ಗಾಜನೂರು ಜಲಾಶಯ ಭರ್ತಿ
Team Udayavani, Jun 11, 2018, 3:30 PM IST
ಶಿವಮೊಗ್ಗ: ಜಿಲ್ಲಾದ್ಯಂತ ಮಳೆ ಆರ್ಭಟ ಜೋರಾಗಿದೆ. ತುಂಗಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ಭಾನುವಾರ ಜಲಾಶಯದ ಒಟ್ಟು 22 ಕ್ರೆಸ್ಟ್ಗೇಟ್ ಪೈಕಿ 10 ಕ್ರೆಸ್ಟ್ಗೇಟ್ ತೆರೆದು ಸುಮಾರು 13 ಸಾವಿರ ಕ್ಯೂಸೆಕ್ನಷ್ಟು ನೀರನ್ನು ನದಿಗೆ ಹರಿಸಲಾಗುತ್ತಿದ್ದು, ತುಂಗೆಗೆ ಜೀವಕಳೆ ಬಂದಿದೆ.
ತುಂಗಾ ಜಲಾನಯನ ಪ್ರದೇಶ ವ್ಯಾಪ್ತಿಯ ತೀರ್ಥಹಳ್ಳಿ ತಾಲೂಕು, ಶೃಂಗೇರಿ, ಕೊಪ್ಪ ಮೊದಲಾದ ಕಡೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಯ ನೀರಿನ ಮಟ್ಟ ಹೆಚ್ಚಿದೆ. ಜಲಾಶಯದ ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯದ 10 ಗೇಟ್ಗಳನ್ನು ತೆರೆದು ನೀರನ್ನು ನದಿಗೆ ಬಿಡಲಾಗುತ್ತಿದೆ. ಗಾಜನೂರು ತುಂಗಾ ಜಲಾಶಯದಲ್ಲಿ 3.24 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಹೆಚ್ಚುವರಿ ಹರಿದುಬರುತ್ತಿರುವ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಇದೀಗ 13 ಸಾವಿರ ಕ್ಯೂಸೆಕ್ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ.
ಜಲಾಶಯದಿಂದ ನೀರು ಹೊರಬಿಟ್ಟಿದ್ದರಿಂದ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ತುಂಗಾ ನದಿ ಜೀವಕಳೆ ಪಡೆದುಕೊಂಡಿದೆ. ಗೇಟ್ ತೆರೆದು ನೀರು ಹರಿಬಿಟ್ಟಿದ್ದರಿಂದ ನದಿ ಪಾತ್ರದಲ್ಲಿನ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ತುಂಬಿ ಹರಿಯುತ್ತಿರುವ ನದಿ ಹಾಗೂ ಜಲಾಶಯ ವೀಕ್ಷಿಸಲು ಜನ ಗಾಜನೂರಿಗೆ ಆಗಮಿಸತೊಡಗಿದ್ದಾರೆ. ಜಲಾಶಯದ ಗೇಟ್ ಮೂಲಕ ಹಾಲಿನಂತೆ ಭೋರ್ಗರೆಯುತ್ತಿರುವ ಜಲರಾಶಿಯನ್ನು ಕಣ್ತುಂಬಿಕೊಳ್ಳಲು ಹೆಚ್ಚಿನ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ.
ಒಳಹರಿವು ಹೆಚ್ಚಳ: ಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳವಾಗಿದೆ.
7908 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಜಲಾಶಯದ ನೀರಿನ ಮಟ್ಟ ಭಾನುವಾರ ಬೆಳಗ್ಗೆಗೆ ಕೊನೆಗೊಂಡಂತೆ 115.9 ಅಡಿಗೆ ತಲುಪಿದೆ. ಇನ್ನೊಂದೆಡೆ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲೂ ವ್ಯಾಪಕ ಮಳೆ ಸುರಿಯುತ್ತಿದ್ದು, ಶರಾವತಿ ನದಿ ಹರಿವಿನ ಪ್ರಮಾಣದಲ್ಲೂ ಏರಿಕೆಯಾಗಿದೆ. 9384 ಕ್ಯುಸೆಕ್ ಒಳಹರಿವಿದ್ದು, ಜಲಾಶಯದ ಮಟ್ಟ 1753.05 ಅಡಿ ತಲುಪಿದೆ.
ಪಕ್ಷಿಧಾಮಕ್ಕೆ ಕಂಟಕ: ತುಂಗಾ ನದಿಯಲ್ಲಿ ಹರಿವಿನ ಪ್ರಮಾಣ ಒಂದೇ ಸಮನೆ ಏರಿಕೆಯಾಗುತ್ತಿದ್ದು, ಪ್ರತಿವರ್ಷದಂತೆ
ಸಂತಾನಾಭಿವೃದ್ಧಿಗಾಗಿ ವಿದೇಶಗಳಿಂದ ವಲಸೆ ಬಂದಿರುವ ಬಾನಾಡಿಗಳಿಗೆ ಸಂಕಷ್ಟ ಎದುರಾಗಿದೆ.
ಪ್ರತಿ ಬಾರಿ ತುಂಗಾ ಜಲಾಶಯ ಭರ್ತಿಯಾದಾಗಲೂ ತುಂಗಾ ಜಲಾಶಯದ ಹಿನ್ನೀರಿನಲ್ಲಿ ಗೂಡು ಕಟ್ಟಿಕೊಂಡಿರುವ ವಿದೇಶಿ ಪಕ್ಷಿಗಳು ಅಸಂಖ್ಯ ಸಂಖ್ಯೆಯಲ್ಲಿ ನೀರು ಪಾಲಾಗುತ್ತವೆ. ಈ ಬಾರಿಯೂ ಜಲಾಶಯದ ಹಿನ್ನೀರಿನಲ್ಲಿ ಪಕ್ಷಿಗಳು ಮೂಕರೋಧನೆ ಅನುಭವಿಸುತ್ತಿವೆ.
ಧಾರಾಕಾರ ಮಳೆ
ಜಿಲ್ಲಾದ್ಯಂತ ಮುಂಗಾರು ಆರ್ಭಟ ಜೋರಾಗಿದೆ. ಭಾನುವಾರ ಹೊಸನಗರ, ಸಾಗರ, ರಿಪ್ಪನ್ಪೇಟೆ, ತೀರ್ಥಹಳ್ಳಿ ತಾಲೂಕು, ಶರಾವತಿ ಕಣಿವೆ ಪ್ರದೇಶ ಸೇರಿದಂತೆ ಹಲವೆಡೆ ಮಳೆ ಮುಂದುವರಿದಿದೆ. ರಿಪ್ಪನ್ಪೇಟೆ, ಹುಂಚಾ, ಗರ್ತಿಕೆರೆ, ಕೆಂಚನಾಲ, ಅರಸಾಳು, ಚಿನ್ಮನೆ ಭಾಗದಲ್ಲೂ ಉತ್ತಮ ಮಳೆಯಾಗಿದೆ. ಮಳೆಯಿಂದಾಗಿ ಯಾವುದೇ ಅನಾಹುತ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಶಿವಮೊಗ್ಗ ನಗದಲ್ಲಿ ಭಾನುವಾರ ಜಿಟಿ ಜಿಟಿ ಮಳೆ ಮುಂದುವರಿದಿದೆ. ತಾಲೂಕಿನ ಗ್ರಾಮೀಣ ಭಾಗದಲ್ಲೂ ಸಾಧಾರಣ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ
MUST WATCH
ಹೊಸ ಸೇರ್ಪಡೆ
Karnataka MLA ಎಚ್.ಡಿ.ರೇವಣ್ಣ ಬಂಧನ: ಸ್ಪೀಕರ್ಗಿಲ್ಲ ಇನ್ನೂ ಮಾಹಿತಿ
Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ