ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ
Team Udayavani, Jun 12, 2018, 4:13 PM IST
ಶಿವಮೊಗ್ಗ: ನ್ಯಾ| ಸದಾಶಿವ ಆಯೋಗ ಸಲ್ಲಿಸಿರುವ ವರದಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಮಾದಿಗ ದಂಡೋರ ಸಂಘಟನೆ ವತಿಯಿಂದ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಸುಮಾರು 1.8 ಕೋಟಿ ಜನಸಂಖ್ಯೆಯನ್ನು ಸಮುದಾಯ ಹೊಂದಿದೆ. ದೇಶದ ಮೂಲ ನಿವಾಸಿಗಳಾದ ಅಸ್ಪೃಶ್ಯ ವರ್ಗಗಳಿಗೆ ಸೇರಿದ ಮಾದಿಗ ಮತ್ತು ಉಪ ಜಾತಿಗಳಿಗೆ ಇಂದೂ ಸಹ ಸ್ವಾತಂತ್ರ ದೊರಕದಿರುವುದು ದುರದೃಷ್ಟಕರ ಎಂದು ಹೇಳಿದರು.
ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಈ ವರ್ಗಗಳು ಮೂಲಭೂತ ಹಕ್ಕುಗಳಿಗಾಗಿ ಹೋರಾಟ ಮಾಡುವ ದುಸ್ಥಿತಿ ಮುಂದುವರಿದಿದೆ. ಸಾಮಾಜಿಕ ಸೌಲಭ್ಯಗಳಿಂದ ವಂಚಿತರಾಗಿರುವ ಸಮುದಾಯದವರು ಸಮಾಜದ
ಮುಖ್ಯವಾಹಿನಿಯಿಂದ ಬಹುದೂರ ಉಳಿದಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸುಮಾರು 30 ವರ್ಷಗಳಿಂದ ಒಳ ಮೀಸಲಾತಿಗಾಗಿ ಹೋರಾಟ ಮಾಡುತ್ತಾ ಬಂದಿರುವುದು ಸರಿಯಷ್ಟೆ. ಆದರೆ ಸರ್ಕಾರಗಳು ಇತ್ತ ಗಮನಹರಿಸುತ್ತಿಲ್ಲ. ಮಾದಿಗ ಜನಾಂಗಕ್ಕೆ ಸೇರಿದ ರೂಪ ಶಶಿಧರ್, ಧರ್ಮಸೇನಾ, ತಿಮ್ಮಾಪುರ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ಆದರೆ ರಾಜ್ಯ ಸಮ್ಮಿಶ್ರ ಸಕಾರರದ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಿಲ್ಲ. ಇದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ದೂರಿದರು.
ಕೂಡಲೇ ಸಂಪುಟದಲ್ಲಿ ಮಾದಿಗರಿಗೆ ಪ್ರಾತಿನಿದ್ಯ ನೀಡಬೇಕು. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು. ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿಗೆ ಪ್ರಥಮ ಆದ್ಯತೆ ನೀಡಬೇಕು. ರೈತ ಸಾಲ ಮನ್ನಾ ಮಾಡಿದ ಹಾಗೆ ದಲಿತರ ವಿವಿಧ ಸಾಲ ಮನ್ನಾ ಮಾಡಬೇಕು. ಜಿಲ್ಲೆಯ ಎಲ್ಲ ಗ್ರಾಮಗಳಲ್ಲೂ ರುದ್ರಭೂಮಿ ಒದಗಿಸಬೇಕು.
ಡಾ| ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಪಡೆದಿರುವ ಸಾಲ ಮನ್ನಾ ಮಾಡಿ ನೇರ ಸಾಲ ಕೊಡಿಸಬೇಕೆಂದು ಆಗ್ರಹಿಸಿದರು. ಮೂರ್ತಿ, ಪ್ರಭು, ಹಾಲೇಶ್, ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ