ಪದವಿ ಶುಲ್ಕ ಹೆಚ್ಚಳಕ್ಕೆ ವಿರೋಧ
Team Udayavani, Jun 29, 2018, 5:51 PM IST
ಶಿವಮೊಗ್ಗ: ಪದವಿ ಶಿಕ್ಷಣಕ್ಕೆ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಗುರುವಾರ ಸಹ್ಯಾದ್ರಿ ಕಾಲೇಜಿನ ವಾಣಿಜ್ಯ ವಿಭಾಗದ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕುವೆಂಪು ವಿವಿ ನಿಯಮದ ಪ್ರಕಾರ ಯಾವುದೇ ಕಾಲೇಜಿನ ಶುಲ್ಕವನ್ನು ಶೇ. 25ಕ್ಕಿಂತ ಅಧಿಕವಾಗಿ ಹೆಚ್ಚಿಸುವಂತಿಲ್ಲ. ಆದರೆ 2018-19ನೇ ಸಾಲಿನ ಪ್ರಥಮ ಬಿಕಾಂ ಪ್ರವೇಶಕ್ಕೆ 7 ಸಾವಿರ ರೂ. ನಿಗಧಿ ಪಡಿಸಲಾಗಿದೆ. ಕಳೆದ ಬಾರಿ 4 ಸಾವಿರ ರೂ. ಶುಲ್ಕ ಇತ್ತು. ಇದೀಗ ಏಕಾಏಕಿ 3 ಸಾವಿರ ರೂ.ನಷ್ಟು ಶುಲ್ಕ ಹೆಚ್ಚಳ ಮಾಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕುವೆಂಪು ವಿವಿ ಘಟಕ ಕಾಲೇಜು ಆದ ಸಹ್ಯಾದ್ರಿ ವಾಣಿಜ್ಯ ಕಾಲೇಜಿನಲ್ಲಿ ಶೇ. 75ರಷ್ಟು ಶುಲ್ಕ ಹೆಚ್ಚಿಸಲಾಗಿದೆ. ಗ್ರಾಮೀಣ ಹಾಗೂ ಬಡ ವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕ ಸಮಸ್ಯೆಯಾಗುತ್ತದೆ. ಶುಲ್ಕ ಹೆಚ್ಚಳ ಮರುಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಹೆಚ್ಚಳ ಶುಲ್ಕ ವಸೂಲಿ ಮಾಡಿದ್ದರೆ ವಿದ್ಯಾರ್ಥಿಗಳಿಗೆ ಹಣ ಹಿಂದಿರುಗಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಚಿನ್ ರಾಯ್ಕರ್, ಅಭಿಷೇಕ್, ಮಂಜುನಾಥ್, ಮಲ್ಲಿಕಾರ್ಜುನ್, ತಿಲಕ್, ಕಿರಣ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ
ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ
B.Y. Raghavendra: ಇಂಟರ್ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್ ಮತಬೇಟೆ
Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ