್ ಚೌಧರಿ ಸ್ವಾಗತಿಸಿದರು. ದಿಲೀಪ್ ಚೌಧರಿ ವಂದಿಸಿದರು. ಪವನ್
ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ