ಸ್ವಸ್ಥ ಜೀವನಕ್ಕೆ ಯೋಗ ಸಹಕಾರಿ


Team Udayavani, Jun 22, 2018, 12:41 PM IST

shivamoga-1.jpg

ಶಿವಮೊಗ್ಗ: ಸ್ವಸ್ಥ ಜೀವನ ಹೊಂದಲು ಯೋಗ ಸಹಕಾರಿ ಎಂದು ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಜಿಲ್ಲಾಡಳಿತ, ಜಿಪಂ, ಆಯುಷ್‌ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಯೋಗ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಯೋಗ ದೇಶದ ನಾಗರಿಕರಲ್ಲಿ ಸಹೋದರತ್ವ ಮೂಡಿಸಿ ಸಹಬಾಳ್ವೆಯಿಂದ ಒಂದಾಗಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.

ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ಸೇರಿದಂತೆ ದೇಶದ ಅನೇಕ ಗಣ್ಯರು ಭಾಗಿಯಾಗುತ್ತಿದ್ದಾರೆ. ವಿಶೇಷವೆಂದರೆ ಡೆಹ್ರಾಡೂನ್‌ ನಲ್ಲಿ 55,000ಕ್ಕೂ ಹೆಚ್ಚು ಮಂದಿ ಏಕಕಾಲದಲ್ಲಿ ಯೋಗ ಮಾಡಿ ದಾಖಲೆ ಬರೆಯುತ್ತಿರುವುದು ಹರ್ಷದ ಸಂಗತಿ ಎಂದರು.

ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಹಲವು ಧರ್ಮಗಳ ಪ್ರತಿನಿಧಿಗಳು ಭಾಗಿಯಾಗಿ, ಬ್ರಾತೃತ್ವದ ಮನೋಭಾವನೆಯಿಂದ ಭಾಗಿಗಳಾಗುತ್ತಿರುವುದು ಭಾರತೀಯರೆಲ್ಲರಲ್ಲೂ ಸಂತಸ ತಂದಿದೆ. ಈ ಹರ್ಷಕ್ಕೆ ನಮ್ಮ ದೇಶ ಭಾಜನವಾಗಿರುವುದು ಮತ್ತಷ್ಟು ಸಂಭ್ರಮ ತಂದಿದೆ ಎಂದು ಹೇಳಿದರು.

ಅಸಂಖ್ಯಾತ ಜನರು ಯೋಗ ಕಲಿತು ದುಶ್ಚಟಗಳಿಂದ ದೂರಾಗಿ, ತಮ್ಮ ಜೀವನ ಶೈಲಿ ಬದಲಾಯಿಸಿಕೊಂಡಿದ್ದಾರೆ. ಇದರಿಂದಾಗಿ ಭಾರತದ ವೈಶಿಷ್ಟ ವಿಶ್ವಕ್ಕೆ ಪರಿಚಯವಾಗಿದೆ. ಶಾಂತಿ ನೆಮ್ಮದಿ ತರುವ ಯೋಗ ಜನರಲ್ಲಿ ಶಾರೀರಿಕ ಮತ್ತು ಮಾನಸಿಕ ನೆಮ್ಮದಿ ಸೃಜಿಸಲು ಪ್ರೇರಕ ಶಕ್ತಿಯಾಗಿದೆ ಎಂದು ಹೇಳಿದರು. ಯೋಗದಿಂದ ಮನಸ್ಸು-ದೇಹದ ಆಲಸ್ಯ ದೂರಾಗುವುದು. ಯೋಗದಿಂದ ರೋಗದ ಭಯವಿಲ್ಲ. ಯಾವುದೇ ಅಡ್ಡಪರಿಣಾಮಗಳಿಲ್ಲದೇ ರೋಗಗಳನ್ನು ದೂರ ಮಾಡುವ, ದೇಹಕ್ಕೆ ನವ ಚೈತನ್ಯವನ್ನು ನೀಡುವ ಶಕ್ತಿ ಮತ್ತು ಪ್ರಭಾವಶಾಲಿ ಸಹಜ ಚಿಕಿತ್ಸೆ ಯೋಗ ಎಂದರು.

ಗ್ರಾಮಾಂತರ  ಕ್ಷೇತ್ರದ ಶಾಸಕ ಕೆ.ಬಿ. ಅಶೋಕನಾಯ್ಕ ಮಾತನಾಡಿ, ಯೋಗದಿಂದ ಮಾನವ ಸಹಜವಾದ ಸ್ನೇಹ, ಪ್ರೀತಿ, ಶಾಂತಿ, ನಿಸ್ವಾರ್ಥ ಸೇವಾ ಮನೋಭಾವ, ವಿಶ್ವಬ್ರಾತೃತ್ವದ ಶ್ರೇಷ್ಠಭಾವನೆ ಬೆಳೆದು ಬರುತ್ತದೆ. ಸುಖ-ಶಾಂತಿ-ಸಮೃದ್ಧಿ ಹಾಗೂ ಆರೋಗ್ಯವಂತ ವ್ಯಕ್ತಿ, ಸಮಾಜ ಮತ್ತು ವಿಶ್ವದ ನಿರ್ಮಾಣಕ್ಕೆ ಯೋಗಶಕ್ತಿ ಭದ್ರಬುನಾದಿಯಾಗಲಿದೆ.

ದೇಹದ ಆಂತರಿಕ ಭಾಗಗಳನ್ನು ಯೋಗದಿಂದ ನಿಯಂತ್ರಿಸಬಹುದಾಗಿದೆ ಎಂದರು. ಕಾರ್ಯಕ್ರಮಕ್ಕೆ ಮುನ್ನ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಂದ ಯೋಗ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನಂತರ ಸಾರ್ವಜನಿಕರಲ್ಲಿ ಯೋಗದ ಅರಿವು ಮೂಡಿಸಲು ಜಾಥಾ ಏರ್ಪಡಿಸಲಾಗಿತ್ತು.

ಜಾಥಾದಲ್ಲಿ ಆಯುರ್ವೇದ ವೈದ್ಯರು, ಸಿಬ್ಬಂದಿಗಳು, ವಿವಿಧ ಆಯುರ್ವೇದ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು,
ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿವಿಧ ಯೋಗ ಸಂಘ-ಸಂಸ್ಥೆಗಳ ಯೋಗಪಟುಗಳು
ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಜಿಪಂ ಉಪ ಕಾರ್ಯದರ್ಶಿ ಎ.ಎಸ್‌. ಮಣಿ, ಡಾ| ರಂಗಸ್ವಾಮಿ, ಉದ್ಯಮಿ ಡಿ.ಎಸ್‌. ಅರುಣ್‌, ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ್‌, ಆಯುಷ್‌ ಅಧಿಕಾರಿ ಡಾ| ಹರ್ಷಪುತ್ರಾಯ ಇದ್ದರು.

ಟಾಪ್ ನ್ಯೂಸ್

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.